ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ, ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ ₹ 16 ಲಕ್ಷ ಕೋಟಿ ಮನ್ನಾ ಮಾಡಿದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ 

ಬೆಳಗಾವಿ(ಆ.29): ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದು, ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಪಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ (ಇಂದು) ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು. 

ಪರಪ್ಪನ ಅಗ್ರಹಾರದಲ್ಲಿ ನನಗೆ ಸಿಂಗಲ್‌ ಇಡ್ಲಿ ಕೊಟ್ಟಿರಲಿಲ್ಲ: ಕರವೇ ನಾರಾಯಣಗೌಡ

ಕಾಂಗ್ರೆಸ್‌ ಎಂದೆಂದಿಗೂ ಬಡವರ ಪರ, ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೇಂದ್ರ ಸರ್ಕಾರವೇ ಶ್ರೀಮಂತರ ₹ 16 ಲಕ್ಷ ಕೋಟಿ ಮನ್ನಾ ಮಾಡಿದೆ ಎಂದು ಹೇಳಿದರು.