ನಾವು ಬಯಸಿದ ಕಾರ‍್ಯಕ್ರಮಗಳು ಬಿಜೆಪಿಯಲ್ಲಿ ಆಗಲಿಲ್ಲ. ಸರ್ಕಾರ ಜನರ ಸರ್ಕಾರವಾಗಿ ಉಳಿಯಲಿಲ್ಲ. ಯಾರು ಎಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ನಾನು ಯಾವುದೇ ನಿರ್ಧಾರ ಮಾಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಸ್ಪಷ್ಟನೆ ನೀಡಿದರು. 

ಚನ್ನಪಟ್ಟಣ (ಡಿ.14): ನಾವು ಬಯಸಿದ ಕಾರ‍್ಯಕ್ರಮಗಳು ಬಿಜೆಪಿಯಲ್ಲಿ ಆಗಲಿಲ್ಲ. ಸರ್ಕಾರ ಜನರ ಸರ್ಕಾರವಾಗಿ ಉಳಿಯಲಿಲ್ಲ. ಯಾರು ಎಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ನಾನು ಯಾವುದೇ ನಿರ್ಧಾರ ಮಾಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಸ್ಪಷ್ಟನೆ ನೀಡಿದರು. ಇತ್ತೀಚಿನ ನಿಧನರಾದ ಕನ್ನಡ ಹೋರಾಟಗಾರ ಸಿಂ.ಲಿಂ.ನಾಗರಾಜು ಪುಣ್ಯಸ್ಮರಣೆಯಲ್ಲಿ ಭಾಗವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಾಲಿಟಿಕ್ಸ್‌ ಕಮಾಂಡ್ಸ್‌ ದಿ ರೆಸ್ಪೆಕ್ಟ್ ನಾಟ್‌ ಡಿಮ್ಯಾಂಡ್‌. ಯಾವುದೇ ಪಕ್ಷ ಇರಲಿ ನಾನು ಗೌರವ ಬಯಸುತ್ತೇನೆಂದು ಮಾರ್ಮಿಕವಾಗಿ ನುಡಿದರು.

Add Asianetnews Kannada as a Preferred SourcegooglePreferred

ನಮ್ಮದು ಧರ್ಮಾತೀತ, ಜಾತ್ಯತೀತ ದೇಶ. ಯಾವುದೋ ಮಸೀದಿಗೆ ನುಗ್ಗುವುದು, ದೇವಸ್ಥಾನಕ್ಕೆ ಮುಸ್ಲಿಂರು ಬರಬಾರದು ಅನ್ನೋದು ಎಷ್ಟುಸರಿ. ಹಾಗಾದರೆ ದೇಶದಲ್ಲಿ 30 ಕೋಟಿ ಮುಸ್ಲಿಂರಿದ್ದಾರೆ. ಆಚೆ ಕಳುಹಿಸುತ್ತೀರಾ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಯಾವುದನ್ನ ಮಾಡಬೇಕು ಅದನ್ನ ಮಾಡೋಣ. ಟಿಪ್ಪು ವಿಚಾರವಾಗಿ ಒಂದು ನಡೆಯಿತು. ಅದರಿಂದ ಬಡವರಿಗೆ ಅನುಕೂಲ ಆಯ್ತಾ? ಏನು ಮಾಡಬೇಕೋ ಅದನ್ನ ಮಾಡಲಿ, ಇದರಿಂದ ಮನಸ್ಸಿಗೆ ಬೇಜಾರಾಗಿದೆ. 

ಹಳ್ಳಿ ಹಕ್ಕಿ ಮತ್ತೆ ಕಾಂಗ್ರೆಸ್‌ನತ್ತ?: ಖರ್ಗೆ ಬಳಿಕ ಸಿದ್ದು ಭೇಟಿ

ಮೀಸಲಾತಿ ವಿಚಾರವಾಗಿ ಸರ್ಕಾರ ಸರಿಯಾದ ಹೆಜ್ಜೆ ಹಾಕಲಿಲ್ಲ. ಚುನಾವಣೆ ಸಮೀಪಿಸುತ್ತಿದೆ ಎಂದು ಬನ್ನಿ ಕೊಡುತ್ತೇವೆ ಅಂದರೆ ಹೇಗೆಂದು ಪ್ರಶ್ನಿಸಿದ ಅವರು, ಅಂಬೇಡ್ಕರ್‌ ಹೇಳಿದ್ದಾರೆ ಯಾರಿಗೆ ಮೀಸಲಾತಿ ಕೊಡಬೇಕೆಂದು. ಈಗ ಎಸ್‌ಟಿ-ಎಸ್ಸಿಗೆ ನೀಡಿದ ಮೀಸಲಾತಿ ಏನಾಯ್ತು? ಪಾರ್ಲಿಮೆಂಟ್‌ನಲ್ಲಿ ಏನೆಂದು ಉತ್ತರ ಬಂತು? ಹಾಗಾಗಿ ಜನರನ್ನ ಸುಖಾಸುಮ್ಮನೆ ನಂಬಿಸುವುದ, ಸುಳ್ಳು ಹೇಳಬೇಡಿ ಎಂದು ಬಿಜೆಪಿ ವಿರುದ್ಧ ಕಿಡಕಾರಿದರು.

ಯಾರ ಜತೆಯೂ ಮಾತನಾಡಿಲ್ಲ: ರೆಬೆಲ್‌ ಶಾಸಕರು ಮತ್ತೆ ಕಾಂಗ್ರೆಸ್‌ಗೆ ಮರಳುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನಗೆ ಗೊತ್ತಿಲ್ಲ. ನಾನು ಯಾರ ಜೊತೆಯೂ ಮಾತನಾಡಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದರು.

ವಿಶೇಷ ಅರ್ಥವೇನಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದರಲ್ಲಿ ಯಾವುದೇ ವಿಶೇಷ ಇಲ್ಲ. ನಾನು ಶಿವಕುಮಾರ್‌ 40 ವರ್ಷದ ಸ್ನೇಹಿತರು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಾನು ಒಟ್ಟಿಗೆ ಲಾ ಮಾಡಿದವರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆಗೆ ನಾನು ಕೆಲಸ ಮಾಡಿದ್ದೇನೆ. ಹಾಗಾಗಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾವುದೇ ನಿರ್ಧಾರವನ್ನು ಮಾಡಿಲ್ಲ. ಮುಂದೆ ನೋಡೋಣ, ಈ ಅಸೆಂಬ್ಲಿ ಮುಗಿಯಲಿ ಎಂದರು.

ಸಿದ್ದರಾಮಯ್ಯ ಎಲ್ಲಿ ನಿಂತರೂ ಗೆಲ್ಲುತ್ತಾರೆ: ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌

ಈಗ ಸಚಿವ ಸ್ಥಾನ ನೀಡಿದರೂ ಅದು ನನಗೆ ಬೇಡ. ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ. ನಾವೆಲ್ಲ ಸೇರಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದೆವು. ನಾವು ಹೊರಗೆ ಬರದಿದ್ದರೆ ಸರ್ಕಾರ ಎಲ್ಲಿ ಬರುತ್ತಿತ್ತು. ಸರ್ಕಾರಿಂದ ಒಳ್ಳೆಯ ಕಾರ್ಯಕ್ರಮಗಳನ್ನ ನಿರೀಕ್ಷೆ ಮಾಡಿದ್ದೆವು. ಅದೆಲ್ಲವೂ ಸುಳ್ಳಾಯಿತು.
-ಎಚ್‌. ವಿಶ್ವನಾಥ್‌, ವಿಧಾನ ಪರಿಷತ್‌ ಸದಸ್ಯರು