Asianet Suvarna News Asianet Suvarna News

ಕಾಂಗ್ರೆಸ್‌ ಸರ್ಕಾರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ: ಸುಧಾಕರ್ ವಾಗ್ದಾಳಿ

ಈ ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. 

Protection of the country by one vote of the people in the Lok Sabha elections Says Dr K Sudhakar gvd
Author
First Published Apr 12, 2024, 4:47 PM IST

ಚಿಕ್ಕಬಳ್ಳಾಪುರ (ಏ.12): ಈ ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಹಳೇಹಳ್ಳಿ, ಶ್ಯಾಂಪುರ, ಗೌಡಗೆರೆ, ಪುರ, ಜರಬಂಡಹಳ್ಳಿ, ಮಿಣಕನಗುರ್ಕಿ, ಮಂಚೇನಹಳ್ಳಿಯಲ್ಲಿ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ಈ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ 400 ಮೀರಿ ಸ್ಥಾನಗಳು ಲಭ್ಯವಾಗಲಿದೆ. 

ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳಿಗೆ 40 ಸ್ಥಾನ ಲಭ್ಯವಾಗಲಿದೆ. ಮೋದಿಗೆ ಜೈಕಾರ ಹಾಕುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಾರೆ. ಆದರೆ ಫಲಿತಾಂಶದ ದಿನ ಭಾರತೀಯರು ಕಾಂಗ್ರೆಸ್‌ಗೆ ಕಪಾಳ ಮೋಕ್ಷ ಮಾಡಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಪ್ರಧಾನಿ ನರೇಂದ್ರ ‌ಮೋದಿಯವರ ಸಮಾಗಮಕ್ಕೆ‌ ಜನರು ಮತ ನೀಡಲಿದ್ದಾರೆ ಎಂದರು. ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಹಣ ಖಾಲಿ ಮಾಡಿಕೊಂಡಿದೆ. ನಂತರ ಕೇಂದ್ರ ಸರ್ಕಾರದ ಮುಂದೆ ಭಿಕ್ಷಾ ಪಾತ್ರೆ ಹಿಡಿದುಕೊಂಡು ನಿಂತಿದೆ. ಇವರು ಬಂದಾಗೆಲ್ಲ ಬರಗಾಲ ಬರುತ್ತದೆ. 

ನಾನು ಹಿಟ್ಲರ್‌ ಆಗಿದ್ದರೆ ವಿನಯ್‌ ಕುಲಕರ್ಣಿ ಗೆಲ್ಲಲು ಸಾಧ್ಯವಾಗುತ್ತಿತ್ತಾ?: ಪ್ರಲ್ಹಾದ್‌ ಜೋಶಿ ತಿರುಗೇಟು

ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಅಧಿಕ ಮಳೆಯಾಗಿತ್ತು. ಅದಕ್ಕೆ ಕೂಡ ದುಪ್ಪಟ್ಟು ಪ್ರಮಾಣದಲ್ಲಿ ಒಂದೇ ತಿಂಗಳಲ್ಲಿ ಪರಿಹಾರ ನೀಡಲಾಗಿತ್ತು. ಈಗ ಒಂದು ರೂಪಾಯಿ ಬರ ಪರಿಹಾರ ನೀಡಿಲ್ಲ ಎಂದು ಟೀಕಿಸಿದರು. ನನ್ನ ವಿರುದ್ಧ ಕಾಂಗ್ರೆಸ್‌ನಿಂದ ಶ್ರೀಮಂತರನ್ನು ನಿಲ್ಲಿಸಲಾಗಿದೆ. ಆದರೆ ಹಣಬಲಕ್ಕಿಂತ ಹೆಚ್ಚಾಗಿ ಅಭಿವೃದ್ಧಿ ಕೆಲಸ ಮತ್ತು ಪ್ರಧಾನಿ ಮೋದಿಯವರ ಕೆಲಸಗಳು ಇಲ್ಲಿ ಜನರಿಗೆ ಮುಖ್ಯವಾಗುತ್ತದೆ. ಕಾಂಗ್ರೆಸ್‌ ಏನೂ ಕೆಲಸ ಮಾಡದೆ, ಹೇಳಿಕೊಳ್ಳಲು ಏನೂ ಸರಕಿಲ್ಲದೆ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಆದರೆ ನಾವು ರಾಷ್ಟ್ರ ಕಟ್ಟುವ ವಿಷಯಗಳ ಬಗ್ಗೆ ಮಾತಾಡುತ್ತಿದ್ದೇವೆ ಎಂದು ಹೇಳಿದರು.

ಬಹುಗ್ರಾಮ ಕುಡಿಯುವ ನೀಡಿನ ಯೋಜನೆಯಡಿ ₹40 ಕೋಟಿಗೂ ಹೆಚ್ಚು ವೆಚ್ಚದಲ್ಲಿ ದಂಡಿಗಾನಹಳ್ಳಿಗೆ ನೀರು ನೀಡಲು ಕ್ರಮ ವಹಿಸಲಾಗಿದೆ. ಬಡವರಿಗೆ 98 ಎಕರೆ ಕಂದಾಯ ಜಮೀನು ಮೀಸಲಿಟ್ಟು 1,627 ಹಕ್ಕುಪತ್ರ ಹಾಗೂ ನಿವೇಶನ ಹಂಚಲಾಗಿದೆ. ಒಟ್ಟು 2,687 ನಿವೇಶನಗಳನ್ನು ರಚಿಸಲಾಗಿದೆ. ಇನ್ನೂ 1,080 ನಿವೇಶನ ನೀಡಲು ಅವಕಾಶವಿದ್ದು, ಅದನ್ನು ಕೂಡ ಮುಂದೆ ಮಾಡಲಿದ್ದೇನೆ ಎಂದು ಭರವಸೆ ನೀಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಸೋಲಾಗಿದೆ. ಆದರೆ ಈ 10 ತಿಂಗಳಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. 

ಜನರಿಗೆ ಸುಳ್ಳು ಆಶ್ವಾಸನೆ ನೀಡುವ ಬಿಜೆಪಿ ಸರ್ಕಾರ ಕಿತ್ತೆಸೆಯಬೇಕು: ಸಚಿವ ಸಂತೋಷ್ ಲಾಡ್

ಆದರೆ ಪಿಎಂ ಫಸಲ್‌ ಬಿಮಾ ಯೋಜನೆಯಡಿ ಜರಬಂಡಹಳ್ಳಿಗೆ ₹3 ಕೋಟಿ ನೀಡಲಾಗಿದೆ. ರೈತರ ಬದುಕನ್ನು ಕಟ್ಟಿಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಹಬ್ಬದೂಟ ಸಾಕಾ, ವರ್ಷವಿಡೀ ಊಟ ಬೇಕಾ ಎಂದು ಜನರು ಚಿಂತಿಸಬೇಕು. ಉಚಿತ ಬಸ್‌ ನೀಡಿದ್ದು, ಬಸ್‌ ಇಲ್ಲದೆ ವಿದ್ಯಾರ್ಥಿಗಳು ಬೀದಿಯಲ್ಲಿ ನಿಲ್ಲುತ್ತಿದ್ದಾರೆ. ಎಲ್ಲರಿಗೂ 10 ಕೇಜಿ ಅಕ್ಕಿ ಎಂದು ಹೇಳಿ ಒಂದು ಕೇಜಿಯೂ ನೀಡುತ್ತಿಲ್ಲ. ಆದರೆ ಕೇಂದ್ರ ಸರ್ಕಾರ 5 ಕೇಜಿ ಅಕ್ಕಿ ನೀಡುತ್ತಿದೆ. ನಾನು ಶಾಸಕನಾಗಿ ವಸತಿ ಶಾಲೆ ನೀಡಿದ್ದೇನೆ. ಮಂಚೇನಹಳ್ಳಿಯನ್ನು ತಾಲೂಕಾಗಿಸಿದ್ದೇನೆ ಎಂದು ವಿವರಿಸಿದರು. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

Follow Us:
Download App:
  • android
  • ios