ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾದ ಕಾರಣ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇಂತಹ ಘಟನೆಗಳ ಆರಂಭವಿದಾಗಿದ್ದು, ಕಾಂಗ್ರೆಸ್ ಕಾಲದಲ್ಲಿ ಈ ಹಿಂದಿನಂಥ ಸ್ಥಿತಿ‌ ನಿರ್ಮಾಣವಾಗಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಆತಂಕ ವ್ಯಕ್ತಪಡಿಸಿದ್ದಾರೆ.  

ವರದಿ: ಕಿರಣ್ಎಲ್ ತೊಡರನಾಳ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿತ್ರದುರ್ಗ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗ (ಮಾ.07): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾದ ಕಾರಣ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದೆ. ಇಂತಹ ಘಟನೆಗಳ ಆರಂಭವಿದಾಗಿದ್ದು, ಕಾಂಗ್ರೆಸ್ ಕಾಲದಲ್ಲಿ ಈ ಹಿಂದಿನಂಥ ಸ್ಥಿತಿ‌ ನಿರ್ಮಾಣವಾಗಲಿದೆ ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಆತಂಕ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬೂತ್ ಪ್ರಮುಖರ ಸಭೆಯಲ್ಲಿ ಪಾಲ್ಗೋಳ್ಳುವ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೆ ಯಾವುದೇ ಬಾಂಬ್ ಸ್ಪೋಟ ಆಗುತ್ತಿರಲಿಲ್ಲ ಎಂದು ಹೇಳಿದರು.

ಬಾಂಬರ್ ಬಂಧನ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಆಗುತ್ತಿದ್ದು, ಪೊಲೀಸರಿಗೆ ಫ್ರೀಹ್ಯಾಂಡ್ ಇಲ್ಲದ ಕಾರಣ ಬಾಂಬರ್ ಬಂಧನ ವಿಳಂಬ ಆಗುತ್ತಿದೆ ಎಂದು ಕಿಡಿಕಾರಿದರು‌. ಬಿಜೆಪಿ ಎಂದಿಗೂ ಕೂಡ ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ವಿಭಜನೆ ಮಾಡುವುದಿಲ್ಲ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬಿಜೆಪಿಯ ಮೂಲಮಂತ್ರ ಆಗಿದೆ. ಆದರೆ ಕಾಂಗ್ರೆಸ್ ಅಂದರೆ ಸ್ಕ್ಯಾಮ್, ಕಾಂಗ್ರೆಸ್ ಅಂದರೆ ಕರಪ್ಟ್ ಆಗಿದ್ದು, ಕಾಂಗ್ರೆಸ್ ಜನರನ್ನು ವಿಭಜನೆ‌ ಮಾಡುತ್ತದೆ. ಇಂತಹ ಕರಪ್ಟ್ ಕಾಂಗ್ರೆಸ್ ನ್ನು ಮನೆಗೆ ಕಳಿಸಿ ಡಬಲ್ ಇಂಜಿನ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು.

ಮಂಡ್ಯದಲ್ಲಿ ಸಾಫ್ಟ್‌ವೇರ್ ಪಾರ್ಕ್ ಮಾಡೇ ಮಾಡ್ತೇನೆ: ಶಾಸಕ ಪಿ.ರವಿಕುಮಾರ್

ರಾಜ್ಯದಲ್ಲಿ ಡಬಲ್ ಇಂಜನ್‌ ಸರ್ಕಾರವಿದ್ದಾಗ ಅಭಿವೃದ್ಧಿ ಕಾರ್ಯಗಳು ಹೆಚ್ಚಾಗಿ ನಡೆಯುತ್ತಿದ್ದವು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿಂದ ಅಭಿವೃದ್ಧಿ ಕಾರ್ಯಗಳಿಗೆ ಬ್ರೇಕ್ ಬಿದ್ದಿದೆ‌. ಹಾಗಾಗಿ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿ ಸರ್ಕಾರ ಆಡಳಿತಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ಭರವಸೆ ಇದೆ ಎಂದು ಹೇಳಿದರು. ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದಿದ್ದು, ಚುನಾವಣೆಗೆ ಮುನ್ನಾ ಘೋಷಿಸಿದ ಒಂದು ಗ್ಯಾರಂಟಿಯೂ ಪೂರ್ಣಗೊಳಿಸಿಲ್ಲ. ಕರ್ನಾಟಕ ರಾಜ್ಯದ ಜನರಿಗೆ ಈಗಾಗಲೇ ಇದು ಅನುಭವಕ್ಕೆ ಬಂದಿದೆ.

ಕೆಆರ್‌ಎಸ್‌ ಜಲಾಶಯದ ಟ್ರಯಲ್ ಬ್ಲಾಸ್ಟ್ ಹಿಂದೆ ಅಕ್ರಮ ಗಣಿ ಲಾಬಿ: ಸಂಸದೆ ಸುಮಲತಾ ಆರೋಪ

ಕರ್ನಾಟಕದ ಜನ ಈಗ ಪಶ್ಚಾತ್ತಾಪ ಪಡುವಂತಾಗಿದೆ ಎಂದು ಹೇಳಿದ ಅವರು, ಬೈ ಮಿಸ್ಟೇಕ್ ಕಾಂಗ್ರೆಸ್ ಆಡಳಿತ ನಡೆಸಲು ಅವಕಾಶ ನೀಡಿದ ಭಾವನೆ ಜನರಲ್ಲಿದ್ದು, ಶೀಘ್ರದಲ್ಲೇ ಮತ್ತೊಮ್ಮೆ ಡಬಲ್‌ ಇಂಜಿನ್ ಸರ್ಕಾರ ಬರುವ ವಿಶ್ವಾಸವಿದೆ ಎಂದರು. 70ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಲಾಗದ ಸಾಧನೆ ಮೋದಿ ಕಾಲದಲ್ಲಾಗಿದೆ. ಎಲ್ಲಾ ವಿಭಾಗದಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳಾಗಿವೆ. ಹಾಗಾಗಿ ರಾಜ್ಯದ 28 ಕ್ಕೆ 28 ಕ್ಷೇತ್ರದಲ್ಲಿ ಎನ್ ಡಿಎಗೆ, ಮೋದಿಗೆ ಗೆಲುವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.