* ಬಿಜೆಪಿ ತೊರೆಯುತ್ತಾರೆ ಎನ್ನುವ ವದಂತಿಗೆ ಸ್ಪಷ್ಟನೆ ಕೊಟ್ಟ ಶಾಸಕ ಅರವಿಂದ್ ಬೆಲ್ಲದ್* ಸಾಮಾಜಿಕ ಜಾಲತಾಣಗಳ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ* ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ  ಅರವಿಂದ್ ಬೆಲ್ಲದ್

ಬೆಂಗಳೂರು, (ಸೆ.20):  ಅಚ್ಚರಿ ಎಂಬಂತೆ ಸಿಎಂ ರೇಸ್‌ನಲ್ಲಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್‌ಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನವೂ ಸಿಗಲಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರಿಂದ ಅವರು ತೀವ್ರ ಅಸಮಾಧಾನಗೊಂಡಿದ್ದು, ಬಿಜೆಪಿ ತೊರೆಯುತ್ತಾರೆ ಎನ್ನುವ ಗಾಸಿಪ್ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ.

ಸಿಗದ ಸಚಿವ ಸ್ಥಾನ: ಅತೃಪ್ತ ಶಾಸಕರಿಂದ ಸಭೆ, ಬೆಲ್ಲದ ಹೇಳಿದ್ದೇನು?

ಇದು ಸ್ವತಃ ಅರವಿಂದ್ ಬೆಲ್ಲದ್ ಕಿವಿಗೆ ಬಿದ್ದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ಕೊಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಹಾಗಾದ್ರೆ ಅವರ ಸ್ಪಷ್ಟನೆಯಲ್ಲಿ ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಆತ್ಮೀಯರೇ.
ಕೆಲ ಮಾಧ್ಯಮಗಳಲ್ಲಿ ನಾನು ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದೇನೆ ಎಂಬ ಸುಳ್ಳು ಹಾಗೂ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ. ಇದು ಸತ್ಯಕ್ಕೆ ದೂರವಾದ & ದುರುದ್ದೇಶಪೂರ್ವಕ ವರದಿ. ಸಾಮಾಜಿಕ ಜಾಲ ತಾಣಗಳಲ್ಲೂ ಇದೇ ಬಗೆಯ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಈ ವಿಚಾರವನ್ನು ನಾನು ನಿರ್ಲಕ್ಷಿಸಬಹುದಿತ್ತು. ಆದರೆ ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ.

ನಾನು ಬಿಜೆಪಿ ತೊರೆಯುವ / ಅನ್ಯ ಪಕ್ಷ ಸೇರುವುದನ್ನು ಕಾಯಾ, ವಾಚಾ, ಮನಸಾ ಕಲ್ಪಿಸಲೂ ಸಾಧ್ಯವಿಲ್ಲ. ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಹಬ್ಬಿರುವ ವದಂತಿಗೆ ಯಾರೂ ಬೆಲೆ ಕೊಡಬಾರದು ಎಂದು ಈ ಮೂಲಕ ಪ್ರಾರ್ಥಿಸುತ್ತೇನೆ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೂ ನಾನು ಸಿದ್ಧತೆ ನಡೆಸಿದ್ದೇನೆ ಎಂದಿದ್ದಾರೆ.