Asianet Suvarna News Asianet Suvarna News

ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಬಿಜೆಪಿಯವರ ಕಣ್ಣಿಗೆ ಕಾಣುತ್ತಿಲ್ಲವೇ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯ ಜತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಬಿಜೆಪಿಯವರ ಕಣ್ಣಿಗೆ ಇದೆಲ್ಲ ಕಾಣುತ್ತಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ. 

Minister Laxmi Hebbalkar Slams On BJP Party At Belagavi gvd
Author
First Published Mar 7, 2024, 12:35 PM IST

ಅಥಣಿ (ಮಾ.07): ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯ ಜತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಬಿಜೆಪಿಯವರ ಕಣ್ಣಿಗೆ ಇದೆಲ್ಲ ಕಾಣುತ್ತಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ. ಅಥಣಿಯಲ್ಲಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಎಂದರೆ ಬದ್ದತೆ, ಬಸವಣ್ಣನವರು ಕಂಡ ಸಮಾನತೆಯ ಕನಸನ್ನು ನನಸು ಮಾಡುವ ಪಕ್ಷ. ಆದರೆ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದರು. 

ಗ್ಯಾರಂಟಿ ಸುಳ್ಳು ಎಂದರು, ಗ್ಯಾರಂಟಿಯಿಂದ ಮಹಿಳೆಯರು ದೇವಸ್ಥಾನಗಳಿಗೆ ತಿರುಗುತ್ತಿದ್ದಾರೆ, ಗಂಡಸರು ಕುಡಿದು ಹಾಳಾಗುತ್ತಿದ್ದಾರೆ ಎಂದು ಅವಮಾನ ಮಾಡಿದರು. ಆದರೆ ಮಹಿಳಾ ಸ್ವಾವಲಂಬನೆ ಕಾಂಗ್ರೆಸ್ ಬದ್ದತೆ. ಅದನ್ನು ಅತ್ಯಂತ ಸಮರ್ಥವಾಗಿ ಈಡೇರಿಸಿದ್ದೇವೆ ಎಂದು ಹೇಳಿದರು. 1.20 ಕೋಟಿ ಮನೆಯ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸಿ ಕಾಂಗ್ರೆಸ್ ಪಕ್ಷ ಜನಪ್ರಿಯತೆ ಪಡೆಯುತ್ತಿರುವುದನ್ನು ಬಿಜೆಪಿಯವರಗೆ ಸಹಿಸಿಕೊಳ್ಳಲು ಆಗುವುದಿಲ್ಲ. 5 ಗ್ಯಾರಂಟಿ ಯೋಜನೆಗೆ ತಿಂಗಳಿಗೆ 5 ಸಾವಿರ ಕೋಟಿ ರೂ ರುಪಾಯಿ ನೀಡಲಾಗುತ್ತಿದೆ. 

ಲಕ್ಷ್ಮಣ ಸವದಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಜತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಬಿಜೆಪಿಯವರಿಗೆ ಕಣ್ಣಿಗೆ ಕಾಣುತ್ತಿಲ್ಲ. ಅವರಿಗೆ ಭ್ರಮನಿರಸನವಾಗಿದೆ. ಕೇವಲ ಶ್ರೀಮಂತರು ಶ್ರೀಮಂತರಾದರೆ ರಾಷ್ಟ್ರ ಬೆಳೆಯುವುದಿಲ್ಲ. ಬಡವರ ಹೊಟ್ಟೆ ತುಂಬಬೇಕು, ಬಡವರು ಸ್ವಾವಲಂಬಿ ಜೀವನ ನಡೆಸಬೇಕು. ಅಂತಹ ಅವಕಾಶವನ್ನು ಕಾಂಗ್ರೆಸ್ ಸರಕಾರ ನೀಡುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಲಕ್ಷ್ಮಣ ಸವದಿಯವರು ತಮ್ಮ ಕ್ಷೇತ್ರದ ಜನರಿಗೆ ನೀರಾವರಿ ಯೋಜನೆ ಬೇಕೆನ್ನುವ ಬೇಡಿಕೆಯನ್ನು ಮಾತ್ರ ಕಾಂಗ್ರೆಸ್ ಸೇರುವಾಗ ಇಟ್ಟಿದ್ದರು. 

ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ಹೃದಯ ಜ್ಯೋತಿ ಯೋಜನೆ: ಸಚಿವ ದಿನೇಶ್‌ ಗುಂಡೂರಾವ್

ಅದರಂತೆ ಈಗ ₹ 1486 ಕೋಟಿಗಳ ಈ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮಂಜೂರಾಗಿದೆ. ನನ್ನ ಕ್ಷೇತ್ರಕ್ಕೆ ಕೂಡ ₹ 800 ಕೋಟಿಗಳ ಯೋಜನೆ ಮಂಜೂರು ಮಾಡಲಾಗಿದೆ. 2018ರಲ್ಲೇ ಯೋಜನೆ ಮಂಜೂರಾಗಿತ್ತು. ಆದರೆ ನಂತರ ಬಂದ ಸರ್ಕಾರ ನನಗೆ ಹೆಸರು ಬರುತ್ತದೆ ಎಂದು ಹೇಳಿ ನನ್ನ ಕ್ಷೇತ್ರದ ಯೋಜನೆ ತಡೆದಿದ್ದರು. ಈಗ ಮತ್ತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಅವರು ಯೋಜನೆಗೆ ಮಂಜೂರಾತಿ ನೀಡಿದ್ದಾರೆ. ಅವರಿಗೆ ನಾನು ಕೋಟಿ ಕೋಟಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ನಮಗೆ ಆಶಿರ್ವಾದ ಮಾಡಿ ಎಂದು ಕೋರಿದರು.

Follow Us:
Download App:
  • android
  • ios