ಒಬ್ಬ ಸಿಎಂ ಇದ್ದಾಗ ಇನ್ನೊಬ್ಬರು ಆಗ್ಬೇಕು ಅನ್ನೋದು ಸರಿಯಲ್ಲ, ಅದು ಆಗಲೂಬಾರದು ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದಾರೆ. 

ಬಾಗಲಕೋಟೆ (ಜೂ.28): ಒಬ್ಬ ಸಿಎಂ ಇದ್ದಾಗ ಇನ್ನೊಬ್ಬರು ಆಗ್ಬೇಕು ಅನ್ನೋದು ಸರಿಯಲ್ಲ, ಅದು ಆಗಲೂಬಾರದು ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ದೇಶದಲ್ಲೇ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಆಗಿದ್ದಾರೆ. ಅವರು ಸಿಎಂ ಆಗಿದ್ದಾಗ ಇನ್ನೊಬ್ಬರು ಸಿಎಂ ಬಗ್ಗೆ ಚರ್ಚೆ ಮಾಡೋದು ಅಪ್ರಸ್ತುತ, ಅನಾವಶ್ಯಕ, ಅನಗತ್ಯ ಎಂದ ಸಚಿವರು, ಹೈಕಮಾಂಡ್ ಚರ್ಚಿಸಿ ಸಿಎಂ ಮಾಡುತ್ತದೆ. ಇದೆಲ್ಲಾ ಆಂತರಿಕ ವಿಚಾರ, ಬಹಿರಂಗ ಚರ್ಚೆ ಅನಗತ್ಯ. ವಿನಾಕಾರಣ ಚರ್ಚೆ ಆಗುತ್ತಿದೆ, ಆಗಬಾರದು. ಈ ಚರ್ಚೆಯಿಂದ ಯಾರಿಗೂ ಒಳ್ಳೆಯದಲ್ಲ. ನಮಗೂ, ಜನರಿಗೂ, ರಾಜ್ಯಕ್ಕೂ ಒಳ್ಳೆಯದಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

Add Asianetnews Kannada as a Preferred SourcegooglePreferred

ಸಿಎಂ ಬದಲಾವಣೆ ಪಕ್ಷದ ಆಂತರಿಕ ವಿಚಾರ: ಡಿಕೆಶಿಗೆ ಸಿಎಂ ಸ್ಥಾನ ಕೊಡುವಂತೆ ಚಂದ್ರಶೇಖರ್ ಸ್ವಾಮೀಜಿ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಅನೇಕ ಸ್ವಾಮೀಜಿಗಳು ಅನೇಕ ಹೇಳಿಕೆ ಕೊಟ್ಟಿದ್ದಾರೆ. ಅದು ಅವರ ಅಭಿಪ್ರಾಯ ಅಷ್ಟೇ. ಅವರು ಅವರ ಅಭಿಪ್ರಾಯ ಹೇಳಿಕೊಳ್ಳಬಹುದು. ಸಿಎಂ ಬದಲಾವಣೆ ನಮ್ಮ ಪಕ್ಷದ ವಿಚಾರವಾಗುತ್ತದೆ. ನಮ್ಮ ಪಕ್ಷ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಒಬ್ಬರು ಸಿಎಂ ಇದ್ದಾಗ ಇನ್ನೊಬ್ಬ ಸಿಎಂ ಬಗ್ಗೆ ಮಾತಾಡೋದು ಸರೀನೇ ಅಲ್ಲ. ಅದರಲ್ಲೂ ಸಿದ್ದರಾಮಯ್ಯ ದಕ್ಷ ಸಿಎಂ, ಒಳ್ಳೆಯ ಆಡಳಿತಗಾರ, ಅನುಭವಿ, ಜನಪ್ರಿಯ ಸಿಎಂ ಇನ್ನೇನ ಬೇಕು. ಸಿಎಂ, ಡಿಸಿಎಂ ಬೇಡಿಕೆ ಪಕ್ಷದ ಆಂತರಿಕ ಚೌಕಟ್ಟಿನಲ್ಲಿ ಆಗಬೇಕು ಎಂದರು.

ಸ್ವಾಮೀಜಿ ಹೇಳಿದ ತಕ್ಷಣ ಸಿಎಂ ಬದಲಾವಣೆ ಅಸಾಧ್ಯ: ಶಾಸಕ ಶಾಮನೂರು ಶಿವಶಂಕರಪ್ಪ

ಮೊದಲು ಕೇಂದ್ರ ಸರ್ಕಾರ ಉಳಿಸಿಕೊಳ್ಳಲಿ: ಕೈ ನಾಯಕರ ಆಂತರಿಕ ಕಚ್ಚಾಟ ಸರ್ಕಾರ ಪತನಕ್ಕೆ ಕಾರಣ ಆಗುತ್ತೆ ಎಂಬ ಆರ್. ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅಶೋಕ್ ವಿರೋಧ ಪಕ್ಷದ ನಾಯಕರು, ಅವರಿಗೆ ನೀವು ಮೈಕ್ ಕೊಟ್ಟಾಗ ಏನು ಹೇಳ್ಬೇಕು ಅದನ್ನು ಹೇಳ್ತಾರೆ. ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರ ಉಳಿಸಿಕೊಳ್ಳಲಿ, ಈಗಾಗಲೇ ಜನತೆ ಬಿಜೆಪಿಗೆ ಬಹುಮತ ಸಿಗದಂತೆ ಮಾಡಿ ಸಂದೇಶ ಕೊಟ್ಟಿದ್ದಾರೆ. ಅದನ್ನು ಅರ್ಥ ಮಾಡಿಕೊಂಡು, ಜವಾಬ್ದಾರಿಯುವತವಾಗಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕಪಂಡು ಹೋದರೆ ದೇಶಕ್ಕೆ ಒಳ್ಳೆಯದು. ಇಲ್ಲದೇ ಹೊದರೆ ಮುಂದೆ ಅವರ ಕರ್ಮ ಅವರು ಅನುಭವಿಸಬೇಕಾಗುತ್ತೆ ಎಂದು ಸಚಿವ ಗುಂಡೂರಾವ್ ತಿಳಿಸಿದರು.