Asianet Suvarna News Asianet Suvarna News

ಲೋಕಸಭಾ ಚುನಾವಣೆ ಹಿನ್ನೆಲೆ: ಮಾಗಡಿ ವಿಧಾ​ನ​ಸಭಾ ಕ್ಷೇತ್ರ​ದಲ್ಲಿ ಆಪ​ರೇ​ಷನ್‌ ಹಸ್ತ!

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆ​ಲೆ​ಯಲ್ಲಿ ಕಾಂಗ್ರೆಸ್‌ ಪಕ್ಷ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್‌ ಹ​ಸ್ತಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ ಜೆಡಿಎಸ್‌ನ ಪ್ರಮುಖ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕುವ ಮೂಲಕ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ತಯಾರಿ ನಡೆ​ಸಿದೆ. 

Lok Sabha Election Operation Congress in Magadi Assembly Constituency gvd
Author
First Published Aug 4, 2023, 7:08 PM IST

ಎಚ್‌.ಆರ್‌.ಮಾ​ದೇಶ್‌

ಮಾಗಡಿ (ಆ.04): ಮುಂಬರುವ ಲೋಕಸಭಾ ಚುನಾವಣೆ ಹಿನ್ನೆ​ಲೆ​ಯಲ್ಲಿ ಕಾಂಗ್ರೆಸ್‌ ಪಕ್ಷ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಪರೇಷನ್‌ ಹ​ಸ್ತಕ್ಕೆ ಸಿದ್ಧವಾಗುತ್ತಿದೆ. ಈಗಾಗಲೇ ಜೆಡಿಎಸ್‌ನ ಪ್ರಮುಖ ನಾಯಕರಿಗೆ ಕಾಂಗ್ರೆಸ್‌ ಗಾಳ ಹಾಕುವ ಮೂಲಕ ಜೆಡಿಎಸ್‌ಗೆ ಮತ್ತೊಂದು ದೊಡ್ಡ ಹೊಡೆತ ನೀಡಲು ತಯಾರಿ ನಡೆ​ಸಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಂಸದ ಡಿ.ಕೆ. ಸುರೇಶ್‌ ರಾಮನಗರ ಮತ್ತು ಮಾಗಡಿ ಕ್ಷೇತ್ರ​ಗ​ಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾದರು. 

ಈಗ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಅವರು, ಮಾಗಡಿಯಲ್ಲಿನ ಜೆಡಿಎಸ್‌ ಪ್ರಮುಖ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆ​ಯಲು ಪ್ರಯತ್ನ ನಡೆ​ಸಿ​ದ್ದಾರೆ ಎನ್ನ​ಲಾ​ಗಿದೆ. ಜೆಡಿಎಸ್‌ ನಾಯಕರು ಬಹಿರಂಗವಾಗಿಯೇ ಕಾಂಗ್ರೆಸ್‌ ಸಂಪರ್ಕದಲ್ಲಿ ಇರುವುದು ಮಾಜಿ ಶಾಸಕ ಎ.ಮಂಜುನಾಥ್‌ ಅವರಿಗೂ ಗೊ​ತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇರುವುದರಿಂದ ನಾಯಕರು ಮುಂದಿನ ಭವಿಷ್ಯದ ಹಿನ್ನೆಲೆಯಲ್ಲಿ ಪಕ್ಷಾಂತರಕ್ಕೆ ಸಿದ್ದರಾಗುತ್ತಿ​ರು​ವುದು ಗೊತ್ತಿದ್ದರೂ ಕೂಡ ಮಂಜು​ನಾಥ್‌ ಏನು ಮಾಡದ ಸ್ಥಿತಿಯಲ್ಲಿದ್ದಾರೆ.

Dharwad: ಗೋಲ್ಡ್ ಕ್ರೌನ್ ಸಬಲೈಮ್ ಬಿಲ್ಡರ್ಸ್‌ಗೆ ದಂಡ ಮತ್ತು ಪರಿಹಾರದ ಆದೇಶ

ಸಂಸದರ ತೀರ್ಮಾನವೇ ಅಂತಿಮ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಂಸದ ಡಿ.ಕೆ. ಸುರೇಶ್‌ ತಂತ್ರದಿಂದಾಗಿ ಬಾಲಕೃಷ್ಣರವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲು ಕಾರ​ಣ. ಈಗ ಅವರ ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಜೆಡಿಎಸ್‌ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯಲು ತಂತ್ರ ಮಾಡಿದ್ದು ಇದಕ್ಕೆ ಶಾಸಕ ಬಾಲಕೃಷ್ಣ ಕೂಡ ಒಪ್ಪಿಗೆ ಕೊಟ್ಟಿದ್ದಾರೆ. ಸಂಸದರಿಗೆ ಅನುಕೂಲ ಆಗು​ವು​ದಾ​ದರೆ ಜೆಡಿಎಸ್‌ ನಾಯಕರು ನಮ್ಮ ಪಕ್ಷಕ್ಕೆ ಸೇರಲಿ ಎಂದು ಬಾಲ​ಕೃ​ಷ್ಣ​ರ​ವರು ಗ್ರೀನ್‌ ಸಿಗ್ನಲ್‌ ಕೊಟ್ಟಿರುವುದರಿಂದ ಈಗ ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನ ಪ್ರಮುಖ ನಾಯಕರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ದ​ರಾ​ಗು​ತ್ತಿ​ದ್ದಾರೆ. 

ಶಕ್ತಿ ಯೋಜನೆ ಎಫೆಕ್ಟ್: ಚಿಕ್ಕಮಗಳೂರಿನಲ್ಲಿ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತ!

ಇನ್ನೂ ಕೆಲವೇ ದಿನಗಳಲ್ಲಿ ಪ್ರಮುಖ ನಾಯಕರು ಜೆಡಿ​ಎಸ್‌ ತೊರೆ​ಯ​ಲಿ​ದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಶಾಸಕ ಎ.ಮಂಜು​ನಾಥ್‌ ತಮ್ಮ ಪಕ್ಷದ ನಾಯಕರನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ಯಾವ ತಂತ್ರ ಮಾಡುತ್ತಾರೆಂಬದು ದೊಡ್ಡ ಪ್ರಶ್ನೆಯಾಗಿದೆ. ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಈಗ ಆಪರೇಷನ್‌ ಹಸ್ತ​ದ ಮಾತುಗಳೇ ಕೇಳಿ ಬರುತ್ತಿದ್ದು ಲೋಕಸಭಾ ಚುನಾವಣೆ ವೇಳೆಗೆ ಯಾವ ಯಾವ ನಾಯಕರು ಪಕ್ಷಾಂತರ ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

Follow Us:
Download App:
  • android
  • ios