ಸಂಜೆ 4.30ಕ್ಕೆ ಮೋದಿ ಅವರು ಸಂವಾದ ನಡೆಸಲಿದ್ದು, ಬೂತ್ ಅಧ್ಯಕ್ಷರಲ್ಲದೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೋರ್‌ಕಮಿಟಿ ಸದಸ್ಯರು, ಲೋಕಸಭಾ ಅಭ್ಯರ್ಥಿಗಳು, ಶಾಸಕರು ಭಾಗವಹಿಸಲಿದ್ದಾರೆ 

ಬೆಂಗಳೂರು(ಏ.05): ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ 'ನಮೋ ಆ್ಯಪ್' ಮೂಲಕ ಸಂವಾದ ನಡೆಸಲಿದ್ದಾರೆ.

Add Asianetnews Kannada as a Preferred SourcegooglePreferred

ಸಂಜೆ 4.30ಕ್ಕೆ ಮೋದಿ ಅವರು ಸಂವಾದ ನಡೆಸಲಿದ್ದು, ಬೂತ್ ಅಧ್ಯಕ್ಷರಲ್ಲದೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೋರ್‌ಕಮಿಟಿ ಸದಸ್ಯರು, ಲೋಕಸಭಾ ಅಭ್ಯರ್ಥಿಗಳು, ಶಾಸಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಕ್ಕೆ 358 ಅಭ್ಯರ್ಥಿಗಳ ನಾಮಪತ್ರ

ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೆ ಹೆಚ್ಚಿನ ಮನ್ನಣೆ ನೀಡಲಾಗುತ್ತದೆ. ಬೂತ್‌ಗಳು ಬಲಶಾಲಿಯಾಗಿದ್ದರೆ ಗೆಲುವು ಸುಲಭ ಎಂಬ ಅಭಿಪ್ರಾಯವಿದೆ. ಹೀಗಾಗಿ, ಮೋದಿ ಅವರು ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಾಗಿರುವ ಪ್ರಚಾರದ ಕುರಿತು ಬೂತ್‌ ಅಧ್ಯಕ್ಷರಿಗೆ ಸಲಹೆ ನೀಡಲಿದ್ದಾರೆ.