Asianet Suvarna News Asianet Suvarna News

ಯಾವುದನ್ನೂ ಉಚಿತವಾಗಿ ಕೊಡಬಾರದು ಎಂದಿರುವ ನಾರಾಯಣಮೂರ್ತಿಗೆ ಬಡವರ ಕಷ್ಟ ಗೊತ್ತಿಲ್ಲ: ಸಚಿವ ಮಹದೇವಪ್ಪ

ಸರ್ಕಾರದಿಂದ ಜನರಿಗೆ ಯಾವುದನ್ನೂ ಉಚಿತವಾಗಿ ನೀಡಬಾರದು ಎಂಬ ಮನೋಪ್ರವೃತ್ತಿಯೇ ಸಂವಿಧಾನದ ಆಶಯಕ್ಕೆ ವಿರುದ್ಧವಾದದ್ದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. 

Minister HC Mahadevappa Slams Infosys Narayana Murthys Statement About Freebies gvd
Author
First Published Dec 2, 2023, 4:32 PM IST

ಮೈಸೂರು (ಡಿ.02): ಸರ್ಕಾರದಿಂದ ಜನರಿಗೆ ಯಾವುದನ್ನೂ ಉಚಿತವಾಗಿ ನೀಡಬಾರದು ಎಂಬ ಮನೋಪ್ರವೃತ್ತಿಯೇ ಸಂವಿಧಾನದ ಆಶಯಕ್ಕೆ ವಿರುದ್ಧವಾದದ್ದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಳಿತಕ್ಕೊಳಗಾದ ಜನರನ್ನು ಮೇಲೆತ್ತುವುದು ಸಂವಿಧಾನದ ಮೂಲ ಉದ್ದೇಶ. ಸಮಸಮಾಜವನ್ನು ನಿರ್ಮಾಣ ಮಾಡುವುದೇ ಅದರ ಪ್ರಮುಖ ಆದ್ಯತೆ. ಹೀಗಾಗಿ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಅವರು ಹೇಳಿರುವುದು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಬಡತನ ನಿರ್ಮೂಲನೆಗೆ ವಿರುದ್ಧವಾದದ್ದು ಎಂದು ತಿರುಗೇಟು ನೀಡಿದರು.

ನಮ್ಮ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ನಾಡಿನ 1.32 ಲಕ್ಷ ಕುಟುಂಬಗಳು ಸ್ವಾವಲಂಬಿ ಜೀವನದ ಕಡೆಗೆ ಹೆಜ್ಜೆ ಹಾಕುತ್ತಿವೆ. ಆದ್ದರಿಂದ ಅವರು ಈ ಮಾತನ್ನು ಪ್ರಧಾನಿ ಮೋದಿ ಅವರು ಕೆಲವೇ ಕೈಗಾರಿಕೋದ್ಯಮಗಳ ಸಾಲವನ್ನು ಮನ್ನಾ ಮಾಡಿದ ಸಂದರ್ಭದಲ್ಲಿ ಹೇಳಬೇಕಿತ್ತು ಎಂದು ಅವರು ಕುಟುಕಿದರು. ಸಾಲ ಮನ್ನಾ ಮಾಡಿದ ಹಣವನ್ನು ದೇಶದ ಅಭಿವೃದ್ಧಿಗೆ ಹಾಗೂ ವ್ಯವಸಾಯಕ್ಕೆ ಬಳಸಿ, ದೇಶದ ಬಡತನ ನಿವಾರಣೆಗೊಳಿಸಿ ಸಮ ಸಮಾಜ ನಿರ್ಮಾಣ ಮಾಡಿ ಎಂದು ಸಲಹೆ ನೀಡಿದ್ದರೆ, ನಾರಾಯಣಮೂರ್ತಿ ಅವರನ್ನು ಪ್ರಸಂಶೆ ಮಾಡಿ, ಅವರು ದೇಶದ ಸಂವಿಧಾನದ ಆಶಯಕ್ಕೆ ಅನುಗುಣವಾಗಿದ್ದಾರೆ ಎಂದು ಹೇಳಬಹುದಿತ್ತು. ಆದರೆ, ಈ ರೀತಿಯಾಗಿ ಬಡವರ ಏಳಿಗೆಯ ಪರವಾಗಿರುವ ಸೌಲಭ್ಯಗಳನ್ನು ಅಣುಕಿಸಬಾರದು ಎಂದು ಅವರು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಐಸಿಯುನಲ್ಲಿದೆ: ಸಂಸದ ಮುನಿಸ್ವಾಮಿ ಆರೋಪ

ದೇಶದ ಎಲ್ಲಾ ಜನರಿಗೆ ಸಂಪನ್ಮೂಲವನ್ನು ಹಂಚಬೇಕು ಎಂದು ನಮ್ಮ ಸಂವಿಧಾನ ಹೇಳಿದೆ. ಯಾರೋ ನಾಲ್ಕು ಜನರು ಸಂಪನ್ಮೂಲ ಕೂಡಿಟ್ಟುಕೊಂಡರೆ ಉಳಿದವರ ಏನು ಮಾಡಬೇಕು? ಗ್ರಾಮೀಣ ಭಾಗದ ಜನರು ಹಾಗೂ ಶತಮಾನಗಳಿಂದ ತುಳಿತಕ್ಕೊಳಗಾದವರ ಗತಿ ಏನಾಗಬೇಕು? ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಸ್ಥಿತಿಗತಿಗಳು ಏನಾಗಬೇಕು? ಹೀಗಾಗಿ ಯಾರೋ ಒಬ್ಬರು ವಿರೋಧಿಸಿದ್ದಾರೆ ಎಂದು ಸಂವಿಧಾನದ ಆಶಯಗಳನ್ನು ಕಡೆಗಣಿಸಲಾಗದು ಎಂದು ಅವರು ಹೇಳಿದರು.

ಫಲಿತಾಂಶ ಕಾಂಗ್ರೆಸ್ ಪರ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಬಹುತೇಕ ಕಾಂಗ್ರೆಸ್ ಪರವಾಗಿ ಇದೆ. 10 ವರ್ಷಗಳ ಬಿಜೆಪಿ ಆಡಳಿತದಲ್ಲಿ ಬರೀ ಪೊಳ್ಳು ಮಾತು, ಸುಳ್ಳು ಭರವಸೆಗಳ ವ್ಯಾಪಕ ಪ್ರಚಾರ ಬಿಟ್ಟರೆ ತಳಹಂತದಲ್ಲಿ ಏನೂ ಬದಲಾವಣೆ ಆಗಿಲ್ಲ. ಅವರು ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡಿದರು. ನೋಟು ಅಮಾನ್ಯೀಕರಣಗೊಳಿಸಿದರು. ಭಾವನಾತ್ಮಕ ವಿಷಯಗಳನ್ನು ಮುಂದೆ ತಂದರು. ಇವುಗಳಿಂದ ದಲಿತರ ಮೇಲಿನ ದೌರ್ಜನ್ಯವೇನು ಕಡಿಮೆಯಾಗಿಲ್ಲ. ರೂಪಾಯಿ ಮೌಲ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಳಿದಿಲ್ಲ. ಜನರು ಇದೆನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. 

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ: ಮಾಜಿ ಸಚಿವ ಸುಧಾಕರ್ ಭವಿಷ್ಯ

ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ರಾಜಕಾರಣ ಹೆಚ್ಚು ದಿನ ನಡೆಯುವುದಿಲ್ಲ ಎಂದರು. ಜನರಿಗೆ ಬೇಕಿರುವುದು ಬಡತನ ಹಾಗೂ ಹಸಿವು ನಿವಾರಣೆ. ಅವರ ಬದುಕು ಕಟ್ಟಬೇಕು. ಗೌರವಯುತವಾಗಿ ಜೀವನ ನಡೆಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು. ಆದರೆ, ಬಿಜೆಪಿ ಆಡಳಿತದಲ್ಲಿ ಇದು ಯಾವುದನ್ನು ಸಹ ಕಾಣಲು ಸಾಧ್ಯವಾಗಲಿಲ್ಲ. ಅವರ ಆಡಳಿತ ವೈಫಲ್ಯವನ್ನು ಕಂಡು ಈ ಎಲ್ಲದರಿಂದ ಜನರು ಬೇಸತ್ತಿದ್ದಾರೆ. ಹೀಗಾಗಿ, ಜನರು ಕಾಂಗ್ರೆಸ್ಸಿನ ಪರವಾಗಿದ್ದಾರೆ ಎಂದು ಅವರು ಹೇಳಿದರು.

Follow Us:
Download App:
  • android
  • ios