ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಅವರು ದಿಲ್ಲಿಯಲ್ಲಿ ನಡೆದ ಸಭೆಯೊಂದರ ಕಥೆ ಹೇಳಿದ್ದಾರೆ. 

ಬೆಳಗಾವಿ, (ಫೆ.27): ಬೆಳಗಾವಿ ಗಡಿ ಭಾಗದ ಕನ್ನಡಿಗರನ್ನ ಮಹಾರಾಷ್ಟ್ರದವರು ಕೆಣಕುತ್ತಿದ್ರೆ, ತೆಪ್ಪಗೆ ಕುಳಿತುಕೊಳ್ಳುವ ಸಚಿವ ರಮೇಶ್ ಜಾರಕಿಹೊಳಿ ಇದೀಗ ಕನ್ನಡ ಪ್ರೇಮದ ಬಗ್ಗೆ ಕಥೆಯೊಂದನ್ನು ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಹೌದು... ಗೋಕಾಕ್ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ನಾಲ್ಕು ಜನರು ಮುಂದೆ ಕನ್ನಡದ ಬಗ್ಗೆ ಉದ್ದೂದ್ದ ಭಾಷಣ ಮಾಡಿದ್ದಾರೆ.

ಮಹದಾಯಿ ವಿವಾದ ವಿಚಾರವಾಗಿ ದೆಹಲಿಯಲ್ಲಿ ಸಭೆ ಇತ್ತು. 3 ದಿನಗಳ ಹಿಂದೆ ಸಭೆ ಇತ್ತು. ಸಭೆಯಲ್ಲಿ ನನಗೆ ಇಂಗ್ಲಿಷ್​ನಲ್ಲಿ ಪ್ರಶ್ನೆ ಕೇಳಲು ಮುಂದಾದರು. ನಾನು ಸರ್ಕಾರಿ ಶಾಲೆಯಲ್ಲಿ ಓದಿದವ, ನನಗೆ ಇಂಗ್ಲಿಷ್ ಬರಲ್ಲ. ಕನ್ನಡ ಬಿಟ್ಟು ಬೇರೆ ಭಾಷೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದರು.

ಕನ್ನಡ ತುಳಿಯುವ ಹೊಸ ತಂತ್ರ: ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕಿದ ಉದ್ಧವ್...! 

ನಮ್ಮ ಮನೆಯಲ್ಲಿ ಎಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರು. ನಾವೆಲ್ಲರೂ ಸರ್ಕಾರಿ ಆಸ್ಪತ್ರೆಯಲ್ಲೇ ಹುಟ್ಟಿದ್ದೇವೆ. ನನ್ನ ಮೊಮ್ಮಗ ಕೂಡ ಸರ್ಕಾರಿ ಆಸ್ಪತ್ರೆಯಲ್ಲೇ ಜನಿಸಿದ್ದಾನೆ ಎಂದು ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು.

ಯಾವುದೇ ಕೆಲಸವಿರಲಿ ಜನರು ಮನವಿ ಮಾಡುವ ಅಗತ್ಯವಿಲ್ಲ. ಗೋಕಾಕ್​ ಜನರು ನನಗೆ ಮನವಿ ಮಾಡುವ ಜರೂರತ್ ಇಲ್ಲ. ಯಾವುದೇ ಕೆಲಸ ಇರಲಿ ಆದೇಶ ಮಾಡುವ ಹಕ್ಕು ಜನರಿಗಿದೆ ಎಂದರು.

ನಿಮ್ಮ ಆಶೀರ್ವಾದದಿಂದ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದ್ದೇನೆ. ಗೋಕಾಕ್ ಜನ ಮನವಿ ಮಾಡಿದರೆ ನನಗೆ ಅಪಮಾನ ಆಗುತ್ತೆ. ಗೋಕಾಕ್​ನಲ್ಲಿ ಕನ್ನಡ ಸಾಹಿತ್ಯ ಭವನ, ಸಭಾಭವನ ನಿರ್ಮಿಸಲು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.