ಚುನಾವಣಾ ಹೊಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್‌ ನಾಗೇಂದ್ರನ್‌ ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ ಮತ್ತು ನಟಿ ತ್ರಿಶಾ ಕೃಷ್ಣನ್‌ ಸಂಬಂಧದ ಬಗ್ಗೆ ಕೀಳು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ.

ಮಧುರೈ: ಚುನಾವಣಾ ಹೊಸ್ತಿಲಿನಲ್ಲಿರುವ ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್‌ ನಾಗೇಂದ್ರನ್‌ ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ ಮತ್ತು ನಟಿ ತ್ರಿಶಾ ಕೃಷ್ಣನ್‌ ಸಂಬಂಧದ ಬಗ್ಗೆ ಕೀಳು ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮವೊಂದರಲ್ಲಿ ಅವರು ‘ವಿಜಯ್‌ ಪಕ್ಷದ ನೀತಿ ಸುಧಾರಿಸಿಕೊಳ್ಳುವ ಬದಲು ತ್ರಿಶಾ ಮನೆಯಿಂದ ಹೊರ ಬಂದು ಹೆಂಡತಿ ಜತೆಗಿನ ಸಂಬಂಧ ಸರಿಪಡಿಸಿಕೊಳ್ಳಲಿ’ ಎಂದಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಕೀಲರ ಮೂಲಕ ಪ್ರತಿಕ್ರಿಯಿಸಿದ್ದಾರೆ

ಇದರ ಬೆನ್ನಲ್ಲೇ ನಟಿ ತ್ರಿಶಾ ಮೌನ ಮುರಿದು, ವಕೀಲರ ಮೂಲಕ ಪ್ರತಿಕ್ರಿಯಿಸಿದ್ದಾರೆ. ಅದರಲ್ಲಿ ‘ಉನ್ನತ ಸ್ಥಾನದಲ್ಲಿರುವವರ ಇಂತಹ ಅಸಹ್ಯಕರ ಮತ್ತು ಅನುಚಿತ. ತ್ರಿಶಾ ರಾಜಕಾರಣದಲ್ಲಿ ತಟಸ್ಥರಾಗಿದ್ದರು. ಮುಂದೆಯೂ ಹಾಗೆಯೇ ಇರುತ್ತಾರೆ’ ಎಂದಿದ್ದಾರೆ. ಅದರ ಬೆನ್ನಲ್ಲೇ ನಾಗೇಂದ್ರನ್‌ ‘ತಾವು ಯಾರಿಗೂ ನೋವುಂಟು ಮಾಡುವ ಉದ್ದೇಶ ಹೊಂದಿರಲಿಲ್ಲ’ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಹಿಂದಿನಿಂದಲೂ ವದಂತಿ:

ವಿಜಯ್‌ ಮತ್ತು ಪತ್ನಿ ಸಂಗೀತಾ ದಾಂಪತ್ಯದಲ್ಲಿ ವೈಮನಸ್ಸು ಮೂಡಿದೆ. ಇದಕ್ಕೆ ಪೂರಕ ಎನ್ನುವಂತೆ ಗಂಡ- ಹೆಂಡತಿ ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿರಲಿಲ್ಲ. ಜೊತೆಗೆ ವಿಜಯ್‌ ಮತ್ತು ತ್ರಿಶಾ ಒಟ್ಟಿಗೆ ವಾಸಿಸುತ್ತಿದ್ದಾರೆ ಎನ್ನುವ ವದಂತಿ ಬಹಳ ದಿನಗಳಿಂದ ಇತ್ತು.