Asianet Suvarna News Asianet Suvarna News

ಸಿಎಂಗೆ ಗಂಡಸ್ತನ ಅನ್ನೋದು ಇದ್ರೆ ರಾಮನಗರ ಎಂಎಲ್ಎ ವಿರುದ್ಧ ಕ್ರಮ ಕೈಗೊಳ್ಳಲಿ: ಅರವಿಂದ ಬೆಲ್ಲದ್ ಕಿಡಿ

ರಾಜ್ಯದಲ್ಲಿ ಮುಸ್ಲಿಮರು ಏನು ಮಾಡಿದರೂ ಮಾಫಿ ಮಾಡುತ್ತಾರೆ. ರಾಮನಗರ ಎಂಎಲ್ಎ ಮುಸ್ಲಿಂ ಅಲ್ವಾ. ಅದು ಸಹ ಮಾಫಿ ಮಾಡ್ತಾರೆ ಎಂದು ವಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

Lok sabha election 2024 in Karnataka Arvind bellad outraged against cm siddaramiah at davanagere rav
Author
First Published May 2, 2024, 1:23 PM IST

ದಾವಣಗೆರೆ (ಮೇ.2): ರಾಜ್ಯದಲ್ಲಿ ಮುಸ್ಲಿಮರು ಏನು ಮಾಡಿದರೂ ಮಾಫಿ ಮಾಡುತ್ತಾರೆ. ರಾಮನಗರ ಎಂಎಲ್ಎ ಮುಸ್ಲಿಂ ಅಲ್ವಾ. ಅದು ಸಹ ಮಾಫಿ ಮಾಡ್ತಾರೆ ಎಂದು ವಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಎಂಎಲ್ಎ ಅವರಿಂದಾಗಿ ಇಷ್ಟೆಲ್ಲಾ ಆದರೂ ಯಾಕೆ ಕ್ರಮ ಕೈಗೊಂಡಿಲ್ಲ? ಸಿದ್ದರಾಮಯ್ಯನಿಗೆ ಗಂಡಸ್ಥನ ಇದ್ದರೆ, ಮೊದಲು ಆಕ್ಷನ್ ತೆಗೆದುಕೊಳ್ಳಲಿ. ಇಷ್ಟೆಲ್ಲಾ ಆದರೂ ಆಕ್ಷನ್ ತಗೊಳ್ಳೋದಿಲ್ಲ, ಯಾಕ್ ಹೇಳ್ರೀ? ಅವ್ರು ಮುಸ್ಲಿಮರಲ್ವಾ ಅದಕ್ಕೆ. ಪ್ರಜ್ವಲ್ ರೇವಣ್ಣ ಪ್ರಕರಣ(Prajwal Revanna sex video case)ದಲ್ಲಿ ಬಿಜೆಪಿ-ಕಾಂಗ್ರೆಸ್ ಅಂತೆಲ್ಲಾ ಬರುವುದಿಲ್ಲ. ಅದು ಮಹಿಳೆಯರ ಮರ್ಯಾದೆಯ ಪ್ರಶ್ನೆಯಾಗಿದೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ; ತನಿಖೆಗೆ ಯಾರೂ ಅಡ್ಡಿಪಡಿಸಿಲ್ಲ ಸರ್ಕಾರ ಮೊದಲು ಕೆಲಸ ಮಾಡಿ ತೋರಿಸಲಿ; ಅಣ್ಣಾಮಲೈ ಚಾಟಿ

ಪ್ರಕರಣ ತನಿಖೆ ನಡೆಸುವಂತೆ ಸ್ವತಃ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit shah) ಹೇಳಿದ್ದಾರೆ. ಆದರೂ, ಕಾಂಗ್ರೆಸ್ ಸರ್ಕಾರ(Congress government) ಮಾತ್ರ ತನಿಖೆಗೆ ವಿಳಂಬ ಮಾಡುತ್ತಿದೆ. ಈ ಬಗ್ಗೆ ಜನರಿಗೆ ಸಿದ್ದರಾಮಯ್ಯ ಸರ್ಕಾರ ಉತ್ತರ ಕೊಡಬೇಕು. ಯಾರ ಜೊತೆಗೆ ನೀವು ಅಡ್ಜೆಸ್ಟ್‌ಮೆಂಟ್ ಮಾಡಿಕೊಂಡು, ತನಿಖೆಗೆ ವಿಳಂಬ ಮಾಡಿದ್ರಿ ಅಂತಾ ಹೇಳಿ. ತನಿಖೆಗೆ ರಾಜ್ಯ ಸರ್ಕಾರ ವಿಳಂಬ ಮಾಡಿದ್ದು ಏಕೆಂಬುದು ಮೊದಲು ರಾಜ್ಯದ ಜನರಿಗೆ ಗೊತ್ತಾಗಬೇಕಾಗಿದೆ ಎಂದು ಅವರು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ(Neha hiremath) ಮೃತದೇಹವನ್ನು ನಾನು ಮರಣೋತ್ತರ ಪರೀಕ್ಷೆಗಿಂತ ಮೊದಲು ನೋಡಿದೆ. ಹೀಗೆಲ್ಲಾ ಕೊಲೆ ಮಾಡಲು ಎಲ್ಲಿ ತರಬೇತಿ ನೀಡುತ್ತಾರೆಂಬ ಬಗ್ಗೆ ಮೊದಲು ಗೊತ್ತಾಗಬೇಕಿದೆ. ಜಿಹಾದಿ ಮನಸ್ಥಿತಿಯನ್ನು ಹೊಂದಿರುವವರಿಂದ ಮಾತ್ರ ಇದು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜ್ವಲ್ ಮೇಲೆ ಎಫ್‌ಐಆರ್ ದಾಖಲಿಸಲು ಸಿಎಂ ವಿಳಂಬ ಮಾಡಿದ್ದು ಏಕೆ? ಪ್ರಲ್ಹಾದ್ ಜೋಶಿ ಕಿಡಿ

ಹಿಂದು ಯುವತಿಯರು, ಮಹಿಳೆಯರ ಜೊತೆಗೆ ಫೋಟೋ ತೆಗೆಸಿಕೊಂಡು, ಬ್ಲಾಕ್ ಮೇಲ್ ಮಾಡುವುದು, ಮತಾಂತರ ಆಗುವಂತೆ ಹೆದರಿಸುವುದು, ಅದಕ್ಕೆಲ್ಲಾ ಒಪ್ಪದೇ ಇದ್ದಾಗ ಕೊಲೆ ಮಾಡುವುದಾಗುತ್ತಿದೆ. ಈ ರೀತಿ ಕೊಲೆ ಮಾಡುವ ಜಿಹಾದಿಗಳಿಗೆ ತರಬೇತಿ ನೀಡುತ್ತಿದ್ದಾರೆ. ನೇಹಾ ಹತ್ಯೆ ಪ್ರಕರಣ‍ ಸಿಓಡಿಗೆ ಒಪ್ಪಿಸಲಾಗಿದೆ ಎಂದು ಅವರು ಹೇಳಿದರು.

ಸಿಒಡಿ ಮೇಲೆಲ್ಲಾ ನಮಗೆ ನಂಬಿಕೆ ಇಲ್ಲ. ಪೊಲೀಸ್ ಇಲಾಖೆಯಲ್ಲಿ ಬೇಡವಾದವರನ್ನು ಸಿಒಡಿಗೆ ಹಾಕಿರ್ತಾರೆ. ಅಂಥವರ ತನಿಖೆ ನಾವು ಒಪ್ಪುವುದಿಲ್ಲ. ನ್ಯಾಯವನ್ನೂ ನಿರೀಕ್ಷೆ ಮಾಡುವುದಿಲ್ಲ. ಸಿಬಿಐ ಸೇರಿದಂತೆ ವಿವಿಧ ಅತ್ಯುನ್ನತ ತನಿಖಾ ಸಂಸ್ಥೆಗಳಿಗೆ ಪ್ರಕರಣದ ತನಿಖೆಯನ್ನು ಒಪ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಅರವಿಂದ ಬೆಲ್ಲದ್ ಒತ್ತಾಯಿಸಿದರು.

Follow Us:
Download App:
  • android
  • ios