ತೆಲಂಗಾಣದಲ್ಲಿ ಬಿಜೆಪಿ ‘ಆಪರೇಶನ್‌ ಕಮಲ’ ನಡೆಸುತ್ತಿದೆ ಎಂದು ಆರೋಪಿಸಿದ್ದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌)ಗೆ ಹಿನ್ನಡೆ ಆಗಿದೆ. 

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ‘ಆಪರೇಶನ್‌ ಕಮಲ’ ನಡೆಸುತ್ತಿದೆ ಎಂದು ಆರೋಪಿಸಿದ್ದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌)ಗೆ ಹಿನ್ನಡೆ ಆಗಿದೆ. ಟಿಆರ್‌ಎಸ್‌ ದೂರಿನ ಮೇರೆಗೆ ಬಂಧಿತರಾಗಿದ್ದ ಬಿಜೆಪಿ ಏಜೆಂಟರು ಎನ್ನಲಾದ ಮೂವರನ್ನು ಪೊಲೀಸರ ವಶಕ್ಕೆ ಅಥವಾ ನ್ಯಾಯಾಂಗ ವಶಕ್ಕೆ ಒಪ್ಪಿಸಲು ಸ್ಥಳೀಯ ನ್ಯಾಯಾಲಯ ನಿರಾಕರಿಸಿದೆ. ಇದರ ಬದಲು ನೋಟಿಸ್‌ ಜಾರಿ ಮಾಡಿ ಬಿಡುಗಡೆ ಮಾಡಲು ಸೂಚಿಸಿದೆ.

Add Asianetnews Kannada as a Preferred SourcegooglePreferred

ಗುರುವಾರ ತಡರಾತ್ರಿ ಮೂವರನ್ನೂ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಈ ವೇಳೆ ನ್ಯಾಯಾಧೀಶರು, ‘ಬಂಧನಕ್ಕೆ ಮುನ್ನ ನೋಟಿಸ್‌ ನೀಡದೇ ನಿಯಮ ಪಾಲಿಸಿಲ್ಲ’ ಎಂದು ಸೈಬರಾಬಾದ್‌ ಪೊಲೀಸರಿಗೆ (Cyberabad police) ಚಾಟಿ ಬೀಸಿತು. ಬಂಧಿತರಿಗೆ ನೋಟಿಸ್‌ ನೀಡಬೇಕು ಹಾಗೂ ಬಿಡುಗಡೆ ಮಾಡಬೇಕು ಎಂದು ಆದೇಶಿಸಿತು.

Scroll to load tweet…

ರಾಮಚಂದ್ರ ಭಾರತಿ (Ramachandra Bharti), ನಂದಕುಮಾರ (Nandakumar), ಸಿಂಹಯ್ಯಾಜಿ (Sinhayaji)ಅವರನ್ನು ತೆಲಂಗಾಣ ಪೊಲೀಸರು, ‘ಆಪರೇಶನ್‌ ಕಮಲಕ್ಕೆ ಯತ್ನಿಸಿದ ಬಿಜೆಪಿ ಏಜೆಂಟರು’ ಎಂಬ ದೂರಿನ ಮೇರೆಗೆ ಬಂಧಿಸಿದ್ದರು. ಈ ಮೂವರೂ ಟಿಆರ್‌ಎಸ್‌ ಶಾಸಕ ಪೈಲಟ್‌ ರೋಹಿತ್‌ ರೆಡ್ಡಿಗೆ 100 ಕೋಟಿ ಸೇರಿ ನಾಲ್ವರು ಟಿಆರ್‌ಎಸ್‌ (TRS MLAs) ಶಾಸಕರಿಗೆ ಬಿಜೆಪಿ ಸೇರಲು 250 ಕೋಟಿ ರು. ಆಮಿಷ ಒಡ್ಡಿದ್ದರು ಎಂದು ದೂರಲಾಗಿತ್ತು.

ಮೋದಿ ವಿರುದ್ಧ ರಣಕಹಳೆ ಊದಿದ TRSಗೆ ಹಿನ್ನಡೆ, ಪ್ರಮುಖ ನಾಯಕ ರಾಜೀನಾಮೆ!

Scroll to load tweet…

ಕೆಸಿಆರ್‌ ಪಕ್ಷದ ನಾಲ್ವರು ಶಾಸಕರಿಗೆ BJPಯಿಂದ ತಲಾ 50 ಕೋಟಿ ಆಫರ್‌..?