Asianet Suvarna News Asianet Suvarna News

ಬಿಜೆಪಿ-ಜೆಡಿಎಸ್‌ ಮೈತ್ರಿ: ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಿಷ್ಟು

ಜೆಡಿಎಸ್. ಪಕ್ಷವು ಎನ್.ಡಿ.ಎ ಜೊತೆಗೊಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಿನಾಯವಾಗಿ ಸೋಲಿಸಿ, ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲಿದ್ದೇವೆ. ಭವ್ಯ ಭಾರತದ ಗತವೈಭವ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಭಗವಂತ ಖೂಬಾ 

Union Minister Bhagwanth Khuba React to BJP JDS Alliance grg
Author
First Published Sep 23, 2023, 3:00 AM IST

ಬೀದರ್(ಸೆ.23): ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮೆಚ್ಚಿ, ಎನ್.ಡಿ.ಎ ಮೈತ್ರಿಕೂಟದ ಜೊತೆಗೆ ರಾಜ್ಯದ ಜೆಡಿಎಸ್ ಬೆಂಬಲಿಸಿ, ದೇಶ ನಿರ್ಮಾಣ ಕಾರ್ಯಕ್ಕೆ ಸಾಥ್ ನೀಡಿ, ದೇಶ ವಿರೋಧಿ, ಧರ್ಮ ವಿರೋಧಿ, ಸಮಾಜ ವಿರೋಧಿ ನೀತಿಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಲು ನಮ್ಮ ಜೊತೆ ಕೈಜೋಡಿಸಿರುವುದು ಸಂತಸದ ವಿಷಯವಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, ಜೆಡಿಎಸ್. ಪಕ್ಷವು ಎನ್.ಡಿ.ಎ ಜೊತೆಗೊಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಹಿನಾಯವಾಗಿ ಸೋಲಿಸಿ, ದೇಶಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲಿದ್ದೇವೆ. ಭವ್ಯ ಭಾರತದ ಗತವೈಭವ ಮುಂದುವರಿಯಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ: ಕಾರ್ಯಕರ್ತರು ಒಂದಾಗ್ತಾರಾ?, ವರಿಷ್ಠರ ನಡೆಯಿಂದ ಭಾರೀ ಗೊಂದಲ..!

ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಆಡಳಿತ ವಿರೋಧಿ, ರೈತ ವಿರೋಧಿ ನೀತಿಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ನಾವುಗಳು ಸೇರಿ ಕೆಲಸ ಮಾಡೊಣ, ಜನಜಾಗೃತಿ ಮಾಡೋಣವೆಂದು ಸಚಿವ ಖೂಬಾ ಜೆ.ಡಿ.ಎಸ್. ಮುಖಂಡರಿಗೆ ಕರೆ ಕೊಟ್ಟಿದ್ದಾರೆ.

ಬೀದರ ಲೋಕಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ನ ಸಚಿವರ ಭ್ರಷ್ಟಾಚಾರ, ದ್ವೇಷದ ರಾಜಕಾರಣ, ಬಡವರ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ಒತ್ತು ಕೊಡದೆ ಅನುದಾನ ತರಲು ವಿಫಲರಾಗುತ್ತಿರುವ ಸಚಿವರುಗಳ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಿ, ಬಡವರಿಗೆ, ದಿನದಲಿತರಿಗೆ, ರೈತರಿಗೆ, ಮಹಿಳೆಯರಿಗೆ, ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸಿಕೊಡೊಣ ಹಾಗೂ ಜಿಲ್ಲೆಯ ಅಭಿವೃದ್ದಿಗಾಗಿ ಹೊರಾಡೋಣವೆಂದ ಅವರು, ಬಿಜೆಪಿ ಜೊತೆ ಸೇರಿ ಕೆಲಸ ಮಾಡಲು ಎಲ್ಲಾ ಜೆಡಿಎಸ್ ನಾಯಕರಿಗೆ, ಮುಖಂಡರಿಗೆ, ಕಾರ್ಯಕರ್ತರಿಗೆ ಸಚಿವ ಖೂಬಾ ಸ್ವಾಗತಿಸಿದ್ದಾರೆ.

Follow Us:
Download App:
  • android
  • ios