ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ಮಾತನಾಡುತ್ತಿರುವ ಮಾಜಿ ಸಚಿವ ಜಮೀರ್‌ ಅಹಮದ್‌ ಅವರಿಗೆ ನಾಚಿಕೆಯಾಗಬೇಕು  ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್‌ ಟೀಕೆ

 ಬೆಂಗಳೂರು (ಅ.18): ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ಮಾತನಾಡುತ್ತಿರುವ ಮಾಜಿ ಸಚಿವ ಜಮೀರ್‌ ಅಹಮದ್‌ (zameer Ahmed) ಅವರಿಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್‌ (JDS) ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್‌ (zafrulla khan) ಟೀಕಿಸಿದ್ದಾರೆ.

Add Asianetnews Kannada as a Preferred SourcegooglePreferred

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಜೆಡಿಎಸ್‌ನಲ್ಲಿದ್ದು ಬೆಳೆದವರು ಜಮೀರ್‌. ಕುಮಾರಸ್ವಾಮಿ (Kumaraswamy) ಅವರನ್ನು ಅಣ್ಣ ಅಣ್ಣ ಎನ್ನುತ್ತಿದ್ದವರು ಈಗ ಕಾಂಗ್ರೆಸ್‌ ಸೇರಿ ಅವರ ವಿರುದ್ಧವೇ ಮಾತನಾಡುತ್ತಿದ್ದಾರೆ. ಅಂತಹವರಿಗೆ ನಾಚಿಕೆಯಾಗಬೇಕು. ಹಿಂದೆ ಜೆಡಿಎಸ್‌ನಿಂದ (JDS) ಗೆದ್ದು ಸಚಿವರಾಗಿ ಮೂರು ನಾಲ್ಕು ಖಾತೆ ತೆಗೆದುಕೊಂಡು ಅನುಭವಿಸಿ ಈಗ ಅವರ ವಿರುದ್ಧವೇ ಮಾತಾಡುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು (Devegowda), ಕುಮಾರಸ್ವಾಮಿ ಬಗ್ಗೆ ಮಾತನಾಡಿದರೆ ನಾವು ಸುಮ್ಮನಿರುವುದರಿಲ್ಲ. ಕಾಂಗ್ರೆಸ್‌ವರಿಗೆ (Congress) ಅಲ್ಪಸಂಖ್ಯಾತರ ಮೇಲೆ ಪ್ರೀತಿ ಇದ್ದರೆ ವರುಣಾ ಮತ್ತು ಕನಕಪುರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್‌ (Ticket) ನೀಡಲಿ ಎಂದು ಸವಾಲು ಹಾಕಿದರು. ಸಮಯ ಬಂದರೆ ಜಮೀರ್‌ ವಿರುದ್ದವೂ ಸ್ಪರ್ಧೆಗೆ ನಾನು ಸಿದ್ದ ಎಂದು ಹೇಳಿದರು.

ಕುಮಾರಸ್ವಾಮಿ ವಿರುದ್ಧ 'ಡೀಲ್' ಬಾಂಬ್ ಸಿಡಿಸಿದ ಜಮೀರ್ ಅಹಮ್ಮದ್

ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಒಬ್ಬರೇ ಅಲ್ಪಸಂಖ್ಯಾತರ ನಾಯಕರು ಎಂದು ಹೇಳಿರುವ ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಅವರಿಗೆ ನಾಚಿಕೆಯಾಗಬೇಕು, ಅವರಿಗೆ ಆ ರೀತಿ ಹೇಳಿಕೆ ನೀಡಲು ಅಧಿಕಾರ ಕೊಟ್ಟವರಾರ‍ಯರು ಎಂದು

ಸಿದ್ದರಾಮಯ್ಯ ಅವರು ಮಾತ್ರ ಅಲ್ಪಸಂಖ್ಯಾತ ನಾಯಕರು ಎನ್ನುವುದಾದರೆ ಡಿ.ಕೆ.ಶಿವಕುಮಾರ್‌ (DK Shivakumar), ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ ಉಳಿದ ನಾಯಕರ ಕೊಡುಗೆ ಏನೂ ಇಲ್ವಾ? ಸಿದ್ದರಾಮಯ್ಯ ಅವರು ಮಾತ್ರವೇ ಅಲ್ಪಸಂಖ್ಯಾತರ ನಾಯಕ ಎಂದು ಹೇಳಲು ಅನ್ಸಾರಿ ಅವರಿಗೆ ಅಧಿಕಾರ ಯಾರು ಕೊಟ್ಟರು. ಕಾಂಗ್ರೆಸ್‌ನವರಿಗೆ ನಿಜವಾಗಲೂ ಮುಸ್ಲಿಮರ ಮೇಲೆ ಪ್ರೀತಿಯಿದ್ದಿದ್ದರೆ ಉಪಚುನಾವಣೆಯಲ್ಲಿ (By Election) ಅಲ್ಪಸಂಖ್ಯಾತರೇ ಹೆಚ್ಚಿರುವ ಕ್ಷೇತ್ರಗಳಿಗೆ ಯಾಕೆ ಮುಸ್ಲಿಂ (Muslim) ಅಭ್ಯರ್ಥಿಗಳಿಗೆ ಟಿಕೆಟ್‌ (ticket) ಕೊಟ್ಟಿಲ್ಲ. ಇದು ಇಸ್ಲಾಂ ಧರ್ಮಕ್ಕೆ ಮಾಡಿದ ಅಪಮಾನ. ಕಾಂಗ್ರೆಸ್‌ನವರು ಅಲ್ಪಸಂಖ್ಯಾತರನ್ನು ಮೂಲೆಗೆ ಕೂರಿಸಿದ್ದಾರೆ ಎಂದು ಕಿಡಿಕಾರಿದರು.

ಇದೇ ವೇಳೆ ಮಾಜಿ ಸಚಿವ ಜಮೀರ್‌ ಅಹಮದ್‌ ವಿರುದ್ಧವೂ ಕಿಡಿಕಾರಿದ ಅವರು,

ಎಲ್ಲದ್ದಕ್ಕೂ ನಾನು ಉತ್ತರ ಕೊಡೋಕೆ ರೆಡಿ ಇದ್ದೇನೆ. ನಾನು ಯಾವತ್ತು ಟಿಕೆಟ್‌ ಕೊಡಿ ಅಂತ ವರಿಷ್ಠರಲ್ಲಿ ಕೇಳಿಲ್ಲ. ನಾನು ಎಲ್ಲೇ ಟಿಕೆಟ್‌ ಕೇಳಿದರೂ ಜೆಡಿಎಸ್‌ ವರಿಷ್ಠರು ಕೊಡುತ್ತಾರೆ.