ಕಳೆದ ವಾರ ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಷಣಕ್ಕೂ ಮುನ್ನ ಖರ್ಗೆ ಸಾಹೇಬ್ರು ತಪ್ಪು ತಿಳ್ಕೊಬೇಡಿ ಎನ್ನುತ್ತಾ 'ಭಾರತ್ ಮಾತಾಕೀ ಜೈ' ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್‌ಗೆ ಗುರಿಯಾಗಿದ್ದ  ಶಾಸಕ ಲಕ್ಷ್ಮಣ್ ಸವದಿ ಇದೀಗ ಮತ್ತೆ ಭಾರತ್ ಮಾತಾಕೀ ಜೈ ಎಂದು ಘೋಷಣೆ ಮೊಳಗಿಸಿದ್ದಾರೆ.

ಬೆಳಗಾವಿ (ಏ.24): ಕಳೆದ ವಾರ ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾಷಣಕ್ಕೂ ಮುನ್ನ ಖರ್ಗೆ ಸಾಹೇಬ್ರು ತಪ್ಪು ತಿಳ್ಕೊಬೇಡಿ ಎನ್ನುತ್ತಾ 'ಭಾರತ್ ಮಾತಾಕೀ ಜೈ' ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್‌ಗೆ ಗುರಿಯಾಗಿದ್ದ ಶಾಸಕ ಲಕ್ಷ್ಮಣ್ ಸವದಿ ಇದೀಗ ಮತ್ತೆ ಭಾರತ್ ಮಾತಾಕೀ ಜೈ ಎಂದು ಘೋಷಣೆ ಮೊಳಗಿಸಿದ್ದಾರೆ.

Add Asianetnews Kannada as a Preferred SourcegooglePreferred

ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಭಾರತಮಾತೆಯ ಘೋಷಣೆ ಕೂಗುವ ಮೂಲಕ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶ ಭಕ್ತಿಯನ್ನು ಗುತ್ತಿಗೆ ತೆಗೆದುಕೊಂಡವರಂತೆ ಬಿಜೆಪಿಗರು ಭಾಷಣ ಮಾಡ್ತಾರೆ. ಈ ದೇಶ ಉಳಿಬೇಕು ಅಂದ್ರೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಅಂತಾರೆ. ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಯಾವಾಗ ಬಿಜೆಪಿ ಹುಟ್ಟಿದ್ದು ಯಾವಾಗ? 1950 ರಲ್ಲಿ ಜನ ಸಂಘ ಹುಟ್ಟಿತು ಅದು ನಂತರ ಬಿಜೆಪಿ ಆಯ್ತು. ಆದರೆ ಅದಕ್ಕಿಂತ ಮೊದಲು ಕಾಂಗ್ರೆಸ್ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿತ್ತು ಎಂದರು.

'ಖರ್ಗೆ ಸಾಹೇಬ್ರು ತಪ್ಪು ತಿಳ್ಕೊಬಾರದು' ಅಂತಾ ಹೇಳಿ ಭಾರತ್ ಮಾತಾಕೀ ಜೈ ಎಂದ ಸವದಿ!

ಮೊನ್ನೆ ಗುಲ್ಬರ್ಗಾದಲ್ಲಿ ನಡೆದ ಸಮಾವೇಶದಲ್ಲಿ ಖರ್ಗೆ, ಡಿಕೆ ಶಿವಕುಮಾರ ಮಾತಾಡ್ತಾ ಕೂತಿದ್ದರು. ಅವರ ಗಮನ ಸೆಳೆಯಲು ನಾನು ಸ್ವಲ್ಪ ಈಕಡೆ ಕೇಳಿ ಅಪಾರ್ಥ ಮಾಡ್ಕೊಬೇಡಿ ಎಂದಿದ್ದೆ. ಅದನ್ನೇ ಬಿಜೆಪಿಯವರು ಕಟ್ ಅಂಡ್ ಪೇಸ್ಟ್ ಮಾಡಿ ಟ್ರೋಲ್ ಮಾಡಿದರು. ಈ ಕೆಲಸದಲ್ಲಿ ಬಿಜೆಪಿಯವರು ನಿಸ್ಸೀಮರು. ಅಪಾರ್ಥ ಮಾಡ್ಕೋಬೇಡಿ ಎಂದಿದ್ದನ್ನ ಮಾತ್ರ ಕಟ್ ಮಾಡಿ ಮೋದಿ ಸಾಹೇಬರಿಗೆ ಕಳಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಇದೇ ವೇಳೆ ಮತ್ತೊಮ್ಮೆ ಭಾರತ್ ಮಾತಾಕೀ ಜೈ ಎಂದ ಲಕ್ಷ್ಮಣ್ ಸವದಿ, ಇದರ ವಿಡಿಯೋನೂ ಮಾಡಿ ಮೋದಿ ಸಾಹೇಬರಿಗೆ ಕಳಿಸಿ ಎಂದು ಬಿಜೆಪಿಯವರಿಗೆ ಟಾಂಗ್ ನೀಡಿದರು.