ರಾಮನಗರದಲ್ಲಿ ಅನಿತಾ ಗೆಲುವು ಫಿಕ್ಸ್ : ಬಿಜೆಪಿ ಅಭ್ಯರ್ಥಿ ಔಟ್
ರಾಜ್ಯ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ದೊರಕಿದೆ. ಕುತೂಹಲ ಕೆರಳಿಸಿದ್ದ ರಾಮನಗರ ಕ್ಷೇತ್ರ ಚುನಾವಣೆ ಕಳೆ ಗುಂದಿದೆ. ನಾಟಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿ ಕಾಂಗ್ರೆಸಿಗೆ ಮರು ಸೇರ್ಪಡೆಯಾಗುತ್ತಿದ್ದು ಜೆಡಿಎಸ್ ಅಭ್ಯರ್ಥಿ ಅನಿತಾ ಗೆಲುವು ಬಹುತೇಕ ಖಚಿತವಾಗಿದೆ.
ರಾಮನಗರ : ರಾಜ್ಯ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಎದುರಾಗಿದೆ. ರಾಮನಗರ ಚುನಾವಣಾ ಕಣದಿಂದ ಬಿಜೆಪಿ ಅಭ್ಯರ್ಥಿ ವಾಪಸಾಗಿದ್ದಾರೆ.
ರಾಮನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ.
ಈ ಮೂಲಕ ಉಪ ಚುನಾವಣಾ ಕಣಕ್ಕೆ ಮೆಗಾ ಟ್ವಿಸ್ಟ್ ದೊರಕಿದಂತಾಗಿದೆ. ಅಲ್ಲದೇ ಅಭ್ಯರ್ಥಿ ಚಂದ್ರಶೇಖರ್ ತಮ್ಮ ಹಳೆಯ ಪಕ್ಷ ಕಾಂಗ್ರೆಸಿಗೆ ವಾಪಸಾಗಿದ್ದಾರೆ.
ಇದರಿಂದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಖಚಿತವಾಗಿದೆ.