ಬಿಜೆಪಿ ಹಿರಿಯ ಶಾಸಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಾಸಕರ ನಿಧನಕ್ಕೆ ಹಲವು ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಪದುಚೆರಿ, (ಜ.17): ಬಿಜೆಪಿ ಶಾಸಕ ಹಾಗೂ ಬಿಜೆಪಿ ಘಟಕದ ಖಜಾಂಚಿ ಕೆ.ಜಿ.ಶಂಕರ್(70) ನಿಧನರಾಗಿದ್ದಾರೆ. ಇಂದು (ಭಾನುವಾರ) ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶನಿವಾರ ರಾತ್ರಿ ಮಗಲಿದ್ದ ಅವರಿಗೆ ಹೃದಯಘಾತವಾಗಿದ್ದು, ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಕೊನೆಯುಸಿರೆಳೆದಿರುವುದಾಗಿ ಕುಟುಂಬ ತಿಳಿಸಿದೆ.

ಕಾರು ಅಪಘಾತ: ಸಚಿವರಿಗೆ ಗಂಭೀರ ಗಾಯ, ಪತ್ನಿ ಸೇರಿ ಇಬ್ಬರು ಸಾವು

ಶಂಕರ್​ ಅವರು ಕೇಂದ್ರಾಡಳಿತ ಪ್ರದೇಶದ ನಾಮನಿರ್ದೇಶಿತ ಶಾಸಕರಾಗಿದ್ದರು. ಇನ್ನು ಶಾಸಕರ ಸಾವಿಗೆ ಲೆಫ್ಟಿನೆಂಟ್​ ಗವರ್ನರ್​ ಸೇರಿ ಹಲವು ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್​ ಕಿರಣ್​ ಬೇಡಿ, ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ, ವಿಧಾನಸಭೆ ಸ್ಪೀಕರ್ ವಿ.ಪಿ. ಶಿವಕೋಲುಂಡು, ರಾಜ್ಯ ಬಿಜೆಪಿ ಅಧ್ಯಕ್ಷ ವಿ ಸಮಿನಾಥನ್ ಮತ್ತು ವಿಧಾನಸಭೆ ಕಾರ್ಯದರ್ಶಿ ಆರ್ ಮುನುಸಾಮಿ ಮೃತರ ಅಂತಿಮ ದರ್ಶನ ಪಡೆದುಕೊಂಡರು.