ಸವಾಲು ಹಾಕ್ತೇನೆ, ಯತ್ನಾಳ ಸಿಎಂ ಆಗಲ್ಲ: ರೇಣುಕಾಚಾರ್ಯ| ಮಂತ್ರಿ ಸ್ಥಾನ ಸಿಗದ್ದಕ್ಕೆ ನಾಲಿಗೆ ಹರಿಬಿಟ್ಟ ಬಸನಗೌಡ ಅವರು ಕೂಡಲೇ ಕ್ಷಮೆ ಕೇಳಬೇಕು| ಸಚಿವ ಸ್ಥಾನ ಸಿಗದ ಕಾರಣಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ| 

ಬೆಂಗಳೂರು(ಅ.22): ಬಿಜೆಪಿ ನಾಯಕತ್ವದ ಬದಲಾವಣೆ ಕುರಿತು ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಹರಿಹಾಯ್ದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ‘ಸಚಿವ ಸ್ಥಾನ ನೀಡದ ಕಾರಣಕ್ಕಾಗಿ ಆ ರೀತಿಯಾಗಿ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ತಕ್ಷಣ ಬಹಿರಂಗ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

Add Asianetnews Kannada as a Preferred SourcegooglePreferred

ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ. ಯತ್ನಾಳ್‌ ತಿರುಕನ ಕನಸು ಕಾಣಬೇಡಿ. ನೀವು ಮುಖ್ಯಮಂತ್ರಿಯಾಗುವುದಿಲ್ಲ. ನಾನು ಸವಾಲು ಹಾಕುತ್ತೇನೆ’ ಎಂದು ಹೇಳಿದರು.

"

ಯತ್ನಾಳ್‌ ಉಚ್ಚಾಟನೆ ಮಾಡಲು ಶಿಫಾರಸ್ಸು ಮಾಡಿದ್ದೇನೆ: ಸಚಿವ ಈಶ್ವರಪ್ಪ

‘ಸಚಿವ ಸ್ಥಾನ ಸಿಗದ ಕಾರಣಕ್ಕಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ. ನಾಯಕತ್ವ ಕುರಿತು ನೀಡಿರುವ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವಂಥವುಗಳು. ಜನರ ಮತ್ತು ಸಮಾಜದ ದೃಷ್ಟಿಯಲ್ಲಿ ವಿಲನ್‌ ಆಗಿದ್ದಾರೆ. ಯತ್ನಾಳ್‌ ಅವರು ಹಿರಿಯರಾಗಿದ್ದು, ಈ ರೀತಿ ಹೇಳಿಕೆ ನೀಡಬಾರದು. ಚುನಾವಣೆ ವೇಳೆ ಇಂತಹ ಹೇಳಿಕೆಗಳಿಂದ ಕಾರ್ಯಕರ್ತರಿಗೆ ಗೊಂದಲವಾಗಲಿದೆ. ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಇದನ್ನು ಸಹಿಸದೆ ಮಾತನಾಡುತ್ತಿದ್ದಾರೆ. ಮನಬಂದಂತೆ ಮಾತನಾಡಿದರೆ ಜನರು ಬುದ್ಧಿ ಭ್ರಮಣೆಯಾಗಿದೆ ಎಂದು ಭಾವಿಸುತ್ತಾರೆ’ ಎಂದರು.