Asianet Suvarna News Asianet Suvarna News

ತಮಗೆ ಬೇಕಾದವರಿಗೆ ಮಾತ್ರ ಬಿಜೆಪಿ ಪಕ್ಷದಲ್ಲಿ ಸ್ಥಾನಮಾನ: ಕೆ.ಎಸ್‌.ಈಶ್ವರಪ್ಪ ಆಕ್ರೋಶ

ತಮಗೆ ಬೇಕಾದವರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ತಕ್ಷಣವೇ ಅಸಮಾಧಾನಿತರನ್ನು ಕರೆದು ಮಾತಾಡಬೇಕು. ಇಲ್ಲದಿದ್ದರೆ ಪಕ್ಷವನ್ನು ಕಟ್ಟಿದವರಿಗೆ ನೋವಾಗುತ್ತದೆ. ರಾಜ್ಯ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಪಕ್ಷದ ನಾಯಕತ್ವಕ್ಕೆ ಗೊತ್ತಿದೆ ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದರು.

Status in BJP party only for those who want it Says KS Eshwarappa At Shivamogga gvd
Author
First Published Aug 13, 2024, 11:01 PM IST | Last Updated Aug 13, 2024, 11:01 PM IST

ಶಿವಮೊಗ್ಗ (ಆ.13): ರಾಜ್ಯದ ಬಿಜೆಪಿಯ 12 ಜನ ಪ್ರಮುಖ ನಾಯಕರು ಬೆಳಗಾವಿಯಲ್ಲಿ ಸಭೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಟ್ಟು ಈ ರೀತಿ ಸಭೆಗಳು ನಡೆಯುತ್ತಿವೆ. ಹೀಗೆ ಸಭೆಗಳು ನಡೆಸುತ್ತ ಹೋದರೆ ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ ಇದೆ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆತಂಕ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ಈ ಎಲ್ಲಾ ಅಶಾಂತಿಗೆ ಕಾರಣವಾಗಿದೆ. ಬಿ.ವೈ.ವಿಜಯೇಂದ್ರ ಅವರದು ಏಕಪಕ್ಷೀಯ ನಿರ್ಧಾರವಾಗಿದೆ. ನಮ್ಮ ಕಾಲದಲ್ಲಿ ಹೀಗೆ ಇರಲಿಲ್ಲ. ಸಾಮೂಹಿಕ ನಾಯಕತ್ವ ಇತ್ತು. ಆದರೆ ಈಗ ಅದು ಇಲ್ಲ. ಸ್ವಜನ ಪಕ್ಷಪಾತವೇ ಮುಖ್ಯವಾಗುತ್ತಿದೆ. ಹೊಂದಾಣಿಕೆ ರಾಜಕಾರಣ ಎದ್ದು ಕಾಣುತ್ತಿದೆ. ಇದು ಇಲ್ಲಿಗೆ ಮುಗಿಯಬೇಕು ಎಂದರು.

ಸಭೆ ನಡೆಸಿದವರು ಅನುಭವಿಗಳು, ಪಕ್ಷವನ್ನು ಕಟ್ಟಿದವರು. ಅವರು ಆಗಸ್ಟ್ 17ರಿಂದ ಕೂಡಲಸಂಗಮದಿಂದ ಬಳ್ಳಾರಿಗೆ ಪಾದಯಾತ್ರೆ ಮಾಡುವುದಾಗಿ ಹೇಳಿದ್ದಾರೆ. ಆದರೆ, ಅವರು 12 ಜನರಿದ್ದಾರೋ, ಇನ್ನೂ ಹೆಚ್ಚಿದ್ದಾರೋ ಗೊತ್ತಿಲ್ಲ. ಈ ಪಾದಯಾತ್ರೆ ನಡೆದರೆ ರಾಜ್ಯದ ಎಲ್ಲಾ ತಾಲೂಕಿನಲ್ಲೂ ಎರಡೆರಡು ಪಾರ್ಟಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ವಿಜಯೇಂದ್ರ ಅಧ್ಯಕ್ಷರಾದ ನಂತರ ರಾಜ್ಯದಲ್ಲಿ ಲೋಕಸಭಾ 25 ಸ್ಥಾನ 17ಕ್ಕೆ ಕುಸಿಯಿತು. ಅದೇ ವಿಧಾನಸಭೆಯಲ್ಲಿ 66ಕ್ಕೆ ಕುಸಿಯಿತು. ಮೋದಿ ಹೆಸರು ಮತ್ತು ಬೆಂಬಲವಿದ್ದರೂ ಈ ಪರಿಸ್ಥಿತಿ ಎದುರಾಯಿತು. ಜೆಡಿಎಸ್ ಜೊತೆ ಸಖ್ಯ ಮಾಡಿದ ನಂತರ ಇಷ್ಟಾದರೂ ಸ್ಥಾನ ಸಿಕ್ಕಿದೆ. 

'ವೃಷಣದಲ್ಲಿ ರಕ್ತ, ಎದೆಯ ಮೂಳೆ ಮುರಿತ..' ಪೋಸ್ಟ್‌ ಮಾರ್ಟಮ್‌ನಲ್ಲಿ ದರ್ಶನ್ & ಗ್ಯಾಂಗ್ ರಾಕ್ಷಸತನ ಬಯಲು!

ಇಲ್ಲದಿದ್ದರೆ ಇಷ್ಟೂ ಸಿಟ್ ಬರ್ತಿರಲಿಲ್ಲ. ಒಂದೇ ಕುಟುಂಬದ ಕೈಗೆ ಅಧಿಕಾರ ಕೊಟ್ಡಿದ್ದೇ ಇದಕ್ಕೆ ಕಾರಣ ಎಂದು ಆರೋಪಿಸಿದರು. ಪಕ್ಷದಲ್ಲಿ ಮೊದಲು ಸಾಮೂಹಿಕ ನಾಯಕತ್ವ ಇತ್ತು. ಅದರೆ, ಈಗ ಆ ರೀತಿಯಲ್ಲಿ ಇಲ್ಲ. ಬರೀ ಕುಟುಂಬದ ರಾಜಕಾರಣ ಕಂಡು ಬರುತ್ತಿದೆ. ತಮಗೆ ಬೇಕಾದವರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ತಕ್ಷಣವೇ ಅಸಮಾಧಾನಿತರನ್ನು ಕರೆದು ಮಾತಾಡಬೇಕು. ಇಲ್ಲದಿದ್ದರೆ ಪಕ್ಷವನ್ನು ಕಟ್ಟಿದವರಿಗೆ ನೋವಾಗುತ್ತದೆ. ರಾಜ್ಯ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಪಕ್ಷದ ನಾಯಕತ್ವಕ್ಕೆ ಗೊತ್ತಿದೆ. ಆದರೆ, ಏಕೆ ಗಮನ ಹರಿಸುತ್ತಿಲ್ಲವೋ ಗೊತ್ತಿಲ್ಲ. ಹಾಗಾಗಿ ಆದಷ್ಟು ಬೇಗ ರಾಜ್ಯದ ಬಿಜೆಪಿಯ ಪರಿಸ್ಥಿತಿಯನ್ನು ಸರಿಪಡಿಸಬೇಕು ಎಂದರು.

ನಗರದಲ್ಲಿ ಪ್ರತಿಭಟನೆ: ಎಲ್ಲಾ ಬಡವರಿಗೂ ಸೂರು ನೀಡಬೇಕು, ಗೋವಿದಪುರ ಆಶ್ರಯ ಬಡಾವಣೆಯ ಮನೆಗಳನ್ನು ಪೂರ್ಣಗೊಳಿಸಿ ತಕ್ಷಣವೇ ಹಂಚಬೇಕು. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತಕ್ಷಣ ಮರುಪಡೆದು ಅನುದಾನಗಳಿಗೆ ಉಪಯೋಗಿಸಬೇಕು, ಪಾಲಿಕೆಗೆ ಶೀಘ್ರವೇ ಚುನಾವಣೆ ನಡೆಯಬೇಕು ಎಂಬುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಆ.13ರಂದು ಬೆಳಿಗ್ಗೆ 11ಕ್ಕೆ ದೈವಜ್ಞ ಕಲ್ಯಾಣ ಮಂದಿರದ ಆವರಣದಿಂದ ಮಹಾನಗರ ಪಾಲಿಕೆ ಆವರಣದವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಂಕರ್‌ಗನ್ನಿ, ಚನ್ನಬಸಪ್ಪ, ಬಾಲು, ಶ್ರೀಕಾಂತ್, ಮಹಾಲಿಂಗಶಾಸ್ತ್ರಿ, ಚಿದಾನಂದಮೂರ್ತಿ, ಕುಬೇಂದ್ರಪ್ಪ, ಜಾಧವ್, ಶಾಂತರಾಜು ಮತ್ತಿತರರು ಇದ್ದರು.ಅಸಮಾಧಾನಿತರಿಂದ ಪಾದಯಾತ್ರೆ ಬಿಜೆಪಿಯ ಅಸಮಾಧಾನಿತ 12 ಹಿರಿಯ ಮುಖಂಡರು ಸಭೆ ನಡೆಸಿ ಪಾದಯಾತ್ರೆಗೆ ನಿರ್ಧರಿಸಿದ್ದಾರೆ. ಸಭೆಯಲ್ಲಿ ಚರ್ಚಿಸಿರುವ ಬಗ್ಗೆ ಬಹಿರಂಗವಾಗಿ ಹೇಳುತ್ತಿಲ್ಲ. ಅನುಭವಿಗಳು, ಪಕ್ಷ ಕಟ್ಟಿದವರು, ನೋವು ಅನುಭವಿಸುತ್ತಿರುವವರು ಈ ಸಭೆ ನಡೆಸಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದರು.

ಇವತ್ತು 12 ಜನರಿರಬಹುದು. ಹಾಗಂತ ಪಕ್ಷದ ವರಿಷ್ಟರು ನಿರ್ಲಕ್ಷ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಪಕ್ಷ ಕುಂಠಿತವಾಗುತ್ತ ಹೋಗುತ್ತದೆ. ಕೂಡಲೇ ಕೇಂದ್ರದ ನಾಯಕರು ಈ ಬಗ್ಗೆ ಗಮನಹರಿಸಿ ಕೂಡಲ ಸಂಗಮದಿಂದ ಬಳ್ಳಾರಿಯ ತನಕ ಪಾದಯಾತ್ರೆಗೆ ಹೊರಟಿರುವ ಬಿಜೆಪಿ ನಾಯಕರನ್ನು ಕರೆದು ಚರ್ಚಿಸಿ ಅವರ ನೋವುಗಳನ್ನು ಆಲಿಸಿ ಅಗತ್ಯ ಮುನ್ಸೂಚನೆ ನೀಡಬೇಕು ಎಂದರು. ಈ ಎಲ್ಲಾ ಅಸಮಾಧಾನಗಳಿಗೆ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬವೇ ಪ್ರಮುಖ ಕಾರಣ ಎಂದು ನೋವಿನಿಂದ ಇರುವ ನಾಯಕರು ಮತ್ತು ಕಾರ್ಯಕರ್ತರು ಹೇಳುತ್ತಿದ್ದಾರೆ. ಯತ್ನಾಳ್, ಅರವಿಂದ ಲಿಂಬಾವಳಿ, ರಮೇಶ್ ಜಾರಕಿ ಹೊಳಿ, ಸಿದ್ದೇಶ್, ಶಶಿಕಲಾ ಜೊಲ್ಲೆ, ಕುಮಾರ ಬಂಗಾರಪ್ಪ ಸೇರಿದಂತೆ ಸುಮಾರು 12ಕ್ಕೂ ಹೆಚ್ಚು ಬಿಜೆಪಿ ನಾಯಕರು ಈ ನಿರ್ಧಾರ ತಾಳಿದ್ದಾರೆ. 

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಯ್ಕೆ!

ಕೇಂದ್ರ ನಾಯಕರಿಗೆ ಬಿ.ಎಸ್.ಯಡಿಯೂರಪ್ಪ ಕುಟುಂಬದ ಮೇಲೆ ಯಾಕಿಷ್ಟು ಮೋಹ ಎಂದೇ ಅರ್ಥವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಸಾಕಷ್ಟು ದಾಳಿ, ದಬ್ಬಾಳಿಕೆ ನಡೆದಿದೆ. ಇಸ್ಕಾನ್ ಸೇರಿದಂತೆ ಅನೇಕ ದೇವಾಲಯಗಳನ್ನು ನಾಶಪಡಿಸಲಾಗಿದೆ. ಹಿಂದುಗಳು ಏನು ಅನ್ಯಾಯ ಮಾಡಿದ್ದರು ಈ ರೀತಿ ನಡೆದುಕೊಳ್ಳಲು ತಕ್ಷಣವೇ ವಿಶ್ವಸಂಸ್ಥೆ ತಕ್ಷಣವೇ ಮಧ್ಯ ಪ್ರವೇಶಿಸಬೇಕು. ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಬೇಕು ಎಂದು ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದರು. ಭಾರತದಲ್ಲೂ ಈ ರೀತಿಯ ಘಟನೆ ಆಗಬಹುದು ಎಂದು ಕಾಂಗ್ರೆಸ್‌ನ‌ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಹೀಗಾದರೆ ಹಿಂದೂಗಳು ಸುಮ್ಮನಿರುತ್ತಾರಾ, ಮುಸ್ಲಿಮರ ಪರಿಸ್ಥಿತಿ ಕಷ್ಟಕರವಾಗುತ್ತದೆ ಎಂದರು.

Latest Videos
Follow Us:
Download App:
  • android
  • ios