Asianet Suvarna News Asianet Suvarna News

ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು, ಸಚಿವ ಈಶ್ವರಪ್ಪ ಅಚ್ಚರಿ ಹೇಳಿಕೆ..!

ಸದಾ ಒಂದಲ್ಲೊಂದು ವಿವದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿದ್ದ ಸಚಿವ ಕೆ.ಎಸ್. ಈಶ್ವರಪ್ಪ ಅವರು ಇದೀಗ ಅಚ್ಚರಿ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

Minister KS Eshwarappa Reacts On Politics In Caste rbj
Author
Bengaluru, First Published Oct 11, 2020, 2:46 PM IST | Last Updated Oct 11, 2020, 9:02 PM IST

ಬೆಂಗಳೂರು, (ಅ.11): ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಕುರುಬ ಸಮುದಾಯಕ್ಕೆ ST ಮೀಸಲಾತಿ ಹೋರಾಟಕ್ಕಾಗಿ ರೂಪರೇಷಗಳು ನಡೆಯುತ್ತಿದ್ದು,  ಇಂದು (ಭಾನುವಾರ) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕುರುಬ ಸಮುದಾಯದ ಸಭೆಯಲ್ಲಿ ಈ ಮಾತು ಹೇಳಿದ್ದು ಅಚ್ಚರಿಗೆ ಕಾರಣವಾಗಿದೆ.

"

'ಕೇಂದ್ರ ಸಚಿವರು, ಸಂಸದರು ನಿಧನರಾದ್ರು ಅಂಥ ಲೋಕಸಭೆ ಮುಚ್ಚೋಕಾಗುತ್ತಾ?'

ಚುನಾವಣೆ ಬಂದಾಗ ಚುನಾವಣೆಗಾಗಿ ಹೋರಾಟ ಮಾಡುತ್ತೇವೆ. ಆದರೆ, ಕುರುಬ ಸಮುದಾಯಕ್ಕೆ ST ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಈ ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಹೇಳಿದರು.

ಸ್ವಾಮೀಜಿಗಳ ನೇತೃತ್ವದಲ್ಲೇ ಈ ಹೋರಾಟ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.

Latest Videos
Follow Us:
Download App:
  • android
  • ios