ಇವತ್ತು ಒಂದು ಕಡೆ ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ಜಾಮೀನು ಸಿಕ್ಕಿದ್ದು, ಬಂಧನ ಮುಕ್ತರಾಗಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.

ನವದೆಹಲಿ/ಬೆಂಗಳೂರು, (ಅ. 17): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಒಂದು ಕಡೆ ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್ ಸಿಕ್ಕರೆ, ಮತ್ತೊಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ.

Add Asianetnews Kannada as a Preferred SourcegooglePreferred

ಹೌದು...ಹವಾಲಾ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್‌ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್‌ಗೆ ಜಾಮೀನು ದೊರೆತ್ತಿದ್ದು, ಬಂಧನದಿಂದ ಮುಕ್ತರಾಗಿದ್ದಾರೆ. 

ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ ಭವಿಷ್ಯ

ಮತ್ತೊಂದೆಡೆ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ನಾಳೆ (ಆ.24) ಬೆಳಗ್ಗೆ 10.30ಕ್ಕೆ ಮುಂದೂಡಿ ಸುಪ್ರೀಂಕೋರ್ಟ್​ನ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ ಇಂದು ಕಾಂಗ್ರೆಸ್​ ಪರ ಕಪಿಲ್​ ಸಿಬಲ್​ ವಾದ ಮಂಡಿಸಿದರೆ, ಅನರ್ಹ ಶಾಸಕರ ಪರ ಮುಕುಲ್​ ರೋಹಟಗಿ ವಾದ ಮಂಡಿಸಿದರು.

ಮೈತ್ರಿ ಸರ್ಕಾರದಿಂದ ರೆಬಲ್​ ಆಗಿದ್ದ ಕಾಂಗ್ರೆಸ್​-ಜೆಡಿಎಸ್​ನ ಒಟ್ಟು 17 ಶಾಸಕರನ್ನು ಅಂದಿನ ಸ್ಪೀಕರ್​ ಅನರ್ಹ ಗೊಳಿಸಿದ್ದರು. ತಮ್ಮನ್ನು ಅನರ್ಹಗೊಳಿಸಿದ ಕ್ರಮವನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಹಾಗೇ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದರು.

ಡಿಕೆಶಿಗೆ ಬಿಗ್ ರಿಲೀಫ್: ಕೊನೆಗೂ ತಿಹಾರ್ ಜೈಲಿನಿಂದ ಹೊರಕ್ಕೆ

ಈ ಹಿನ್ನೆಯಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ವಿಳಂಬವಾದ ಹಿನ್ನೆಲೆಯಲ್ಲಿ 15 ಕ್ಷೇತ್ರಗಳ ಉಪಚುನಾವಣೆಯನ್ನು ಡಿ.5ಕ್ಕೆ ಮುಂದೂಡಲಾಗಿತ್ತು.

ನಿನ್ನೆ (ಮಂಗಳವಾರ) ಅರ್ಜಿ ವಿಚಾರಣೆ ನಿಗದಿಯಾಗಿದ್ದರೂ ಕಾಂಗ್ರೆಸ್​ ಪರ ವಕೀಲ ಕಪಿಲ್​ ಸಿಬಲ್​ ಕೋರ್ಟ್​ಗೆ ಆಗಮಿಸಲು ಸಾಧ್ಯವಾಗದ ಕಾರಣ ಇಂದಿಗೆ ಮುಂದೂಡಲಾಗಿತ್ತು. 

ಬೈ ಎಲೆಕ್ಷನ್ ಸಮರ : ಅತ್ತ ಡಿಕೆಶಿಗೆ ಜಾಮೀನು: ಇತ್ತ ಕಾಂಗ್ರೆಸ್‌ಗೆ ಹಿನ್ನಡೆ

ಅದರಂತೆ ಇಂದು (ಬುಧವಾರ) ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ, ಮತ್ತಷ್ಟು ವಿಚಾರಣೆಯನ್ನು ಆ.24ಕ್ಕೆ ಮುಂದೂಡಿದೆ. ಇದ್ರಿಂದ ಅನರ್ಹ ಶಾಸಕರಿಗೆ ಮತ್ತೆ ನಿರಾಸೆಯಾಗಿದೆ.