ವಿಧಾನಸಭೆ ಅಧಿವೇಶನ 31  ನೇ ದಿನಾಂಕದ ವರೆಗೆ ನಡೆಯಬೇಕಿತ್ತು/ ಪರಿಸ್ಥಿತಿ ಕಾರಣದಿಂದ ಅನಿವಾರ್ಯವಾಗಿ ನೆನ್ನೆಯೇ ಮುಗಿಸಬೇಕಾಯಿತು/ 13 ದಿನ ಕಲಾಪ ನಡೆದಿದೆ, ಒಟ್ಟು 44 ಗಂಟೆಗಳ ಕಾಲ ಕಲಾಪ ನಡೆದಿದೆ/ ನಡೆದ ಅಷ್ಟು ದಿನಗಳ ಕಾಲ ವ್ಯವಸ್ಥಿತವಾಗಿ ಕಲಾಪ ನಡೆದಿದ/ ನಾನು ಸಭಾದ್ಯಕ್ಷನಾದ ಕ್ಷಣದಿಂದ ಸಂಸದೀಯ ವ್ಯವಸ್ಥೆ ಗಳಿಗೆ ಮೌಲ್ಯ ತುಂಬುವ ಪ್ರಯತ್ನ ಮಾಡಿದ್ದೇನೆ/ ಸಚಿವರು, ಶಾಸಕರ ಪಾಲ್ಗೊಳ್ಳುವಿಕೆ ಗಮನಿಸಿದಾಗ ಅವರು ಇನ್ನೂ ಉತ್ತಮ ವಾಗಿ ಸ್ಪಂದಿಸಬಹುದಿತ್ತು/ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಹೇಳಿಕೆ

ಬೆಂಗಳೂರು(ಮಾ. 25) ವಿಧಾನಸಭೆ ಅಧಿವೇಶನ ಮಾರ್ಚ್ 31 ರವರೆಗೆ ನಡೆಯಬೇಕಿತ್ತು. ಪರಿಸ್ಥಿತಿ ಕಾರಣದಿಂದ ಅನಿವಾರ್ಯವಾಗಿ ಬುಧವಾರವೇ ಮುಗಿಸಬೇಕಾಯಿತು. 13 ದಿನ ಕಲಾಪ ನಡೆದಿದೆ, ಒಟ್ಟು 44 ಗಂಟೆಗಳ ಕಾಲ ಕಲಾಪ ನಡೆದಿದೆ. ನಡೆದ ಅಷ್ಟು ದಿನಗಳ ಕಾಲ ವ್ಯವಸ್ಥಿತವಾಗಿ ಕಲಾಪ ನಡೆದಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಧ್ವರ ಹೆಗಡೆ ಕಾಗೇರಿನ ತಿಳಿಸಿದರು.

Add Asianetnews Kannada as a Preferred SourcegooglePreferred

ನಾನು ಸಭಾದ್ಯಕ್ಷನಾದ ಕ್ಷಣದಿಂದ ಸಂಸದೀಯ ವ್ಯವಸ್ಥೆ ಗಳಿಗೆ ಮೌಲ್ಯ ತುಂಬುವ ಪ್ರಯತ್ನ ಮಾಡಿದ್ದೇನೆ.ಸಚಿವರು, ಶಾಸಕರ ಪಾಲ್ಗೊಳ್ಳುವಿಕೆ ಗಮನಿಸಿದಾಗ ಅವರು ಇನ್ನೂ ಉತ್ತಮ ವಾಗಿ ಸ್ಪಂದಿಸಬಹುದಿತ್ತು. ಸಚಿವರು, ಶಾಸಕರು, ಅಧಿಕಾರಿಗಳಿಗೆ ಸ್ವಯಂ ಜಾಗೃತಿ ಮೂಡಬೇಕು. ಆಗ ಮಾತ್ರ ಕಲಾಪಕ್ಕೆ ಅರ್ಥ ಬರುತ್ತದೆ. ಅಧಿವೇಶನ ನಡೆಯುವ ಅಷ್ಟೂ ದಿನ ಬೇರೆ ಕಾರಣಗಳಿಗೆ ಗೈರಾಗುವುದು, ಭಾಗವಹಿಸಿದರೂ ವ್ಯರ್ಥ ಹರಣ ಮಾಡುವುದು ಮಾಡಬಾರದು. ಇತ್ತೀಚಿಗೆ ಮಂತ್ರಿಗಳು, ಶಾಸಕರು ನನ್ನ ಬಳಿ ಬಂದು ಅನುಪಸ್ಥಿತಿಗೆ ಕಾರಣಗಳನ್ನು ಕೊಟ್ಟು ಗೈರಾಗುವುದು ಹೆಚ್ಚಾಗುತ್ತಿದೆ. ಅನಿವಾರ್ಯ ಪರಿಸ್ಥಿತಿ ಇದ್ದಾಗ ಸರಿ, ಆದರೆ ಸಣ್ಣಪುಟ್ಟ ಕಾರಣಗಳಿಗೆ ಕಾರಣ ನೀಡಿ ಗೈರಾಗಬಾರದು ಎಂದರು.

ಅಂಗಿ ಬಿಚ್ಚಿದ ಸಂಗಮೇಶ್‌ಗೆ ಕೊಟ್ಟ ಶಿಕ್ಷೆ ಎಂಥದ್ದು?

ಪ್ರತಿಪಕ್ಷ ನಡೆದುಕೊಂಡ ರೀತಿ ಅತ್ಯಂತ ನೋವು ತಂದಿದೆ. ಪ್ರತಿಪಕ್ಷವಾಗಿ ಆಡಳಿತ ಪಕ್ಷದ ಸಭಾನಾಯಕರಿಗೆ ಇರುವಷ್ಟೇ ಜವಾಬ್ದಾರಿ ಇರುತ್ತದೆ. ಸಂಸದೀಯ ವ್ಯವಸ್ಥೆ ಗೆ ಶಕ್ಕಿ ಬರಬೇಕಾದರೆ ಪ್ರತಿಪಕ್ಷವೂ ಜವಾಬ್ದಾರಿ ಯುತವಾಗಿ ನಡೆದು ಕೊಳ್ಳಬೇಕು. ಒಂದು ರಾಷ್ಟ್ರ,ಒಂದು ಚುನಾವಣೆ ವಿಚಾರದಲ್ಲಿ ಎರಡು ದಿನ ಚರ್ಚೆಗೆ ತೆಗೆದುಕೊಳ್ಳಲು ಬಯಸಿದ್ದೆ. ಆದರೆ ಇದು ಚರ್ಚೆ ಆಗಲೇ ಇಲ್ಲ, ಅವರ ಅಭಿಪ್ರಾಯ ಗಳನ್ನು ವ್ಯಕ್ತ ಪಡಿಸಬೇಕಿತ್ತು. ಭಿನ್ನಾಭಿಪ್ರಾಯ ಗಳು ಇರುವುದು ಸಹಜ ಅದನ್ನಾದರೂ ವ್ಯಕ್ತ ಪಡಿಸಬೇಕಿತ್ತು ಎಂದು ಕಾಂಗ್ರೆಸ್ ನ ನೀತಿಯ ಬಗ್ಗೆ ಹೇಳಿದರು.