ಸೆ.21 ರಿಂದ 26ರವರೆಗೆ ನಡೆದ ವಿಧಾನಸಭೆಯ ಅಧಿವೇಶನದಲ್ಲಿ 969 ಪ್ರಶ್ನೆ ಕೇಳಿದ್ದ ಕಾಂಗ್ರೆಸ್‌ ಪಕ್ಷದ ಶಾಸಕರು|   ಈ ಪೈಕಿ 594 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದು ಅಧಿವೇಶನ ಕಳೆದು ಮೂರು ವಾರವಾದರೂ ಸರ್ಕಾರ ಉತ್ತರ ನೀಡಿಲ್ಲ| ಕೊಟ್ಟಿರುವ ಉತ್ತರಗಳೂ ಸರಿಯಿಲ್ಲ. ಇದು ಸರ್ಕಾರದ ಬೇಜವಾಬ್ದಾರಿತನ ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ| 

ಬೆಂಗಳೂರು(ಅ.10): ವಿಧಾನಸಭೆ ಅಧಿವೇಶನದ ವೇಳೆ ಕಾಂಗ್ರೆಸ್‌ ಪಕ್ಷದ ಶಾಸಕರು ಕೇಳಿದ್ದ 969 ಪ್ರಶ್ನೆಗಳಿಗೆ ಇದುವರೆಗೆ 594 ಪ್ರಶ್ನೆಗಳಿಗೆ ಮಾತ್ರ ಉತ್ತರ ಬಂದಿದೆ. ಉಳಿದ 375 ಪ್ರಶ್ನೆ​ಗ​ಳಿಗೆ ಅಧಿವೇಶನ ಕಳೆದ 3 ವಾರ ಕಳೆದರೂ ಉತ್ತರ ನೀಡಿಲ್ಲ’ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅವರಿಗೆ ಪತ್ರ ಬರೆದಿದ್ದಾರೆ.

Add Asianetnews Kannada as a Preferred SourcegooglePreferred

ಸೆ.21 ರಿಂದ 26ರವರೆಗೆ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಕಾಂಗ್ರೆಸ್‌ ಪಕ್ಷದ ಶಾಸಕರು 969 ಪ್ರಶ್ನೆ ಕೇಳಿದ್ದರು. ಈ ಪೈಕಿ 594 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಿದ್ದು ಅಧಿವೇಶನ ಕಳೆದು ಮೂರು ವಾರವಾದರೂ ಸರ್ಕಾರ ಉತ್ತರ ನೀಡಿಲ್ಲ. ಕೊಟ್ಟಿರುವ ಉತ್ತರಗಳೂ ಸರಿಯಿಲ್ಲ. ಇದು ಸರ್ಕಾರದ ಬೇಜವಾಬ್ದಾರಿತನ ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸಿದ್ದರಾಮಯ್ಯಗೆ ದೋಖಾ, ಹಳ್ಳ ಹತ್ತಿತು ಸಾಲಮನ್ನಾ ಯೋಜನೆ; ಕೋಟಿ ಕೋಟಿ ಗುಳುಂ

ಈ ಪ್ರಶ್ನೆಗಳೆಲ್ಲವೂ ಸಾರ್ವಜನಿಕವಾಗಿ ಮಹತ್ವದವು. ಹೀಗಾಗಿ ತುರ್ತಾಗಿ ಹಾಗೂ ಸಮರ್ಪಕವಾಗಿ ಉತ್ತರಗಳನ್ನು ಸಂಬಂಧಿಸಿದ ಶಾಸಕರಿಗೆ ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿ ಎಂದು ಕಾಗೇರಿ ಅವರಿಗೆ ಕೋರಿದ್ದಾರೆ.