ವಿಜಯೇಂದ್ರ ಚುನಾವಣೆಗೆ ನಿಂತರೆ ಅವರು ಗೆಲ್ಲೋದು ಮಾತ್ರ ನೂರಕ್ಕೆ ನೂರು ಗ್ಯಾರಂಟಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ. 

ಬೆಂಗಳೂರು (ನ.05): ಸಿಎಂ ಬಿಎಸ್‌ ವೈ ಪುತ್ರ ವಿಜಯೇಂದ್ರ ಬಸವಕಲ್ಯಾಣದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರು, ಮುಖಂಡರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ವಿಜಯೇಂದ್ರ ಸ್ಪರ್ಧೆ ಮಾಡೋ ಬಗ್ಗೆ ಎಲ್ಲೂ ಹೇಳಿಲ್ಲ. ಯುವ ನಾಯಕರಾಗಿ ವಿಜಯೇಂದ್ರ ಬೆಳೆಯುತ್ತಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ರೇಣುಕಾಚಾರ್ಯ ಪಕ್ಷ ತೀರ್ಮಾನ ಮಾಡಿದರೆ ಸ್ಪರ್ಧೆ ಮಾಡಬಹುದು, ಹೇಳಲು ಆಗುವುದಿಲ್ಲ. ಸ್ಪರ್ಧೆ ಮಾಡಿದರೆ ಗೆಲ್ಲುವುದು ಮಾತ್ರ ಖಚಿತ. ಅವರು ಸ್ಪರ್ಧೆ ಮಾಡಲಿ ಅಂತ ಹೇಳೋ ಅಧಿಕಾರ ನನಗೆ ಇಲ್ಲ ಎಂದರು. 

ಬಿಜೆಪಿಯೇ 2 ಸೀಟು ಗೆಲ್ಲಲಿದೆ : ಗುಪ್ತಚರ ಇಲಾಖೆಯಿಂದ ಮಾಹಿತಿ ...

ಬಸವಕಲ್ಯಾಣದಿಂದ ಸ್ಪರ್ಧೆಸಿದ್ರೆ ನೂರಕ್ಕೆ ನೂರು ಗೆಲ್ಲುತ್ತಾರೆ. ಆದರೆ ವಿಜಯೇಂದ್ರ ಹಾಗೂ ಸಿಎಂಗೆ ಆ ಮನಸ್ಸಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.