Asianet Suvarna News Asianet Suvarna News

ಕೇಂದ್ರ ನಾಯಕರಿಂದ ಸಿಎಂಗೆ ರಕ್ಷಣೆ: ಸಚಿವರ ಮಹತ್ವದ ಹೇಳಿಕೆ...!

ರಾಜ್ಯದಲ್ಲಿ ಸಂಪುಟ ಕಸರತ್ತು ಜೋರಾಗಿದ್ದು, ಸಚಿವ ವಿಸ್ತರಣೆಗೆ ಹೈಕಮಾಂಡ್ ತುಟಿ ಬಿಚ್ಚುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪನವರು ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

Minister KS Eshwarappa Talks about CM BS Yediyurappa rbj
Author
Bengaluru, First Published Dec 4, 2020, 7:05 PM IST

ದಾವಣಗೆರೆ, (ಡಿ.04): ಕಳೆದ 15 ದಿನಗಳಿಂದ ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳಿಂದ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಅದರಲ್ಲೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಕೂಗು ಬಲವಾಗಿ ಕೇಳಿಬರುತ್ತಿದೆ. ಖುದ್ದು ಸಿಎಂ ದೆಹಲಿ ತೆರಳಿ ಸಂಪುಟ ವಿಸ್ತರಣೆ ಮಾತುಕತೆ ಮಾಡಿ ಬಂದ್ರೂ ಯಾವುದೇ ಪ್ರಯೋಜನವಾಗಿಲ್ಲ. 

ಮೊದಲ ಬಾರಿಗೆ ರಾಜ್ಯಕ್ಕೆ ಉಸ್ತುವಾರಿ: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಇದು ನಾಯಕತ್ವ ಬದಲಾವಣೆಯ ಮೊದಲ ಅಂಶ ಎಂದು ವಿಶ್ಲೇಷಣೆ ಮಾಡಲಾಗಿದೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎನ್ನುವುದು ಹೈಕಮಾಂಡ್ ಯಾವುದೇ ಹೇಳದಿರುವುದು ಸಿಎಂ ಕಣ್ಣುಕೆಂಪಾಗಿಸಿದೆ. ಇನ್ನು ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಹತ್ವದ ಹೇಳಿಕೆಯೊಂದನ್ನ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಕೇಂದ್ರದ ನಾಯಕರು ಮುಖ್ಯಮಂತ್ರಿಯನ್ನು ಹಿಡಿತದಲ್ಲಿಟ್ಟುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ದೇವೇಗೌಡ ಮನವೊಲಿಕೆ ಯಶಸ್ವಿ: ಇದೇ ಖುಷಿಯಲ್ಲಿ ಮನೆಯಲ್ಲಿ ಭರ್ಜರಿ ಊಟ

ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಕೇಂದ್ರ ನಾಯಕರು ಮುಖ್ಯಮಂತ್ರಿಯನ್ನು ನಿಯಂತ್ರಿಸುತ್ತಿದ್ದಾರೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರರಿಸಿದ ಅವರು , ಸರ್ಕಾರ ಕಳೆದುಕೊಳ್ಳಬೇಕು ಎಂಬ ಇಚ್ಛೆ ಪಕ್ಷಕ್ಕೆ ಇಲ್ಲ. ಹೀಗಾಗಿ ಕೇಂದ್ರದ ನಾಯಕರು ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿ ಯಾರನ್ನೋ ಸಚಿವರನ್ನಾಗಿ ಮಾಡಿದರೆ ಇನ್ನೊಬ್ಬರು ಪ್ರಶ್ನೆ ಮಾಡುತ್ತಾರೆ. ಅದರ ಬದಲು ಕೇಂದ್ರದವರು ಸೂಚಿಸಿದಂತೆ ಮಾಡಿದಾಗ ಮುಖ್ಯಮಂತ್ರಿಯೂ ಸುರಕ್ಷಿತವಾಗಿರುತ್ತಾರೆ ಎಂದರು. 

Follow Us:
Download App:
  • android
  • ios