ಗ್ಯಾರಂಟಿ ಯೋಜನೆ ಕುರಿತು ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಹಾಗೂ ಈ ಬಗ್ಗೆ ಪ್ರಚಾರಾಂದೋಲನ ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸರ್ಕಾರದ ಈ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸಬೇಕು. ಇದಕ್ಕಾಗಿ ಜನವರಿ ಮಾಸದಿಂದ ಮಾರ್ಚ್ ವರೆಗೂ ಆಂದೋಲನವನ್ನು ಕೈಗೊಳ್ಳಬೇಕು. ಇದಕ್ಕೆ ಪಕ್ಷವೇ ರೂಪರೇಷೆ ರೂಪಿಸಬೇಕು. 

ಬೆಂಗಳೂರು(ನ.29):  ಲೋಕಸಭಾ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಬಿಂಬಿಸಲು ಕಾಂಗ್ರೆಸ್ ನಾಯಕತ್ವ ನಿರ್ಧರಿಸಿದ್ದು, ಇದಕ್ಕಾಗಿ ಜನವರಿ ಮಾಸದಿಂದ ಮೂರು ತಿಂಗಳವರೆಗೆ ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಕುರಿತು ಜಾಗೃತಿ ಆಂದೋಲನ ಕೈಗೊಳ್ಳಲು ತೀರ್ಮಾನಿಸಿದೆ.

Add Asianetnews Kannada as a Preferred SourcegooglePreferred

ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕದಲ್ಲಿ 5 ವರ್ಷವೂ ಗ್ಯಾರಂಟಿ ಯೋಜನೆ ಇರುತ್ತವೆ: ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆ ಕುರಿತು ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಹಾಗೂ ಈ ಬಗ್ಗೆ ಪ್ರಚಾರಾಂದೋಲನ ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸರ್ಕಾರದ ಈ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸಬೇಕು. ಇದಕ್ಕಾಗಿ ಜನವರಿ ಮಾಸದಿಂದ ಮಾರ್ಚ್ ವರೆಗೂ ಆಂದೋಲನವನ್ನು ಕೈಗೊಳ್ಳಬೇಕು. ಇದಕ್ಕೆ ಪಕ್ಷವೇ ರೂಪರೇಷೆ ರೂಪಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.