ಜೆಡಿಎಸ್‌ನ ಮತ್ತೋರ್ವ ಶಾಸಕರೊಬ್ಬರಿಗೆ ಕೊರೋನಾ ವಕ್ಕರಿಸಿದ್ದು, ಈ ಬಗ್ಗೆ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದು ಹೀಗೆ.

ತುಮಕೂರು, (ಸೆ.15): ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಪಡೆಯುತ್ತಿದ್ದು, ಸಂಪರ್ಕಕ್ಕೆ ಬಂದವರಿಗೆ ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ. 

ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಸೋಂಕು 

ಈ ಕುರಿತು ಟ್ವಿಟ್‌ ಮಾಡಿರುವ ಅವರು, ನೆನ್ನೆ ಜ್ವರ ಇದ್ದ ಹಿನ್ನೆಲೆಯಲ್ಲಿ ಕರೋನ ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಅಂತ ಬರೆದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಟ್ವೀಟ್ ಮಾಡಿ ಬೇಗ ಗುಣಮುಖರಾಗಲೆಂದು ಹಾರೈಸಿದ್ದಾರೆ. ಇಂದು ಗೌರಿಶಂಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅವರು ಈ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಜನರ ಸೇವೆಯಲ್ಲಿ ಮತ್ತೆ ತೊಡಗುವಂತಾಗಲಿ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Scroll to load tweet…

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಡಿ.ಸಿ. ಗೌರಿಶಂಕರ್ ಅವರು ಕಳೆದ 6 ತಿಂಗಳಿನಿಂದ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ಸಹಾಯ ಮಾಡಿದ್ದಾರೆ. ನಾನೂ ಅವರೊಂದಿಗೆ ಹಲವು ಬಾರಿ ಕೈಜೋಡಿಸಿದ್ದೇನೆ ಎಂದಿದ್ದಾರೆ.