Asianet Suvarna News Asianet Suvarna News

ರಾಜ್ಯದ ಜನತೆ ಮುಂದೆ ಸಿದ್ದರಾಮಯ್ಯ ಸರ್ಕಾರ ಬೆತ್ತಲಾಗಿದೆ: ಕೇಂದ್ರ ಸಚಿವ ನಾರಾಯಣಸ್ವಾಮಿ

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಗೆ ಸಂಪುಟ ನಿರ್ಧಾರ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. 

Union Minister A Narayanaswamy Slams On Congress Govt At Tumakuru gvd
Author
First Published Nov 24, 2023, 9:23 PM IST

ತುಮಕೂರು (ನ.24): ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಗೆ ಸಂಪುಟ ನಿರ್ಧಾರ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ ಎಂದರು. ನ್ಯಾಯಾಲಯದ ಮುಂದೆಯೇ ಕ್ಲೀನ್ ಚಿಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. 

ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ ಎಂದರು. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್, ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸುತ್ತೇನೆ. ಒಂದು ಸಲ ಎಫ್.ಐಆರ್ ಆದ್ಮೇಲೆ ಚಾರ್ಜ್ ಶೀಟ್ ಕೊಟ್ಟರೆ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು ಎಂದರು. ಪ್ರಕರಣಗಳು ಒಂದು ಸಲ ಕೋರ್ಟ್ ಗೆ ಹೋದ್ರೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ಕ್ಯಾಬಿನೆಟ್ ಗೆ ಯಾವುದೇ ಅಧಿಕಾರ ಇಲ್ಲ ಅನ್ನೋದು ನನ್ನ ಅಭಿಪ್ರಾಯ ಎಂದು ಹೇಳಿದರು. ಕಾನೂನಾತ್ಮಕವಾಗಿ ಪ್ರಕ್ರಿಯೆ ನಡೆದಿರಲಿಲ್ಲ ಎಂಬ ಕಾಂಗ್ರೆಸ್ ಸಮರ್ಥನೆ ವಿಚಾರ. 

ಡಿ.ಕೆ.ಸುರೇಶ್ ಆಯ್ಕೆಯಾಗದಿದ್ದರೆ ಹೇಮಾವತಿ ಮರೀಚಿಕೆ: ಶಾಸಕ ಬಾಲಕೃಷ್ಣ

ಇಷ್ಟು ದಿನ ಏನ್ ಮಾಡ್ತಿದ್ರಿ. ಸ್ಪೀಕರ್ ಅನುಮತಿ ಪಡೆದೆ ಅಥವಾ ಅಂದಿನ ಅಡ್ವಕೇಟ್ ಜನರಲ್ ಅಡ್ವರ್ಸ್ ರಿಪೋರ್ಟ್ ಇದ್ದಾಗಲೂ ಕೋರ್ಟ್ ಗೆ ಬಂದಿದೆ ಎಂದರು. ಡಿಕೆ ಶಿವಕುಮಾರ್ ಅವರ ವಿರುದ್ಧ ಅನೇಕ ಪ್ರಕರಣಗಳಿವೆ. ಇದನ್ನು ನ್ಯಾಯಾಲಯದಲ್ಲೇ ವಜಾ ಮಾಡಿಸಬಹುದಿತ್ತು. ರಾಜ್ಯ ಸರ್ಕಾರಕ್ಕೆ ನೀವೇ ಯಾಕೆ ಕಪ್ಪು ಚುಕ್ಕೆಯಿಟ್ರಿ ಎಂದರು. ಲೋಕಸಭೆ ಚುನಾವಣೆಗೂ ಮೊದಲೇ ಒಳ ಮೀಸಲಾತಿ ಆಗುತ್ತೆ. ರಾಜ್ಯ ಸರ್ಕಾರದ ಕೆಲಸ ಏನಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಒಳ ಮೀಸಲಾತಿ ಹೆಚ್ಚಳ ಮಾಡಿತ್ತು, ಅದು ಜಾರಿಯಾಗಿದೆ ಎಂದರು. ಬ್ಯಾಕ್ ಲಾಗ್ ಜಾರಿಯಾಗಿದೆ. ಕೆಪಿಎಸ್ಸಿ ಉದ್ಯೋಗದಲ್ಲಿ ಮೀಸಲಾತಿ ಘೋಷಣೆ ಮಾಡಬೇಕಿದೆ. 

ಒಳ ಮೀಸಲಾತಿಯಲ್ಲಿ ಒಂದು ಹಂತದಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ತಿಳಿಸಿದರು. ಅರುಣ್ ಮಿಶ್ರ ತೀರ್ಪು ಅನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಅರುಣ್ ಮಿಶ್ರಾ ರೆಕಮಂಡೇಷನ್ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಚರ್ಚೆ ಆಗುತ್ತೆ. ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ ಎಂದರು. ಒಳ ಮೀಸಲಾತಿ ಹೋರಾಟಗಾರರಿಗೆ ಅದು ಮೊದಲನೇ ಗೆಲವು.ಅಟಾರ್ನಿ ಜನರಲ್ ಅವರೇ ಒಳ ಮೀಸಲಾತಿ ಪರವಾಗಿ ಬಂದಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನಿ, ಅಮಿತ್ ಷಾ ಒಪ್ಪಿಕೊಂಡಿದ್ದಾರೆ ಎಂದರು. ಇಡೀ ದೇಶದಲ್ಲಿ ಒಳ ಮೀಸಲಾತಿಗೆ ನ್ಯಾಯ ಸಿಗಲಿದೆ ಎಂದರು. ಜಾತಿಗಣತಿ ವಿಚಾರದಲ್ಲಿ  ಜಾತಿಗಣತಿ ಅವಶ್ಯಕತೆಯಿದೆ. ಜಾತಿಗಣತಿ ಜೊತೆಗೆ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಲಾಗಿತ್ತು. ಸಿಎಂಗೆ ಬದ್ಧತೆಯಿರಬೇಕು ಎಂದರು. ಚುನಾವಣೆಗೆ ಮೊದಲು ಹೇಳಿದ್ದರು. 

ಅಧಿಕಾರಿಗಳು ಪ್ರಾಮಾಣಿಕ ಜನಸೇವೆ ಮಾಡಿ: ಎಚ್.ಡಿ.ಕುಮಾರಸ್ವಾಮಿ

ಜಾತಿ ಗಣತಿಗೆ  1160 ಕೋಟಿ ಖರ್ಚು ಮಾಡಿದ್ರು. ಪದೇ ಪದೇ ಮಾಧ್ಯಮದಲ್ಲಿ ನಾನು ಮಾಡ್ತೀನಿ ಅಂತ ಹೇಳೋದು ಶೋಭೆ ತರಲ್ಲ. ವರದಿ ಮಾಡಿ ಪ್ರಿಂಟ್ ಹಾಕಿ, ಸಹಿ ಹಾಕಿ ಎಲ್ಲಾ ಅಗಿದೆ ಎಂದರು. ಸಹಿ ಹಾಕಿಲ್ಲ ಅನ್ನೋದು ಒಂದು ಭಾಗ, ಮೂಲ ಪ್ರತಿ ನಾಪತ್ತೆಯಾಗಿದೆ ಅಂತ ಚರ್ಚೆ ಆಗುತ್ತಿದೆ. ಟ್ರಜರಿಯಲ್ಲಿ ಆಯ್ತಾ, ಕಚೇರಿಯಲ್ಲಿ ನಾಪತ್ತೆ ಆಯ್ತಾ. ಯಾರ ಕಸ್ಟಡಿಯಲ್ಲಿ ಇದ್ದಾಗ ಮೂಲ ಪ್ರತಿ ನಾಪತ್ತೆ ಆಯ್ತು , ಅನ್ನೋ ಬಗ್ಗೆ ತನಿಖೆಗೆ ಆದೇಶ ಮಾಡಲಿಲ್ಲ ಎಂದರು. ದೂರು, ಎಫ್.ಐ.ಆರ್ ಆಗಲಿಲ್ಲ. ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಕೆಲಸ ಸಿಎಂ ಮಾಡ್ತಿದ್ದಾರೆ. ವರದಿ ಹೊರ ಬಂದರೆ ಏನು ಆಗಲ್ಲ. 2011ರ ಬಳಿಕ ಜನಗಣತಿ ಆಗಿಲ್ಲ ಎಂದರು. ಪ್ರತಿ ಕುಟುಂಬದಲ್ಲಿ ಆಧಾರ್ ಕಾರ್ಡ್ ಯಿದೆ. ರಾಜ್ಯ ಜನತೆಯ ಮಾಹಿತಿ ಪಡೆಯಲು ಯಾವುದೇ ಗೊಂದಲವಿಲ್ಲ. ವರದಿಗಳು ಸದನದಲ್ಲಿ ಚರ್ಚೆ ಆಗಬೇಕು.ತಪ್ಪಾಗಿರುವ ಬಗ್ಗೆ ಸದನದಲ್ಲಿ ಚರ್ಚೆಯಾಗಲಿ ಎಂದರು.

Follow Us:
Download App:
  • android
  • ios