ನನಗಿರುವ ಮಾಹಿತಿ ಪ್ರಕಾರ ಸಿಎಂ ಸ್ಥಾನದಿಂದ ಯಡಿಯೂರಪ್ಪ ಇಳಿಯುತ್ತಾರೆಂದು ಹೇಳಿದ್ದೆ. ಏನು ಕೆಲಸ ಮಾಡದಿರೋ ಮುಖ್ಯಮಂತ್ರಿ ಅಲ್ವಾ. ಇವರು ಹೋಗಿ ಕೆಲಸ ಮಾಡುವವರು ಬರಲಿ ಎಂದು ಮುಖಂಡರೋರ್ವರು ಹೇಳಿದ್ದಾರೆ

ಬೆಂಗಳೂರು (ನ.26): ನನಗಿರುವ ಮಾಹಿತಿ ಮೇಲೆ ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿಯುತ್ತಾರೆ ಎಂದಿದ್ದೆ. ಎರಡು ವರ್ಷ ಉಳಿದುಕೊಳ್ಳುತ್ತೀನಿ ಎನ್ನುವುದಾದರೆ ಉಳಿದುಕೊಳ್ಳಲಿ ನಮಗೇನು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"

ಏನು ಕೆಲಸ ಮಾಡದಿರೋ ಮುಖ್ಯಮಂತ್ರಿ ಅಲ್ವಾ. ಇವರು ಹೋಗಿ ಕೆಲಸ ಮಾಡುವವರು ಬರಲಿ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದರು. 

ಕಾಂಗ್ರೆಸ್ ನಲ್ಲೆ ಒಡಕಿದೆ ಎನ್ನುತ್ತಾರೆ. ಇವರ ಮನೆಯಲ್ಲೆ ಎರಡೆರಡು ಕಡೆ ಮೀಟಿಂಗ್ ಮಾಡ್ತಾರಲ್ಲ. ಇದಕ್ಕೆ ಏನ್ ಹೇಳಬೇಕು..? ರಮೇಶ್ ಜಾರಕಿಹೋಳಿ ಮನೆಯಲ್ಲಿ ಒಂದು ಕಡೆ. ಇವರ ಮನೆಯಲ್ಲಿ ಒಂದು ಕಡೆ ಮೀಟಿಂಗ್ ಮಾಡ್ತಾರಲ್ಲ ಇದಕ್ಕೆ ಏನೆಂದು ಹೇಳಬೇಕು..?

ಬಿಜೆಪಿ ಶಾಸಕನ ವಿರುದ್ಧ ಹೆಚ್‌. ವಿಶ್ವನಾಥ್‌ ಕಿಡಿ..! .

ಬಹಳ ಗಟ್ಟಿ ಮಡಿಕೆ ಅನ್ನಬೇಕಾ..? ಸಿಎಂ ಮಂತ್ರಿ ಮಂಡಲ ಮಾಡುತ್ತಾರೋ ಮಂತ್ರಿ ಮಂಡಲ ಕೆಡವಿಕೊಳ್ತಾರೋ ಗೊತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇಲ್ಲ. ಸರ್ಕಾರ ಸಂಪೂರ್ಣ ಸತ್ತು ಹೋಗಿದೆ. ಆಡಳಿತದ ಕಡೆ ಗಮನ ಕೊಡುವುದು ಬಿಟ್ಟು ಚೇರ್ ಮನ್ ಗಳನ್ನ ಮಾಡಿಕೊಂಡಿದ್ದಾರೆ..

ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ, ಓಲ್ಢೇಜ್ ಪೆನ್ಷನ್ ಕೊಡೋಕೆ ದುಡ್ಡಿಲ್ಲ, ವಿಡೋ ಪೆನ್ಷನ್ ಕೊಡುತ್ತಿಲ್ಲ. ಅನೇಕ ಅಭಿವೃದ್ದಿ ಕಾರ್ಯಗಳಿಗೆ ದುಡ್ಡಿಲ್ಲ. ಅನಗತ್ಯ ಖರ್ಚಿಗೆ ಚೇರ್ ಮನ್ ಮಾಡ್ತಿದಾರೆ. 

ಅನಗತ್ಯ ಖರ್ಚುಗಳನ್ನ ಖಡಿತ ಮಾಡಿ ಎಂದು ನಾನು ಹೇಳಿದ್ದೆ. ಆದರೆ ಮಾಡಿಲ್ಲ. ಇವರು ಇನ್ನು 2ವರ್ಷ ಇದ್ದರೆ ರಾಜ್ಯ ಹಾಳು ಮಾಡಿ ರಾಜ್ಯ 20 ವರ್ಷ ಹಿಂದಕ್ಕೆ ತಳ್ಳುತ್ತಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.