ಬಿಎಸ್ವೈ ಸಂಪುಟದ ಪ್ರಭಾವಿ ಸಚಿವರೊಬ್ಬರಿಗೆ ಕೊರೋನಾ ಶಾಕ್
ಜನಸಾಮಾನ್ಯರು, ಗಣ್ಯರು, ರಾಜಕಾರಣಿಗಳಾದಿಯಾಗಿ ಎಲ್ಲರನ್ನೂ ಬೆಂಬಿಡದೆ ಕಾಡುತ್ತಿರುವ ಕೊರೋನಾ ಮಹಾಮಾರಿ ಇದೀಗ ಇದೀಗ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿಗೆ ಶಾಕ್ ಕೊಟ್ಟಿದೆ.
ಬೆಂಗಳೂರು, (ಸೆ.28): ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೂ ಕೊರೋನಾ ಸೊಂಕು ತಗುಲಿದೆ.
ಇಂದು (ಸೋಮವಾರ) ಸಚಿವ ಮಾಧುಸ್ವಾಮಿಗೂ ಕೋವಿಡ್ ಸೋಂಕು ತಗುಲಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಧುಸ್ವಾಮಿ ಅವರು ಅಧಿವೇಶನದಲ್ಲಿ ಪಾಲ್ಗೊಂಡಿದ್ದು, ಹಲವು ನಾಯಕರುಗಳು ಆತಂಕದಲ್ಲಿದ್ದಾರೆ.
ಗದಗ: ಕಾಂಗ್ರೆಸ್ ಹಿರಿಯ ನಾಯಕ ಹೆಚ್.ಕೆ. ಪಾಟೀಲ್ಗೆ ಕೊರೋನಾ
ಭಾನುವಾರಷ್ಟೇ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ಗೂ ಕೊರೋನಾ ಟೆಸ್ಟ್ ವರದಿ ಪಾಸಿಟಿವ್ ಬಂದಿದ್ದರಿಂದ ಅವರು ಹೋಂ ಐಸೋಲೇಶನ್ಗೆ ಒಳಪಟ್ಟಿದ್ದಾರೆ. ಇನ್ನು ಸೋಮವಾರ ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ. ಪಾಟೀಲ್ ಕೂಡ, 'ನನಗೆ ಕರೊನಾ ತಗುಲಿದೆ' ಎಂದು ಸೋಮವಾರ ಬೆಳಗ್ಗೆ ಟ್ವೀಟ್ ಮೂಲಕ ತಿಳಿಸಿದ್ದರು.