Asianet Suvarna News Asianet Suvarna News

ನನ್ನ ತಂಟೆಗೆ ಬಂದವರನ್ನ ಹಿಂದೆಯೂ ಬಿಟ್ಟಿಲ್ಲ ಮುಂದೆಯೂ ಬಿಡಲ್ಲ: ಏಕವಚನದಲ್ಲೇ ನಿರಾಣಿಗೆ ಎಂ.ಬಿ. ಪಾಟೀಲ್‌ ತಿರುಗೇಟು ..!

ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ ಇಂದು ಮತ್ತು ಮುಂದೆಯೂ ಬಿಡುವುದಿಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದನ್ನು ನೆನಪಿಸುತ್ತೇನೆ ನಿರಾಣಿ ವಿರುದ್ಧ ಹರಿಹಾಯ್ದ ಸಚಿವ ಎಂ.ಬಿ. ಪಾಟೀಲ್ 
 

Minister MB Patil Slams Former Minister Murugesh Nirani grg
Author
First Published Sep 1, 2024, 8:42 PM IST | Last Updated Sep 1, 2024, 8:43 PM IST

ವಿಜಯಪುರ(ಸೆ.01):  ಕೆಐಎಡಿಬಿ ನಿವೇಶನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಆರೋಪ ಮಾಡಿದ್ದ ಮಾಜಿ ಸಚಿವ ಮುರುಗೇಶ್‌ ನಿರಾಣಿ ವಿರುದ್ಧ ಸಚಿವ ಎಂ.ಬಿ.ಪಾಟೀಲ್‌ ಏಕವಚನದಲ್ಲೇ ತಿರುಗೇಟು ನೀಡಿದ್ದಾರೆ.

 

ಇಂದು(ಭಾನುವಾರ) ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಚಿವ ಎಂ.ಬಿ. ಪಾಟೀಲ್‌, ಮಿ. ಮುರುಗೇಶ್‌ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ ಸಿದ್ದಾರ್ಥ ಟ್ರಸ್ಟ್ ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿಎ ನಿವೇಶನ ನೀಡಿದ್ದರೂ, ಎಐಸಿಸಿ  ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಅನವಶ್ಯಕವಾಗಿ ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ ಅವರು ಬಿಂಬಿಸುತ್ತಿರುವುದಕ್ಕೆ ಪ್ರತಿಯಾಗಿ ನಾನು  ಪತ್ರಿಕಾಗೋಷ್ಠಿ ನಡೆಸಿ,  ಬಿಜೆಪಿ ಅವಧಿಯಲ್ಲಿ ಬಿಜೆಪಿ ನಾಯಕರು ಯಾರು ಯಾರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವದು ನನ್ನ  ಉದ್ದೇಶವಾಗಿತ್ತು.

ಪ್ರಾಸಿಕ್ಯೂಷನ್‌ಗೆ ಮತ್ತೆ ಮನವಿ: ಗಣಿ ರೆಡ್ಡಿ, ನಿರಾಣಿ ತನಿಖೆ, ರಾಜ್ಯಪಾಲಗೆ ಲೋಕಾ ಸ್ಪಷ್ಟನೆ

ಈ ಸಂದರ್ಭದಲ್ಲಿ ಮಿ. ನಿರಾಣಿ ತನ್ನ ಶಿಕ್ಷಣ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆಗೆ ಪಡೆದಿರುವ ಲಾಭದ ಮಾಹಿತಿಯನ್ನು ನೀಡಿದ್ದೇನೆ. ಆದರೆ, “ದನಕಾಯುವವನು" ಎಂಬ ಶಬ್ದವನ್ನು ನಾನು ಎಲ್ಲಿಯೂ ಬಳಸಿಲ್ಲ ಮತ್ತು ಏಕವಚನದಲ್ಲೂ ನಾನು ಮಾತನಾಡಿಲ್ಲ ಅಷ್ಟಕ್ಕೂ, ದನಕಾಯುವುದು ಗೌರವದ ಕಾಯಕ ದನಕಾಯುವವರನ್ನು ನಾನು ಗೌರವಿಸುತ್ತೇನೆ ಮಿ. ನಿರಾಣಿ ತಾನಾಗಿಯೇ “ದನಕಾಯುವವ” ಎಂದು ತಿಳಿದುಕೊಂಡು,  ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ ಜಿಲ್ಲೆಯವ ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ತಿಳಿಸಿದ್ದಾರೆ. 

ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ ಇಂದು ಮತ್ತು ಮುಂದೆಯೂ ಬಿಡುವುದಿಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದನ್ನು ನೆನಪಿಸುತ್ತೇನೆ ನಿರಾಣಿ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ಹರಿಹಾಯ್ದಿದ್ದಾರೆ. 

Latest Videos
Follow Us:
Download App:
  • android
  • ios