ಈಗಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಪುಟದ ಅನೇಕರು ಖಾತೆ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದು ಇದೀಗ ಮತ್ತೋರ್ವ ಸಚಿವರು ಅಸಮಾಧಾನಿತರ ಸಾಲಿಗೆ ಸೇರಿದ್ದಾರೆ. 

ಚಾಮರಾಜನಗರ (ಫೆ.07): ಅರಣ್ಯ ಖಾತೆ ನೀಡಿರುವುದಕ್ಕೆ ಸಚಿವ ಅರವಿಂದ ಲಿಂಬಾವಳಿ ಪರೋಕ್ಷ ಅಸಮಧಾನ ಹೊರಹಾಕಿದ್ದಾರೆ.

Add Asianetnews Kannada as a Preferred SourcegooglePreferred

ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಸಮಾರಂಭದಲ್ಲಿ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ ಅರವಿಂದ ಲಿಂಬಾವಳಿ ನನಗೆ ಎರಡು ಖಾತೆ ಕೊಟ್ಟಿದ್ದಾರೆ. ರಾತ್ರಿ ವೇಳೆ ಕಾಡಿಗೆ ಹೋಗಬೇಕು, ಹಗಲು ವೇಳೆ ನಾಡಿಗೆ ಬರಬೇಕು ಎಂದಿದ್ದಾರೆ. 

ಬಿ​ಎ​ಸ್‌ವೈ ಸಿಎಂ ಅವಧಿ : ಡಿಸಿಎಂ ಅಶ್ವತ್ಥ್ ನಾರಾಯಣ್ ಹೀಗೆಂದರು

ಕಾಡು ಮತ್ತು ನಾಡು ಎರಡನ್ನು ನೋಡಿಕೊಳ್ಳುವ ಜವಬ್ದಾರಿ ಕೊಟ್ಟಿದ್ದಾರೆ. ಅರಣ್ಯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಕೊಟ್ಟಿರುವ ಬಗ್ಗೆ ಈ ವೇಳೆ ಪ್ರಸ್ತಾಪಿಸಿ ತಮ್ಮ ಅಸಮಾಧಾನ ಹೊರಹಾಕಿದರು. 

ಮೂಲತಃ ನಾನು ಸಿವಿಲ್ ಇಂಜಿನಿಯರ್. ಕಾಡಿನ ಬಗ್ಗೆ ಗ್ರಾಮೀಣ ಭಾಗದ ಸಾಮಾನ್ಯ ಯುವಕನಿಗೆ ಇರುವ ಮಾಹಿತಿಯು ನನಗಿಲ್ಲ. ಇದೆಲ್ಲವನ್ನು ತಿಳಿದುಕೊಳ್ಳಲು ಕೆಲವು ಸಮಯ ಬೇಕಾಗುತ್ತದೆ ಎಂದು ಖಾತೆ ಬಗ್ಗೆ ಇರುವ ತಮ್ಮ ಅಸಮಾಧಾನ ಹೊರಹಾಕಿದರು.