ಸದಾ ಒಂದಲ್ಲೊಂದು ವಿವದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇದೀಗ ಅಚ್ಚರಿ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಬೆಂಗಳೂರು, (ಅ.11): ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕುರುಬ ಸಮುದಾಯಕ್ಕೆ ST ಮೀಸಲಾತಿ ಹೋರಾಟಕ್ಕಾಗಿ ರೂಪರೇಷಗಳು ನಡೆಯುತ್ತಿದ್ದು, ಇಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕುರುಬ ಸಮುದಾಯದ ಸಭೆಯಲ್ಲಿ ಈ ಮಾತು ಹೇಳಿದ್ದು ಅಚ್ಚರಿಗೆ ಕಾರಣವಾಗಿದೆ.

"

'ಕೇಂದ್ರ ಸಚಿವರು, ಸಂಸದರು ನಿಧನರಾದ್ರು ಅಂಥ ಲೋಕಸಭೆ ಮುಚ್ಚೋಕಾಗುತ್ತಾ?'

ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಹೇಳಿದರು.

ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.