ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ. ಮೈಸೂರು ಅರಸರಿಗೂ ಜೈನರಿಗೂ ಅವಿನಾಭಾವ ಸಂಬಂಧವಿದೆ. ಇದು ಮುಂದುವರಿದುಕೊಂಡು ಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚುನಾಯಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸಬೇಕು ಎಂದ ಯದುವೀರ್ 

ಬಳ್ಳಾರಿ(ಮೇ.05): ನಗರದ ಜೈನ ಮಾರುಕಟ್ಟೆ, ತಾಲೂಕಿನ ಗೋನಾಳ್ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಮೈಸೂರಿನ ರಾಜಮನೆತನದ ಯದುವೀರ್ ಶನಿವಾರ ಪ್ರಚಾರ ನಡೆಸಿದರು. ಇಲ್ಲಿನ ಜೈನ ಮಾರುಕಟ್ಟೆಗೆ ಭೇಟಿ ನೀಡಿದ ಯದುವೀರ್‌ ಸ್ಥಳೀಯರು, ಮುಖಂಡರ ಸಭೆ ನಡೆಸಿ, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚುನಾಯಿಸುವಂತೆ ಮನವಿ ಮಾಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ. ಮೈಸೂರು ಅರಸರಿಗೂ ಜೈನರಿಗೂ ಅವಿನಾಭಾವ ಸಂಬಂಧವಿದೆ. ಇದು ಮುಂದುವರಿದುಕೊಂಡು ಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚುನಾಯಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸಬೇಕು ಎಂದರು.

SRI RAMULU VS E TUKARAM: ಯಾರ ಪಾಲಾಗುತ್ತೆ ಬಿಜೆಪಿ ಭದ್ರ ಕೋಟೆ..? ಯಾರ ಪರ ಬಳ್ಳಾರಿ ಮತದಾರನ ಒಲವು..?

ದಲಿತ ಕೇರಿಯಲ್ಲಿ ಯದುವೀರ್ ಪ್ರಚಾರ:

ನಗರದ 17ನೇ ವಾರ್ಡ್ ವ್ಯಾಪ್ತಿಯ ಗೋನಾಳ್ ಗ್ರಾಮದ ದಲಿತಕೇರಿಗೆ ಯದುವೀರ್ ಭೇಟಿ ನೀಡಿದಾಗ ಸ್ಥಳೀಯರು ಪುಷ್ಪಾರ್ಪಣೆ ಮಾಡಿ ಸ್ವಾಗತಿಸಿಕೊಂಡರು. ಮನೆಮನೆಗೆ ತೆರಳಿ ಪ್ರಚಾರ ನಡೆಸಿದ ಯುದುವೀರ್, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಸ್ಥಳೀಯರಲ್ಲಿ ಮನವಿ ಮಾಡಿದರು. ಇದೇ ವೇಳೆ ದಲಿತ ಮಹಿಳೆಯ ಮನೆಗೆ ಭೇಟಿ ನೀಡಿದ ಯದುವೀರ್ ಎಳನೀರು ಸ್ವೀಕರಿಸಿದರು.

ನೀವು ಬಂದದ್ದು ಬಹಳಷ್ಟು ಸಂತಸವಾಗಿದೆ. ರಾಜರನ್ನು ಹುಡುಕಿಕೊಂಡು ಹೋಗುವ ಕಾಲವಿತ್ತು. ಆದರೆ, ರಾಜಮನೆತನದ ಯದುವೀರ್ ದಲಿತ ಕೇರಿಗೆ ಆಗಮಿಸಿದ್ದು ಸಂತಸ ತಂದಿದೆ ಎಂದು ಸ್ಥಳೀಯರು ಸಂಭ್ರಮದಿಂದ ಹೇಳಿಕೊಂಡರು.
ಇದೇ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಯದುವೀರ್, ಇದೇ ಮೊದಲ ಬಾರಿಗೆ ಬಳ್ಳಾರಿಗೆ ಬಂದಿರುವೆ. ಈ ಹಿಂದೆ ಅಂಜನಾದ್ರಿ ಬೆಟ್ಟಕ್ಕೆ ಸಾಕಷ್ಟು ಬಾರಿ ಬಂದಿರುವೆ. ಶಾಲಾ ದಿನಗಳ ಪ್ರವಾಸದಲ್ಲಿ ಹಂಪಿಗೆ ಆಗಮಿಸಿ, ವಿರೂಪಾಕ್ಷೇಶ್ವರ ದರ್ಶನ ಪಡೆದಿದ್ದೇನೆ. ಇದೀಗ ಶ್ರೀರಾಮುಲು ಪರ ಪ್ರಚಾರ ನಡೆಸಲು ಬಳ್ಳಾರಿಗೆ ಬಂದಿರುವೆ ಎಂದರು.

Interview: ವರ್ಷದ ಹಿಂದೆ ಸೋತಿರಬಹುದು, ಆದರೆ ಈ ಚುನಾವಣೆ ಗೆಲ್ಲುತ್ತೇನೆ -ಶ್ರೀರಾಮುಲು

ಮೈಸೂರು ಮಹಾರಾಜರು ಈ ಹಿಂದಿನಿಂದಲೂ ಜನಸಾಮಾನ್ಯರೊಂದಿಗೆ ಇದ್ದವರು. ಮಹಾರಾಜರ ಕಾಲದಲ್ಲಿಯೇ ಮೀಸಲಾತಿ ಜಾರಿಗೆ ಬಂದಿದ್ದು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ರಾಜ ಕುಟುಂಬದವನಾದರೂ ನಾನು ಜನರ ಜೊತೆ ಇರಲು ಬಯಸುತ್ತೇನೆ ಎಂದರು.

ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಮಾಜಿ ಬುಡಾಧ್ಯಕ್ಷ ಮಾರುತಿ ಪ್ರಸಾದ್, ಎಚ್‌.ಹನುಮಂತಪ್ಪ, ಡಾ.ಮಹಿಪಾಲ್, ಕೆ.ಎಂ. ಮಹೇಶ್ವರಸ್ವಾಮಿ ಇದ್ದರು. ದಲಿತಕೇರಿಯ ಯುವಕರು, ಮಕ್ಕಳು ಯದುವೀರ್‌ ಜತೆ ಫೋಟೋ ಕ್ಲಿಕ್ಕಿಸಿಕೊಂಡರು.