ನವೆಂಬರ್ ಮೂರರಂದು ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು 10ರಂದು ಫಲಿತಾಂಶ ಪ್ರಕಟವಾಗಲಿದ್ದು, ಪಲಿತಾಂಶದ ಭವಿಷ್ಯ ನುಡಿಯಲಾಗಿದೆ. 

ಶಿವಮೊಗ್ಗ (ಅ.25):  ಉತ್ತರ ಕರ್ನಾಟಕ ಜಿಲ್ಲೆಗಳು ಹಾಗೂ ಬೆಂಗಳೂರಿನಲ್ಲಿ ಕೂಡ ನೆರೆ ಹಾವಳಿ ಉಂಟಾಗಿದೆ. ಕೊರೊನಾ ಮತ್ತು ನೆರೆ ಹಾವಳಿ ಎರಡು ಸಂಕಷ್ಟದ ನಡುವೆ ಕೆಲಸ ಮಾಡ ಬೇಕಿದ್ದು ಆದಷ್ಟು ಬೇಗ ಈ ಸಂಕಷ್ಟಗಳು ದೂರಾಗಲಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

Add Asianetnews Kannada as a Preferred SourcegooglePreferred

ಶಿವಮೊಗ್ಗದಲ್ಲಿಂದು ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ವೈ ಎರಡು ಕಡೆಗಳಲ್ಲಿ ನೆರೆ ವೀಕ್ಷಿಸಿ ಸೂಕ್ತ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು. 

ಚುನಾವಣೆಗೆ ವಿಚಾರ ಪ್ರಸ್ತಾಪ

ಆರ್ ಆರ್ ನಗರ ಮತ್ತು ಶಿರಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದ ಬಿ ಎಸ್ ವೈ ವಿಪಕ್ಷ ನಾಯಕ ರಿಗೆ ಎಲ್ಲಾ ಉಪ ಚುನಾವಣೆಯಲ್ಲಿ ಗೆಲ್ಲುವ ಮಾತು ಹೇಳಿದ್ದೆ. ಅದರಂತೆ ಎರಡು ಚುನಾವಣೆಯಲ್ಲಿ ಬಿಜೆಪಿ ಗೆದ್ದೆ ಗೆಲ್ಲುತ್ತದೆ ಎಂದರು.

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಿಂದ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ...

ಶಾಲೆ ಆರಂಭ ಯಾವಾಗ..?

ಶಾಲಾ ಕಾಲೇಜು ಆರಂಭದ ಬಗ್ಗೆ ಈಗಾಗಲೇ ಹಲವು ಚರ್ಚೆಗಳು ನಡೆದಿದ್ದು, ನ . 17 ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಆದರದೆ ಇದು ಬಲವಂತ ಅಲ್ಲ ಎಂದರು. ತಜ್ಞರ ಅಭಿಪ್ರಾಯ ಮೇರೆಗೆ ಕಾಲೇಜು ಆರಂಭ ಆಗಲಿದೆ ಎಂದರು. 

ನವೆಂಬರ್ ಮೂರರಂದು ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು 10ರಂದು ಫಲಿತಾಂಶ ಪ್ರಕಟವಾಗಲಿದೆ