ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಆಪ್ತರು ನನ್ನನ್ನು ಭೇಟಿ ಮಾಡಿ ಚರ್ಚಿಸಿರುವುದು ಸತ್ಯ  ಭೇಟಿ ಮಾಡಿ ಚರ್ಚಿಸಿರುವುದು ಸತ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿಕೆ

ಬೆಂಗಳೂರು (ಅ.10): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ (Ramesh jarkiholi) ಆಪ್ತರು ನನ್ನನ್ನು ಭೇಟಿ ಮಾಡಿ ಚರ್ಚಿಸಿರುವುದು ಸತ್ಯ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿದ್ದಾರೆ. ಅವರು ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ಅವರ ಸಂದೇಶಗಳನ್ನು ನಮಗೆ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆ ವಿಚಾರಗಳನ್ನು ನಾನು ಈಗ ಗೌಪ್ಯವಾಗಿ ಇಡಬೇಕಾಗಿದೆ. ಹೀಗಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು. ರಮೇಶ್‌ ಜಾರಕಿಹೊಳಿ ಆಪ್ತರಾದ ವಿವೇಕರಾವ್‌ ಪಾಟೀಲ (Vivek Rao patil) ಅವರು ಶನಿವಾರ ಶಿವಕುಮಾರ್‌ ಅವರನ್ನು ಭೇಟಿ ಮಾಡಿ ವಿಸ್ತೃತವಾಗಿ ಚರ್ಚಿಸಿದ್ದರು.

ಜಾರಕಿಹೊಳಿ ಸೀಡಿ ಕೇಸ್ : ವರದಿ ಸಲ್ಲಿಕೆಗಿಲ್ಲ ಅವಕಾಶ

ಸಿಎಂ ಭೇಟಿ ಮಾಡಿದ ಜಾರಕಿಹೊಳೀ

ಸಚಿವ ಸ್ಥಾನ ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಗೋಕಾಕ್‌(Gokak) ಶಾಸಕ ರಮೇಶ್‌ ಜಾರಕಿಹೊಳಿ ಅವರು ಇದೀಗ ಕೇದಾರನಾಥ(Kedarnath)ಯಾತ್ರೆಗೆ ಹೊರಟಿದ್ದಾರೆ. 

ಸಾಮಾನ್ಯವಾಗಿ ಕನಿಷ್ಠ 2 ವರ್ಷಕ್ಕೊಮ್ಮೆ ಕೇದಾರನಾಥಕ್ಕೆ ಹೋಗುವ ಅವರು ಶನಿವಾರ 16ನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಬಿ.ಎಸ್‌.ಯಡಿಯೂರಪ್ಪ(BS Yediyurappa) ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ(Resign) ನೀಡಿದ ಬಳಿಕ ತಿಂಗಳಿಗೊಮ್ಮೆಯಾದರೂ ರಮೇಶ್‌ ಜಾರಕಿಹೊಳಿಯವರು(Ramesh Jarkiholi) ದೆಹಲಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಜಕೀಯ(Politics), ಸಚಿವ ಸ್ಥಾನ(Minister), ಕೋರ್ಟ್‌ ಕೆಲಸ ಹೀಗೆ ನಾನಾ ಕಾರಣಗಳಿಗೆ ದೆಹಲಿಗೆ ಎಡತಾಕುತ್ತಿದ್ದ ಜಾರಕಿಹೊಳಿ, ಈ ಬಾರಿ ದೇವರ ದರ್ಶನ ಮಾಡಲಿದ್ದಾರೆ. ಟೆಂಪಲ್‌ ರನ್‌ಗಾಗಿಯೇ(Temple Run) ದೆಹಲಿಗೆ ಆಗಮಿಸಿರುವ ಅವರು ಶುಕ್ರವಾರ ದೆಹಲಿಯಲ್ಲಿರುವ(Delhi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು(Basavaraj Bommai) ಭೇಟಿಯಾಗಿ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದರು.

ಜಾರಕಿಹೊಳಿ ಸೀಡಿ ಕೇಸ್ : ವರದಿ ಸಲ್ಲಿಕೆಗಿಲ್ಲ ಅವಕಾಶ

ರಮೇಶ್‌ ಜಾರಕಿಹೊಳಿ ದೆಹಲಿಗೆ ಬಂದರೆ ಮಾಲ್ಚಾ ಮಾರ್ಗದಲ್ಲಿರುವ (ಕರ್ನಾಟಕ ಭವನ-2) ಬಳಿ ಇರುವ ಹನುಮಾನ್‌ ಮಂದಿರಕ್ಕೆ ಭೇಟಿ ನೀಡುತ್ತಾರೆ. ಹನುಮನಿಗೆ ಕೈ ಮುಗಿದ ಬಳಿಕ ಕರ್ನಾಟಕ ಭವನದಲ್ಲಿ(Karnataka Bhavan) ತಿಂಡಿ ತಿನ್ನುವುದು ಅವರ ವಾಡಿಕೆ. ಸುಪ್ರೀಂ ಕೋರ್ಟ್‌ನಲ್ಲಿ(Supreme Court) ಶಾಸಕರ ಪಕ್ಷಾಂತರ ಕೇಸ್‌ ನಡೆಯುತ್ತಿದ್ದಾಗಲೂ ಅವರು ಎರಡು ಮೂರು ಬಾರಿ ವೈಷ್ಣೋ ದೇವಿಯ(Vaishno Devi) ದರ್ಶನ ಕೂಡ ಪಡೆದಿದ್ದರು. ಇನ್ನು ಕೇದಾರನಾಥ, ಬದರಿನಾಥ(Badrinath) ಭೇಟಿಯೂ ಅಷ್ಟೆ. ಅಧಿಕಾರ ಇರಲಿ ಇಲ್ಲದಿರಲಿ ಎರಡು ವರ್ಷಕ್ಕೊಮ್ಮೆ ಕೇದಾರನಾಥನ ದರ್ಶನ ಪಡೆದೇ ತಿರುತ್ತಾರೆ. ಈಗಾಗಲೇ 15 ಬಾರಿ ಕೇದಾರನಾಥ, ಬದರಿನಾಥಕ್ಕೆ ಅವರು ಭೇಟಿ ನೀಡುತ್ತಿದ್ದಾರೆ.

ಸಿಎಂ ಭೇಟಿಯಾಗಿ ಖುಷಿ ಖುಷಿಯಿಂದ ಹೊರ ಬಂದ ರಮೇಶ್‌ ಜಾರಕಿಹೊಳಿ, ನಾನೇನು ಕೇಳುವುದಿಲ್ಲ. ಅವರು ಏನು ಮಾಡುತ್ತಾರೋ ಮಾಡಲಿ ಎಂದರು. ಸಮಾಧಾನಕ್ಕಾಗಿ ನಾನು ಕೇದಾರನಾಥನ ದರ್ಶನಕ್ಕೆ ಹೊರಟಿದ್ದೇನೆ ಎಂದು ತಿಳಿಸಿದರು.