ಧಾರವಾಡ ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ.180ರಲ್ಲಿ 20 ನಿಮಿಷ ಮತದಾರರನ್ನು ನಿಲ್ಲಿಸಿ ಊಟದ ವಿರಾಮ ನೀಡಿದ್ದು, ಇದೀಗ ಚರ್ಚೆಯ ವಿಷಯವಾಗಿದೆ. 

ಧಾರವಾಡ(ಮೇ.08): ತಾಂತ್ರಿಕ ಕಾರಣ ಹೊರತುಪಡಿಸಿ ಯಾವುದೇ ಕಾರಣಕ್ಕೂ ಮತದಾನ ಪ್ರಕ್ರಿಯೆ ನಿಲ್ಲಿಸುವಂತಿಲ್ಲ ಎಂಬ ಚುನಾವಣಾ ಆಯೋಗದ ನಿಯಮ ಇದ್ದರೂ ಇಲ್ಲಿಯ ಮತಗಟ್ಟೆಯ ಸಿಬ್ಬಂದಿ ಊಟ ಮಾಡುವುದಕ್ಕಾಗಿ ಕೆಲ ಹೊತ್ತು ಮತದಾನ ನಿಲ್ಲಿಸಿ ಯಡವಟ್ಟು ಮಾಡಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ.180ರಲ್ಲಿ 20 ನಿಮಿಷ ಮತದಾರರನ್ನು ನಿಲ್ಲಿಸಿ ಊಟದ ವಿರಾಮ ನೀಡಿದ್ದು, ಇದೀಗ ಚರ್ಚೆಯ ವಿಷಯವಾಗಿದೆ. 

Santosh Lad Interview: ಈ ಬಾರಿ ಪ್ರಹ್ಲಾದ ಜೋಶಿ ಗೆಲ್ತಾರಾ? ಈ ಬಗ್ಗೆ ಸಂತೋಷ್‌ ಲಾಡ್ ಹೇಳಿದ್ದೇನು ?

ಮಧ್ಯಾಹ್ನ 1.30ರ ಸುಮಾರಿಗೆ ಮತಗಟ್ಟೆಯ ಬಾಗಿಲು ಹಾಕಿಕೊಂಡು ಸಿಬ್ಬಂದಿ ಊಟ ಮಾಡಿದ್ದು, ಮತದಾನಕ್ಕೆ ಬಂದ ಮತದಾರರು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.