Asianet Suvarna News Asianet Suvarna News

ಸಿಎಂ ವಿರುದ್ಧ ಶಿಗ್ಗಾಂವಿಯಿಂದ ಸ್ಪರ್ಧೆಗೆ ಸಿದ್ಧ: ವಿನಯ್‌ ಕುಲಕರ್ಣಿ

ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್‌ ನನ್ನ ಜತೆ ಮಾತನಾಡಿದೆ. ಶಿಗ್ಗಾಂವಿಗೆ ನಾನು ಅರ್ಜಿ ಹಾಕಿಲ್ಲ. ಇಲ್ಲಿ 13-14 ಮಂದಿ ಆಕಾಂಕ್ಷಿಗಳಿದ್ದಾರೆ. ಅವರಿಗೆ ಟಿಕೆಟ್‌ ಕೊಡಿ ಗೆಲ್ಲುತ್ತಾರೆ. ನನಗೆ ನನ್ನ ಕ್ಷೇತ್ರ ಸ್ಪಷ್ಟವಿದ್ದು ಅಲ್ಲಿ ನನಗೆ ದೊಡ್ಡ ಬಳಗವಿದೆ. ಮುಂದೆ ನೋಡೋಣ ಎಂದು ಹೇಳಿದ್ದು, ನಾನು ಹೈಕಮಾಂಡ್‌ಗೆ ಯಾವುದೇ ಭರವಸೆ ಕೊಟ್ಟಿಲ್ಲ ಎಂದು ಹೇಳಿದರು: ವಿನಯ್‌ ಕುಲಕರ್ಣಿ 

Ready to Contest against CM Basavaraj Bommai from Shiggaon Says Vinay Kulkarni grg
Author
First Published Mar 28, 2023, 12:17 PM IST

ಹಾವೇರಿ(ಮಾ.28): ಶಿಗ್ಗಾಂವಿ ನೂರಕ್ಕೆ ನೂರರಷ್ಟು ಕಾಂಗ್ರೆಸ್‌ ಗೆಲ್ಲುವ ಕ್ಷೇತ್ರ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧೆಗೆ ನಾನು ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ. ನಾನು ರಾಜಕಾರಣ ಮಾಡಲೆಂದೇ ಬಂದಿದ್ದೇನೆ ಎಂದು ಮಾಜಿ ಸಚಿವ ವಿನಯ್‌ ಕುಲಕರ್ಣಿ ಹೇಳಿದರು. ಶಿಗ್ಗಾಂವಿ ಕ್ಷೇತ್ರದಿಂದ ವಿನಯ ಕುಲಕರ್ಣಿ ಸ್ಪರ್ಧೆ ಮಾಡುತ್ತಾರೆನ್ನುವ ಚರ್ಚೆ ಬೆನ್ನಲ್ಲೇ ಸೋಮವಾರ ಸವಣೂರಿನ ದೊಡ್ಡ ಹುಣಸೆಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದು ಸೋಮವಾರ ಮಾತನಾಡಿದರು.

ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೈಕಮಾಂಡ್‌ ನನ್ನ ಜತೆ ಮಾತನಾಡಿದೆ. ಶಿಗ್ಗಾಂವಿಗೆ ನಾನು ಅರ್ಜಿ ಹಾಕಿಲ್ಲ. ಇಲ್ಲಿ 13-14 ಮಂದಿ ಆಕಾಂಕ್ಷಿಗಳಿದ್ದಾರೆ. ಅವರಿಗೆ ಟಿಕೆಟ್‌ ಕೊಡಿ ಗೆಲ್ಲುತ್ತಾರೆ. ನನಗೆ ನನ್ನ ಕ್ಷೇತ್ರ ಸ್ಪಷ್ಟವಿದ್ದು ಅಲ್ಲಿ ನನಗೆ ದೊಡ್ಡ ಬಳಗವಿದೆ. ಮುಂದೆ ನೋಡೋಣ ಎಂದು ಹೇಳಿದ್ದು, ನಾನು ಹೈಕಮಾಂಡ್‌ಗೆ ಯಾವುದೇ ಭರವಸೆ ಕೊಟ್ಟಿಲ್ಲ ಎಂದು ಹೇಳಿದರು.

ಮೀಸಲಾತಿ ವಿಚಾರದಲ್ಲಿ ನಾನು ಸ್ವಾಮೀಜಿಗಳಿಗೆ ಒತ್ತಡ ಹಾಕಿಲ್ಲ: ಸಿಎಂ ಬೊಮ್ಮಾಯಿ

ಕಳೆದ ಮೂರು ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಅಜ್ಜಂಫೀರ್‌ ಖಾದ್ರಿಯವರ ಮೇಲೆ ಷಡ್ಯಂತ್ರ ನಡೆದಿದೆ. ರಾಜಕಾರಣದಲ್ಲಿ ನೇರಾ ನೇರ ಸ್ಪರ್ಧೆ ಇರಬೇಕು. ಹಿಂದಿನಿಂದ ಷಡ್ಯಂತ್ರ ಮಾಡಿ ಗೆಲ್ಲುವುದು ಗೆಲುವಲ್ಲ, ಅದು ಮೋಸದ ಗೆಲುವು. ನೇರವಾಗಿ ಜನರಿಂದ ನಾವು ಗೆಲ್ಲಬೇಕು. ಯಾರನ್ನೋ ಮೋಸ ಮಾಡಿ ಗೆಲ್ಲುವುದು ದೊಡ್ಡ ಗೆಲುವಲ್ಲ ಎಂದು ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.

ಧಾರವಾಡಕ್ಕೆ ಹೋಗಲು ನನಗೆ ಸಾಕಷ್ಟುಅಡ್ಡಿಪಡಿಸಿದ್ದಾರೆ. ತಪ್ಪು ಮಾಡದಿದ್ದರೂ ನನ್ನ ಮೇಲೆ ಅನೇಕ ತಪ್ಪು ಹೊರಿಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ದಮನ ಆಗುವುದನ್ನು ಇಂದು ನೋಡುತ್ತಿದ್ದೇನೆ ಎಂದರು.

ಮೀಸಲಾತಿ ವಿಚಾರದಲ್ಲಿ ಬೊಮ್ಮಾಯಿಯವರು ಜೇನುಗೂಡಿಗೆ ಕೈ ಹಾಕಿಲ್ಲ. ಜೇನು ಎಬ್ಬಿಸಿ ಎಲ್ಲರಿಗೂ ಕಡಿಯಲು ಹಚ್ಚಿದ್ದಾರೆ. ಅವರು ಜೇನುಗೂಡಿಗೆ ಕೈಹಾಕಲ್ಲ, ಬೇರೆಯವರಿಂದ ಕೈ ಹಾಕಿಸುತ್ತಾರೆ. ಇದು ನಿನ್ನೆಯದಲ್ಲ ಐದಾರು ತಿಂಗಳು ಹಿಂದೆಯೇ ಅರವಿಂದ ಬೆಲ್ಲದ ಹೇಳಿದ್ದಾರೆ. ಅವರು ಪ್ರೀ ಪ್ಲ್ಯಾನ್‌ ಮಾಡಿದ್ದಾರೆ. ನಾನು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.

Follow Us:
Download App:
  • android
  • ios