ಬಿಜೆಪಿಯವರು ಏನು ಬೇಕಾದರೂ ಹೇಳಿಕೊಳ್ಳಲಿ, ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯವಿಲ್ಲ. ಲಿಂಗಾಯತ ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದ ಶಾಸಕ ಬಸವರಾಜ ರಾಯರೆಡ್ಡಿ  

ಕೊಪ್ಪಳ(ಆ.04): ಯಾರು ಏನೇ ಹೇಳಲಿ, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿಯೇ ಇರುತ್ತಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. 

Add Asianetnews Kannada as a Preferred SourcegooglePreferred

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ ರು, ಸಿಎಂ ರಾಜೀನಾಮೆ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿ,, ಬಿಜೆಪಿಯವರು ಏನು ಬೇಕಾದರೂ ಹೇಳಿಕೊಳ್ಳಲಿ, ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಕಿತ್ತೊಗೆಯಲು ಸಾಧ್ಯವಿಲ್ಲ. ಲಿಂಗಾಯತ ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. 

ಸಿಎಂ ಸಿದ್ದರಾಮಯ್ಯ ದಲಿತರ ಚರ್ಮದಿಂದ ಚಪ್ಪಲಿ ಮಾಡ್ಕೊಂಡು ಮೆರೆಯುತ್ತಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಒಕ್ಕಲಿಗರೂ ಸಹ ಬೆಂಬಲಿಸಿದ್ದಾರೆ. ಇದು ಜನರಿಂದ ಆಯ್ಕೆ ಯಾಗಿರುವ ಸರ್ಕಾರ, ಸಂಪೂರ್ಣ ಬಹುಮತ ಇರುವ ಸರ್ಕಾರ. ಹೀಗಾಗಿ ಈ ಸರ್ಕಾರವನ್ನು ಯಾರೂ ಮುಟ್ಟಲು ಸಾಧ್ಯವಿಲ್ಲ ಎಂದರು.