Asianet Suvarna News Asianet Suvarna News

ಸಂವಿಧಾನವೇ ನಮ್ಮ ಪಕ್ಷ, ಸ್ಪೀಕರ್ ಸ್ಥಾನ ಅತ್ಯಂತ ಶ್ರೇಷ್ಠ: ಯು.ಟಿ.ಖಾದರ್

ಸಂವಿಧಾನಬದ್ಧವಾದ ಘನತೆಯ ಸಭಾಧ್ಯಕ್ಷ ಸ್ಥಾನ ಅತ್ಯಂತ ಶ್ರೇಷ್ಠವಾಗಿದೆ. ಸ್ಪೀಕರ್ ಆದವರು ಹೆಚ್ಚು ಮಾತನಾಡದೇ ಪ್ರತಿಪಕ್ಷದ ಸ್ನೇಹಿತರಂತೆ ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. 

Speaker Position Most Excellent Says UT Khader gvd
Author
First Published Oct 24, 2023, 12:30 AM IST

ತೀರ್ಥಹಳ್ಳಿ (ಅ.24): ಸಂವಿಧಾನಬದ್ಧವಾದ ಘನತೆಯ ಸಭಾಧ್ಯಕ್ಷ ಸ್ಥಾನ ಅತ್ಯಂತ ಶ್ರೇಷ್ಠವಾಗಿದೆ. ಸ್ಪೀಕರ್ ಆದವರು ಹೆಚ್ಚು ಮಾತನಾಡದೇ ಪ್ರತಿಪಕ್ಷದ ಸ್ನೇಹಿತರಂತೆ ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಕರಾವಳಿಯಿಂದ ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ಸಂಜೆ ಆಗುಂಬೆ ಸಮೀಪದ ಹಸಿರುಮನೆ ಗ್ರಾಮದ ತಾಲೂಕು ಎಪಿಎಂಸಿ ಮಾಜಿ ಅಧ್ಯಕ್ಷ ಮಹಾಬಲೇಶ್ ಮನೆ ಆವರಣದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಂವಿಧಾನವೇ ನಮ್ಮ ಪಕ್ಷ ಮತ್ತು ಧರ್ಮವಾಗಿದ್ದು, ಅದಕ್ಕೆ ನಿಷ್ಠರಾಗಿ ಶಿಷ್ಠಾಚಾರಕ್ಕೆ ಅಪಚಾರವಾಗದಂತೆ ಕಾರ್ಯನಿರ್ವಹಿಸುವ ಬದ್ಧತೆ ನಮ್ಮ ಮೇಲಿದೆ. ಆಡಳಿತವನ್ನು ಎಚ್ಚರಿಸುವ ಸಲುವಾಗಿ ವಿರೋಧ ಪಕ್ಷದವರಿಗೆ ಹೆಚ್ಚಿನ ಅವಕಾಶವನ್ನೂ ಕಲ್ಪಿಸಬೇಕಾಗುತ್ತದೆ ಎಂದರು.

ಮಾಧ್ಯಮಗಳ ಮುಂದೆ ಶಾಸಕರ ಹೇಳಿಕೆ ಬಗ್ಗೆ ಡಿಕೆಶಿ ಕೇಳಿ: ಸಚಿವ ಚಲುವರಾಯಸ್ವಾಮಿ

ಕಾಡು ಪ್ರಾಣಿಗಳ ಹಾವಳಿ: ಇದೇ ವೇಳೆ ರೈತರು ನೀಡಿದ ಮನವಿಯನ್ನು ಸ್ವೀಕರಿಸಿದ ಖಾದರ್‌ ಅವರು, ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರಾಕೃತಿಕವಾಗಿ ಎದುರಾಗುವ ಸಮಸ್ಯೆಗಳಿಗೆ ರೈತರು ಎಂದಿಗೂ ಧೈರ್ಯಗುಂದಬಾರದು. ಈ ಭಾಗದ ಎಲೆಚುಕ್ಕಿ ಗಂಭೀರವಾಗಿದೆ. ಸರ್ಕಾರ ರೈತರ ನೆರವಿಗೆ ಬರುವ ಅಗತ್ಯವಿದೆ. ಈ ಭಾಗದ ಕಾಡುಪ್ರಾಣಿಗಳ ಹಾವಳಿ, ಇತರೆ ಸಮಸ್ಯೆಗಳ ಕುರಿತಂತೆ ಸಂಬಂಧಿಸಿದ ಸಚಿವರ ಗಮನಕ್ಕೂ ತರವುದಾಗಿ ಭರವಸೆ ನೀಡಿದರು.

ಮಂತ್ರಿ ಆಗಬಹುದು, ಆದರೆ ಮಹಾನ್ ವ್ಯಕ್ತಿಗಳು ಅಲಂಕರಿಸಿದ ಸಭಾಧ್ಯಕ್ಷ ಸ್ಥಾನದ ಘನತೆ ಬೇರೆಯೇ ಆಗಿದೆ. ಸಭಾ ನಡವಳಿಕೆಗೆ ವಿರುದ್ಧವಾದ ಬೆಳವಣಿಗೆಯನ್ನು ಸಹಿಸದೇ ನಿಷ್ಠುರವಾಗಿ ನಡೆದುಕೊಂಡಿದ್ದೇನೆ. ಆಡಳಿತ ಮತ್ತು ಪ್ರತಿಪಕ್ಷಗಳು ಜಗಳವಾಡಿಕೊಂಡು ಸ್ಪೀಕರ್ರೇ ಸರಿ ಇಲ್ಲ ಎಂದು ನಮ್ಮ ಮೇಲೇ ಬೀಳುವ ಸಂಧರ್ಭವೂ ಇದೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಮುಖಂಡರಾದ ಬಾಳೇಹಳ್ಳಿ ಪ್ರಭಾಕರ್, ಡಿ.ಎಸ್. ವಿಶ್ವನಾಥ ಶೆಟ್ಟಿ ಮುಂತಾದವರು ಇದ್ದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜನರ ಸಹಭಾಗಿತ್ವ ಅಗತ್ಯ: ವಿಧ್ಯಾರ್ಥಿಗಳ ಕೊರತೆಯಿಂದ ಬಡವಿದ್ಯಾರ್ಥಿಗಳು ಓದುವ ಸರ್ಕಾರಿ ಶಾಲೆಗಳು ಸೊರಗದಂತೆ ಅಭಿವೃದ್ಧಿಪಡಿಸಲು ಎಸ್‍ಡಿಎಂಸಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಅನಿವಾರ್ಯವಾಗಿದೆ. ಶೈಕ್ಷಣಿಕ ಅಭಿವೃದ್ದಿಯಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ ಎಂದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ತಾಲೂಕಿನ ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆಗೆ ಶನಿವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ಸಾರ್ವಜನಿಕರ ಸಹಕಾರದಿಂದ ಶಾಲೆಯೊಂದು ಅಭಿವೃದ್ಧಿ ಹೊಂದಬಹುದು ಎಂಬುದಕ್ಕೆ ಗುಡ್ಡೇಕೇರಿಯ ಈ ಶಾಲೆ ಮಾದರಿಯಾಗಿದೆ ಎಂದರು.

ಸರ್ಕಾರದೊಂದಿಗೆ ಸಾರ್ವಜನಿಕರ ಸಹಕಾರವೂ ಅಗತ್ಯ. ಶಿಕ್ಷಣಕ್ಕೆ ಆದ್ಯತೆ ನೀಡಿದಲ್ಲಿ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬಹುದಾಗಿದೆ. ಈ ಶಾಲೆಯ ಒಟ್ಟಾರೆ ಬೆಳವಣಿಗೆ ಪ್ರಶಂಸನೀಯವಾಗಿದೆ. ಬಡತನದಲ್ಲಿ ಹುಟ್ಟಿದವರು ಬಡತನದಲ್ಲೇ ಕೊನೆಯಾಗಬಾರದು ಎಂದೂ ಹೇಳಿದರು. ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಬದ್ಧತೆಯಿಂದ ಕಾರ್ಯನಿರ್ವಹಿಸುವ ಶಿಕ್ಷಕರು ಹಾಗೂ ಸಾರ್ವಜನಿಕರ ಬೆಂಬಲ ಪಡೆದಿರುವ ಗ್ರಾಮೀಣ ಭಾಗದಲ್ಲಿರುವ ಈ ಪ್ರೌಢಶಾಲೆಗೆ ಇಂಗ್ಲಿಷ್ ಮಾಧ್ಯಮ ವಿಭಾಗದ ಬಹಳ ವರ್ಷಗಳ ಪೋಷಕರ ಬೇಡಿಕೆಯಾಗಿದೆ. 

10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸಿಂಹ ಸ್ವಪ್ನವಾಗಿದ್ದ ಶ್ವಾನ ಟಿಪ್ಪುವಿಗೆ ಭಾವನಾತ್ಮಕ ಬೀಳ್ಕೊಡುಗೆ!

ಆದರೆ, ಶಾಲೆಯಲ್ಲಿ 200 ವಿದ್ಯಾರ್ಥಿಗಳು ಇರಬೇಕೆಂಬ ಶಿಕ್ಷಣ ಇಲಾಖೆ ನಿಯಮದಿಂದಾಗಿ ಇದಕ್ಕೆ ಹಿನ್ನಡೆಯಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಭಂದನೆಯನ್ನು ಸಡಿಲಗೊಳಿಸಿ ಆಂಗ್ಲ ಮಾಧ್ಯಮಕ್ಕೆ ಅನುಮತಿ ಕೊಡಿಸುವಂತೆ ಮನವಿ ಮಾಡಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್, ಆಗುಂಬೆ ಗ್ರಾಪಂ ಅಧ್ಯಕ್ಷ ಜಯಪ್ರಕಾಶ್ ಭಟ್, ಸದಸ್ಯರಾದ ಶಶಾಂಕ ಹೆಗ್ಡೆ, ಜಯೇಶ್ ಹೆಗ್ಡೆ, ಎಚ್.ಚಂದ್ರಶೇಖರ್, ಜಯರಾಂ ಹೆಗ್ಡೆ, ತಾಪಂ ಇಒ ಎಂ.ಶೈಲಾ, ಮುಖ್ಯೋಪಾಧ್ಯಾಯ ಮಂಜುಬಾಬು ಇದ್ದರು.

Follow Us:
Download App:
  • android
  • ios