* ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಎಲೆಕ್ಷನ್ ವಿಚಾರ* ಬಸವರಾಜ ಬೊಮ್ಮಾಯಿ ಪರ ಸೋಮಶೇಖರ್ ಬ್ಯಾಟಿಂಗ್* ಅಮಿತ್​​ ಶಾ ಮಾತೇ ಅಂತಿಮ ಎಂದ ಸಚಿವ ಎಸ್‌ಟಿ ಸೋಮಶೇಖರ್

ಚಾಮರಾಜನಗರ, (ಸೆ.05): ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ಎನ್ನುವ ಕೇಂದ್ರ ಗೃಹ ಸಚಿವ ಮಾತು ಇದೀಗ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

Add Asianetnews Kannada as a Preferred SourcegooglePreferred

ಬೊಮ್ಮಾಯಿ ನೇತೃತ್ವಕ್ಕೆ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದರೆ, ಇನ್ನೂ ಕೆಲವರು ಅಮಿತ್ ಶಾ ಹೇಳಿಕೆಗೆ ಸಹಮತ ವ್ಯಕ್ತಪಡಿಸುವ ಮೂಲಕ ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇನ್ನು ಈ ಬಗ್ಗೆ ಸಚಿವ ಎಸ್​​​​​.ಟಿ ಸೋಮಶೇಖರ್ ಅವರು ಚಾಮರಾಜನಗರ ಇಂದು (ಸೆ.05) ಪ್ರತಿಕ್ರಿಯಿಸಿದ್ದು, ಸಿಎಂ ಬಸವರಾಜ್​​​ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಿದ್ದೇವೆ ಎಂದು ​ಸ್ಪಷ್ಟಪಡಿಸಿದರು.

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

ಕೇಂದ್ರ ಗೃಹ ಸಚಿವ ಅಮಿತ್​​ ಶಾ ಅವರ ಮಾತೇ ಅಂತಿಮ. ಅಮಿತ್​​​​​​ ಶಾ ಅವರು ಹೇಳಿದಂತೆ 2023ರ ವಿಧಾನಸಭಾ ಚುನಾವಣೆ ಸಿಎಂ ಬಸವರಾಜ್​​ ಬೊಮ್ಮಾಯಿ ನಾಯಕತ್ವದಲ್ಲೇ ಎದುರಿಸುತ್ತೇವೆ ಎಂದರು.

ಸಿಎಂ ಬಸವರಾಜ್​ ಬೊಮ್ಮಾಯಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುತ್ತಾರೆ. ಇವರು ಬಹಳ ಬುದ್ಧಿವಂತರು ಮತ್ತು ಸಮರ್ಥರು. ಈಗಲೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಸರ್ಕಾರ ನಡೆಸುತ್ತಿದ್ದಾರೆ ಎಂದು ಹೇಳಿದರು.