Asianet Suvarna News Asianet Suvarna News

ಸರ್ಕಾರ ನಡೆಯುತ್ತಿಲ್ಲ ಹೇಗೋ ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

ತಮ್ಮ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧವೇ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ರೈತರೊಬ್ಬರು ಕರೆ ಮಾಡಿದಾಗ ಮಾಧುಸ್ವಾಮಿ ಸರ್ಕಾರದ ಆಡಳಿತ ವೈಖರಿ ಬಗ್ಗೆ ಬೇಸರ ಹೇಳಿಕೊಂಡಿದ್ದಾರೆ. ಇದೀಗ ಆ ಆಡಿಯೋ ಫುಲ್ ವೈರಲ್ ಆಗಿದೆ.

Minister JC Madhuswamy Audio Viral about Un Happy On His Govt rbj
Author
Bengaluru, First Published Aug 13, 2022, 7:51 PM IST

ಬೆಂಗಳೂರು, (ಆಗಸ್ಟ್.13): ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ತಮ್ಮ ರಾಜ್ಯ ಸರ್ಕಾರ ಆಡಳಿತದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ. 

ರಾಜ್ಯದಲ್ಲಿ ಸರ್ಕಾರ ನಡೆಯುತ್ತಿಲ್ಲ ಹೇಗೋ ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ ಎಂದು ಮಾಧುಸ್ವಾಮಿ ರೈತನ ಬಳಿ ಅಸಹಾಯಕತೆ ತೋಡಿಕೊಂಡಿದ್ದಾರೆ. ಇದೀಗ ಆ ವಿಡಿಯೋ ಫುಲ್ ವೈರಲ್ ಅಗಿದೆ.

ರಾಮನಗರದಲ್ಲಿ ಜೆಡಿಎಸ್‌ಗೆ ಶಾಕ್ ಕೊಟ್ಟ ಅಶ್ವತ್ಥ್ ನಾರಾಯಣ, ಮಾಜಿ MLC ಬಿಜೆಪಿ ಸೇರ್ಪಡೆ

ಚನ್ನಪಟ್ಟಣದ ಭಾಸ್ಕರ್ ಎಂಬ ವ್ಯಕ್ತಿ ಕರೆ ಮಾಡಿ ಬ್ಯಾಂಕ್ ಸಾಲ ತೀರಿಸುವ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಮಾಧುಸ್ವಾಮಿ ಅವರು ತಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಹಾಯಕತೆ ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಭಾಸ್ಕರ್ ಹಾಗೂ ಮಾಧುಸ್ವಾಮಿ ನಡುವೆ ನಡೆದ ಸಂಭಾಷಣೆಯಲ್ಲಿ ಏನಿದೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಆಡಿಯೋದಲ್ಲಿ ಏನಿದೆ..?
ಭಾಸ್ಕರ್: ನಮಸ್ತೆ ಸರ್, ನಾನು ಚನ್ನಪಟ್ಟಣದಿಂದ ಸಮಾಜ ಸೇವಕ ಭಾಸ್ಕರ್ ಅಂತ. ವಿಎಸ್ಎಸ್‌ಎನ್ ಬ್ಯಾಂಕ್‌ನಲ್ಲಿ 50 ಸಾವಿರ ರೂಪಾಯಿ ಸಾಲ ಪಡೆದಿದ್ದಾರೆ ರೈತರು. ಆ ಹಣ ಕಟ್ಟಬೇಕಾದರೆ ರಿನೀವಲ್‌ಗೆ ಅಂತ 1,300 ರೂಪಾಯಿಯನ್ನ ಬ್ಯಾಂಕ್ ಸಿಬ್ಬಂದಿಗಳು ತಗೊಂಡು ಅವರೇ ಬಡ್ಡಿಗೆ ಅಂತ ಹಣ ಇಡ್ಕೊತ್ತಿದ್ದಾರೆ.

ಮಾಧುಸ್ವಾಮಿ: ಏನಪ್ಪ ಮಾಡ್ಲಿ... ಇದೆಲ್ಲ ನನಗೆ ಗೊತ್ತು, ಬಡ್ಡಿ ಹೊಡ್ಕೊಂಡು ತಿಂತಾರೆ ಅಂತ ಸನ್ಮಾನ್ಯ ಸೋಮಶೇಖರ್ ಅವರ ಗಮನಕ್ಕೂ ತಂದಿದ್ದೇನೆ. ಅವರೇನು ಕ್ರಮ ಜರುಗಿಸ್ತಾ ಇಲ್ವಲ್ಲಾ… ಏನ್ ಮಾಡೋದು?

ಭಾಸ್ಕರ್: ರೈತರನ್ನ ಬ್ಯಾಂಕ್‌ನವರು ಮಂಗನಂತೆ ಮಾಡಿಬಿಟ್ಟಿದ್ದಾರೆ ನೋಡಿ ಸರ್

ಮಾಧುಸ್ವಾಮಿ: ನಾನೇ ಕಟ್ಟಿದ್ದೀನಿ ಮಾರಾಯಾ, ರೈತರಲ್ಲ ನನ್ನ ಅತ್ರನೂ ತಗೊಂಡವೋ.

ಭಾಸ್ಕರ್: ನೋಡಿ ಸರ್ ಇದೆಲ್ಲಾ ನೋಡೋಕೆ ಸರಿ ಕಾಣೋದಿಲ್ಲ

ಮಾಧುಸ್ವಾಮಿ: ಸರ್ಕಾರ ನಡೀತಾ ಇಲ್ಲ ಇಲ್ಲಿ, ಮ್ಯಾನೇಜ್‌ಮೆಂಟ್ ಮಾಡ್ತಿದ್ದೀವಿ ಅಷ್ಟೆ. ತಳ್ಳಿದ್ರೆ ಸಾಕು ಇನ್ನು 8 ತಿಂಗಳು ಅಂತ ತಳ್ತಾ ಇದ್ದೀವಿ.

Follow Us:
Download App:
  • android
  • ios