ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಭಾನುವಾರ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು,  ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆಯಬಹುದು ಎಂಬ ವದಂತಿ ಮತ್ತಷ್ಟು ದಟ್ಟವಾಗಿದೆ.

ಬೆಂಗಳೂರು (ಜ.8): ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಭಾನುವಾರ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆಯಬಹುದು ಎಂಬ ವದಂತಿ ಮತ್ತಷ್ಟು ದಟ್ಟವಾಗಿದೆ.

Add Asianetnews Kannada as a Preferred SourcegooglePreferred

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಂತರ ಸಂಪುಟ ವಿಸ್ತರಣೆ ಸಾಧ್ಯತೆಯಿದೆ. ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಲು ನರೇಂದ್ರ ಸಿಂಗ್ ತೋಮರ್ ರಾಜೀನಾಮೆ ನೀಡಿದ ನಂತರ ತೆರವಾಗಿರುವ ಕೃಷಿ ಮತ್ತು ರೈತ ಕಲ್ಯಾಣ ಖಾತೆಯನ್ನು ಕುಮಾರಸ್ವಾಮಿ ಅವರಿಗೆ ನೀಡಬಹುದು ಎನ್ನಲಾಗುತ್ತಿದೆ. ಮುಂಡಾ ಈಗ ಹೆಚ್ಚುವರಿಯಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೋದಿ ಭೇಟಿ ನೀಡಿದ ಬೆನ್ನಲ್ಲೇ ಮಂಗಳೂರು-ಲಕ್ಷದ್ವೀಪ ಪ್ರವಾಸಿ ಹಡಗು ಸಂಚಾರಕ್ಕೆ ಸಂಸದ ನಳೀನ್ ಸೂಚನೆ!

ಕುಮಾರಸ್ವಾಮಿ ಕೇಂದ್ರ ಸಂಪುಟ ಸೇರ್ಪಡೆಯಿಂದ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಂಗಪಕ್ಷ ಜೆಡಿಎಸ್‌ನ ನೈತಿಕತೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದಲ್ಲಿ ಉಭಯ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. ''ನನಗೆ ಕೇಂದ್ರ ಸಚಿವನಾಗುವ ಚಿಂತೆ ಇಲ್ಲ. ಕಾಂಗ್ರೆಸ್ ನ್ನು ಸೋಲಿಸಿ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಕುಮಾರಸ್ವಾಮಿ ಮುಂಡಾ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದರು. 

ಬಿಜೆಪಿಯಿಂದ ನಾನು ಅಂತರ ಕಾಯ್ದುಕೊಂಡಿಲ್ಲ; ಅವರೇ ನನ್ನನ್ನು ಗುರುತಿಸದಿದ್ದರೆ ಏನ್ಮಾಡಲಿ?: ನಂಜುಂಡಿ ಬೇಸರ