Asianet Suvarna News Asianet Suvarna News

ಖರ್ಗೆ, ರಾಜ್ಯಸಭಾಧ್ಯಕ್ಷರ ನಡುವೆ ನೇರ ಜಟಾಪಟಿ..!

ವರ್ಣ ವ್ಯವಸ್ಥೆ ತರಬೇಡಿ. ಅದಕ್ಕಾಗಿಯೇ ಜೈರಾಂ ರಮೇಶ್‌ ಅವರನ್ನು ತುಂಬಾ ಬುದ್ಧಿವಂತ. ನಾನು ದಡ್ಡ ಎನ್ನುತ್ತಿದ್ದೀರಿ’ ಎಂದರು. ಇದಕ್ಕೆ ಆಕ್ರೋಶಗೊಂಡ ಧನಕರ್,‘ ಖರ್ಗೆ ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಸಂಸತ್‌ನಲ್ಲಿ ಎಂದೂ ಇಲ್ಲಿಯವರೆಗೆ ಸಭಾಪತಿ ಪೀಠ ಇಷ್ಟು ಅವಮಾನಕ್ಕೆ ಗುರಿ ಆಗಿಲ್ಲ ಎಂದ ರಾಜ್ಯಸಭೆ ಸಭಾಪತಿ ಜಗದೀಪ್‌ ಧನಕರ್‌ 

Talkwar Between Mallikarjun Kharge and Rajya Sabha Speaker  Jagdeep Dhankhar grg
Author
First Published Jul 3, 2024, 4:26 AM IST

ನವದೆಹಲಿ(ಜು.03):  ರಾಜ್ಯಸಭೆ ಮಂಗಳವಾರ ಸಭಾಪತಿ ಜಗದೀಪ್‌ ಧನಕರ್‌ ಮತ್ತು ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು. ‘ಕಾಂಗ್ರೆಸ್‌ ಸಂಸದರು ಶಿಸ್ತಿನಿಂದ ವರ್ತಿಸುವಂತಾಗಲು ಜೈರಾಂ ರಮೇಶ್‌ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಜಾಗವನ್ನು ತುಂಬಬೇಕು’ ಎಂದು ಧನಕರ್ ವ್ಯಂಗ್ಯವಾಡಿದ್ದು ಇಬ್ಬರ ಜಟಾಪಟಿಗೆ ಕಾರಣವಾಯಿತು.

ರಾಷ್ಟ್ರಪತಿ ಭಾಷಣದ ಬಗ್ಗೆ ಕಾಂಗ್ರೆಸ್‌ನ ಪ್ರಮೋದ್‌ ತಿವಾರಿ ಮಾತನಾಡುವಾಗ, ‘ಖಚಿತಪಡದ ವಿಷಯಗಳ ಬಗ್ಗೆ ಪ್ರಸ್ತಾಪಿಸಬೇಡಿ’ ಎಂದು ಧನಕರ್‌ ಹೇಳಿದರು. ಆಗ ಜೈರಾಂ ರಮೇಶ್‌ ಅವರು ‘ಪರೀಶಿಲಿಸಲಾಗುವುದು’ ಎಂದರು. ಆಗ ಧನಕರ್‌ ಅವರು, ‘ನೀವು ಜಾಣ, ಪ್ರತಿಭಾವಂತ ಹಾಗೂ ದೈವದತ್ತ ವ್ಯಕ್ತಿ. ಖರ್ಗೆ ಅವರ ಜಾಗವನ್ನು ತಕ್ಷಣವೇ ನೀವು ತುಂಬಬೇಕು. ಏಕೆಂದರೆ ಅವರು ಮಾಡುವ ಕೆಲಸ ನೀವು ಮಾಡತ್ತಿದ್ದೀರಿ’ ಎಂದರು.

ಅಂದೊಂದಿತ್ತು ಕಾಲ ಭ್ರಷ್ಟಾಚಾರದ ಮೇಳ, ಗದ್ದಲದ ನಡುವೆ ಲೋಕಸಭೆಯಲ್ಲಿ ವಿಪಕ್ಷಕ್ಕೆ ಮೋದಿ ಗುದ್ದು!

ಇದಕ್ಕೆ ಸಿಟ್ಟಿಗೆದ್ದ ಖರ್ಗೆ,‘ವರ್ಣ ವ್ಯವಸ್ಥೆ ತರಬೇಡಿ. ಅದಕ್ಕಾಗಿಯೇ ಜೈರಾಂ ರಮೇಶ್‌ ಅವರನ್ನು ತುಂಬಾ ಬುದ್ಧಿವಂತ. ನಾನು ದಡ್ಡ ಎನ್ನುತ್ತಿದ್ದೀರಿ’ ಎಂದರು. ಇದಕ್ಕೆ ಆಕ್ರೋಶಗೊಂಡ ಧನಕರ್,‘ ಖರ್ಗೆ ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಸಂಸತ್‌ನಲ್ಲಿ ಎಂದೂ ಇಲ್ಲಿಯವರೆಗೆ ಸಭಾಪತಿ ಪೀಠ ಇಷ್ಟು ಅವಮಾನಕ್ಕೆ ಗುರಿ ಆಗಿಲ್ಲ’ ಎಂದರು.

Latest Videos
Follow Us:
Download App:
  • android
  • ios