Asianet Suvarna News Asianet Suvarna News

Lok Sabha Election 2024: ಸಂಗಣ್ಣ ಕರಡಿ ಜೊತೆ ಬಿಎಸ್‌ವೈ, ವಿಜಯೇಂದ್ರ ಮತ್ತೆ ಚರ್ಚೆ!

ಸಂಸದ ಸಂಗಣ್ಣ ಕರಡಿ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಎರಡನೇ ಸುತ್ತಿನಲ್ಲಿ ನಡೆಸಿದ ಮಾತುಕತೆ ಸ್ಪಷ್ಟ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿದೆ ಎನ್ನಲಾಗಿದೆ.

Lok Sabha Election 2024 BS Yediyurappa BY Vijayendra again discuss with Sanganna Karadi gvd
Author
First Published Mar 31, 2024, 5:04 AM IST

ಕೊಪ್ಪಳ (ಮಾ.31): ಸಂಸದ ಸಂಗಣ್ಣ ಕರಡಿ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಎರಡನೇ ಸುತ್ತಿನಲ್ಲಿ ನಡೆಸಿದ ಮಾತುಕತೆ ಸ್ಪಷ್ಟ ನಿರ್ಧಾರಕ್ಕೆ ಬರುವಲ್ಲಿ ವಿಫಲವಾಗಿದೆ ಎನ್ನಲಾಗಿದೆ. ಸಂಧಾನ ಸಫಲವಾಗಿದ್ದು, ಇನ್ನೆರಡು ದಿನದಲ್ಲಿ ಕರಡಿ ಪ್ರಚಾರಕ್ಕೆ ಬರಲಿದ್ದಾರೆ ಎನ್ನುತ್ತಾರೆ ಬಿಜೆಪಿಯ ಕೊಪ್ಪಳ ಜಿಲ್ಲಾ ನಾಯಕರು. ಆದರೆ, ಸಭೆಯಲ್ಲಿ ನಡೆದ ಮಾತುಕತೆಯ ವೇಳೆ ಸಂಗಣ್ಣ, ಇಷ್ಟು ದಿನ ಕಾದರೂ ಸಹ ನನ್ನ ಪ್ರಶ್ನೆಗಳಿಗೆ ಉತ್ತರವನ್ನೇ ನೀಡಿಲ್ಲವಲ್ಲ ಎಂದು ಕಿಡಿಕಾರಿದ್ದಾರೆ. 

ನನಗೆ ಟಿಕೆಟ್ ತಪ್ಪಲು ಯಾರು ಕಾರಣ ಎನ್ನುವುದನ್ನಾದರೂ ಯಾಕೆ ಹೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಮಾತುಕತೆಯಲ್ಲಿ ಇನ್ನೆರಡು ದಿನಗಳಲ್ಲಿ ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಚರ್ಚೆ ಮಾಡಿ, ಸಮಸ್ಯೆಯನ್ನು ಇತ್ಯರ್ಥ ಮಾಡುವ ಭರವಸೆ ಸಂಗಣ್ಣ ಕರಡಿ ಅವರಿಗೆ ಸಿಕ್ಕಿದೆ ಎನ್ನಲಾಗಿದೆ. ಹೀಗಾಗಿ, ಕರಡಿ ಈಗಲೂ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರಕ್ಕೆ ಹೋಗುವ ಸಾಧ್ಯತೆ ತೀರಾ ಕಡಿಮೆಯಾಗಿದೆ.

ಸಂಗಣ್ಣ ಈ ಕುರಿತು ಮಾಧ್ಯಮಕ್ಕೆ ಯಾವುದೇ ಹೇಳಿಕೆ ನೀಡಿಲ್ಲ ಮತ್ತು ಕರೆಯನ್ನು ಸ್ವೀಕಾರ ಮಾಡಿಲ್ಲ, ಹೀಗಾಗಿ, ಅವರ ನಡೆ ಇನ್ನೂ ನಿಗೂಢ ಎಂದೇ ಹೇಳಲಾಗುತ್ತದೆ. ಸಂಧಾನದ ವೇಳೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ, ಮಾಜಿ ಶಾಸಕ ಬಸವರಾಜ ದಢೇಸ್ಗೂರು ಮೊದಲಾದವರು ಇದ್ದರು.

ಸಿಎಂ ಸಿದ್ದರಾಮಯ್ಯ ತವರಲ್ಲಿ ಬಿಜೆಪಿ ಅತೃಪ್ತಿಗೆ ಮದ್ದರೆದ ಬಿ.ವೈ.ವಿಜಯೇಂದ್ರ!

ಟಿಕೆಟ್ ವಂಚಿತವಾಗಿರುವ ಸಂಸದ ಸಂಗಣ್ಣ ಕರಡಿ ಅವರೊಂದಿಗೆ ಪಕ್ಷದ ಹೈಕಮಾಂಡ್ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.
-ನವೀನ್ ಗುಳಗಣ್ಣವರ ಬಿಜೆಪಿ ಜಿಲ್ಲಾಧ್ಯಕ್ಷ

Follow Us:
Download App:
  • android
  • ios