ಪಿಇಎಸ್‌ ಎಂಜಿನಿಯರಿಂಗ್‌ ಕಾಲೇಜು ಮೈದಾನದಿಂದ ಗೆಜ್ಜಲಗೆರೆವರೆಗೆ ರೋಡ್‌ಶೋ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ ಬಳಿಕ ಬೃಹತ್‌ ಸಮಾವೇಶ. 

ಮಂಡ್ಯ(ಮಾ.08): ಪ್ರಧಾನಿ ನರೇಂದ್ರ ಮೋದಿಯವರು ಮಾ.12ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಮಂಡ್ಯದಲ್ಲಿ ಮೈ-ಬೆಂ ಹೆದ್ದಾರಿ ಉದ್ಘಾಟನೆ, ರೋಡ್‌ ಶೋ ಮತ್ತು ಬೃಹತ್‌ ಸಮಾವೇಶ ನಡೆಸಲಿದ್ದಾರೆ. ಬಳಿಕ, ಹುಬ್ಬಳ್ಳಿಯಲ್ಲಿ ಐಐಟಿಯ ನೂತನ ಕಟ್ಟಡ ಉದ್ಘಾಟಿಸಿ, ಬೃಹತ್‌ ಸಮಾವೇಶ ನಡೆಸಲಿದ್ದಾರೆ.

Add Asianetnews Kannada as a Preferred SourcegooglePreferred

ಬೆಳಗ್ಗೆ ಮಂಡ್ಯದ ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜು ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸುವ ಮೋದಿ, ಪಿಇಎಸ್‌ ಕಾಲೇಜಿನಿಂದ ಗೆಜ್ಜಲಗೆರೆಯವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಬಳಿಕ ಗೆಜ್ಜಲಗೆರೆಯ ಕೈಗಾರಿಕಾ ಪ್ರದೇಶದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ, ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಮೋದಿ ಉದ್ಘಾಟಿಸಲಿದ್ದಾರೆ.

ಡಿ.ಕೆ.ಶಿವಕುಮಾರ್‌, ಕುಮಾರಸ್ವಾಮಿಯಿಂದ ಜಾತಿ ರಾಜಕಾರಣ: ಸಿ.ಟಿ.ರವಿ

ಈ ಹಿನ್ನೆಲೆಯಲ್ಲಿ ಮಾ.12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ಅಧೀಕ್ಷಕ ಎನ್‌.ಯತೀಶ್‌ ತಿಳಿಸಿದ್ದಾರೆ. ಮೈಸೂರಿನಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳಿಗೆ ಮೈಸೂರು-ಬನ್ನೂರು-ಕಿರುಗಾವಲು - ಮಳವಳ್ಳಿ -ಹಲಗೂರು - ಕನಕಪುರ - ಬೆಂಗಳೂರು ಮಾರ್ಗವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ವಾಹನಗಳಿಗೆ ಬೆಂಗಳೂರು-ಚನ್ನಪಟ್ಟಣ- ಹಲಗೂರು-ಮಳವಳ್ಳಿ-ಕಿರುಗಾವಲು-ಬನ್ನೂರು-ಮೈಸೂರು ಮಾರ್ಗವಾಗಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳನ್ನು ಬೆಂಗಳೂರು-ಚನ್ನಪಟ್ಟಣ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ಅವರು ತಿಳಿಸಿದರು.