ಅಹ್ಮದ್‌ ಪಟೇಲ್‌ ಅವರ ನಿಧನದಿಂದ ತೆರವಾಗಿದ್ದ ಕಾಂಗ್ರೆಸ್ ಪಕ್ಷದ ಖಜಾಂಚಿ ಹುದ್ದೆಗೆ ಹೊಸಬರನ್ನ ನೇಮಕ ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ನವದೆಹಲಿ, (ನ.28): ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ನೇಮಕ ಮಾಡಲಾಗಿದೆ.

Add Asianetnews Kannada as a Preferred SourcegooglePreferred

ತಕ್ಷಣದಿಂದ ಜಾರಿಯಾಗುವಂತೆ ಬರುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು (ಶನಿವಾರ) ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಅಹ್ಮದ್‌ ಭಾಯಿ ಇಲ್ಲದ ಕಾಂಗ್ರೆಸ್, ಗಾಂಧಿ ಕುಟುಂಬದ ಕಥೆಯೇನು?

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಪ್ರಕಟಣೆ ಹೊರಡಿಸಿದ್ದು, ಅಹ್ಮದ್‌ ಪಟೇಲ್‌ ಅವರ ನಿಧನದಿಂದಾಗಿ ಈ ಸ್ಥಾನ ತೆರವಾಗಿತ್ತು. ಅಖಿಲ ಭಾರತ ಕಾಂಗ್ರೆಸ್‌ ಸಮಿತಿ(ಎಐಸಿಸಿ) ಆಡಳಿತದ ಹೊಣೆ ಹೊತ್ತಿರುವ ಬನ್ಸಾಲ್‌ ಅವರು, ಮಧ್ಯಂತರ ಕ್ರಮವಾಗಿ ತಕ್ಷಣದಿಂದ ಜಾರಿಯಾಗುವಂತೆ ಹೆಚ್ಚುವರಿಯಾಗಿ ಈ ಹುದ್ದೆಯನ್ನು ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಹ್ಮದ್‌ ಪಟೇಲ್‌ ಅವರ ಕಾಂಗ್ರೆಸ್‌ ಪಕ್ಷದ ಖಜಾಂಚಿಯಾಗಿದ್ದರು. ಆದ್ರೆ, ಅವರ ಅಕಾಲಿಕ ನಿಧನದಿಂದ ಖಜಾಂಚಿ ಹುದ್ದೆ ಖಾಲಿಯಾಗಿತ್ತು.