Asianet Suvarna News Asianet Suvarna News

ಮಾಜಿ ಸಿಎಂ ಎಚ್‌ಡಿಕೆ-ಸಿದ್ದು ಜಟಾಪಟಿ: ಇಬ್ಬರಿಗೂ ಬುದ್ದಿ ಹೇಳಿದ ಕೇಂದ್ರ ಸಚಿವ

ಮಾಜಿ ಮುಖ್ಯಮಂತ್ರಿಗಳಾದವರು ತಮ್ಮ ಇತಿಮಿತಿಯಲ್ಲಿ ಮಾತುಗಳನ್ನಾಡಬೇಕು ಎಂದು ಕೇಂದ್ರ ಸಚಿವರೊಬ್ಬರು ಕಿವಿ ಮಾತು ಹೇಳಿದ್ದಾರೆ.

Union Minister DV Sadananda Gowda Reacts On Siddaramaiah Kumaraswamy allegations rbj
Author
Bengaluru, First Published Dec 19, 2020, 2:51 PM IST

ಬೆಂಗಳೂರು, (ಡಿ.19): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌ಡಿ ಕುಮಾರಸ್ವಾಮಿ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದ್ದು, ಇದಕ್ಕೆ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ ಬುದ್ಧಿ ಹೇಳಿದ್ದಾರೆ.

ಚಾಮುಂಡೇಶ್ವರಿ ಚುನಾವಣೆಯಲ್ಲಿ ನನ್ನ ಸೋಲಿಗೆ ಜೆಡಿಎಸ್-ಬಿಜೆಪಿ ಒಳ ಒಪ್ಪಂದ ಅಂತೆಲ್ಲಾ ಸಿದ್ದರಾಮಯ್ಯನವರು ಹೇಳಿದ್ದಾರೆ.

ಈ ಬಗ್ಗೆ ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ,  ರಾಜ್ಯದ ಮುಖ್ಯಮಂತ್ರಿಯಾದವರು, ಒಂದು ಪಕ್ಷದ ಹಿರಿಯರಾದವರು ತಮ್ಮ ಇತಿಮಿತಿಯಲ್ಲಿ ಮಾತನ್ನಾಡಬೇಕು. ಆದರೆ ಮಾಜಿ ಮುಖ್ಯಮಂತ್ರಿಗಳಿಬ್ಬರೂ ತಮ್ಮ ಮಿತಿಯನ್ನು ಮೀರಿ ಮಾತನಾಡಿದ್ದಾರೆ. ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದರು.

ಕಾಂಗ್ರೆಸ್‌ಗೆ ಮುಟ್ಟಿ ನೋಡಿಕೊಳ್ಳುವ ಹಾಗೆ ಟಕ್ಕರ್ ಕೊಟ್ಟ ಟಗರು ಸಿದ್ದು; ಕೈ ಪಾಳಯಕ್ಕೆ ಬಿತ್ತು ಗುದ್ದು!

ಎಚ್.ಡಿ.ಕುಮಾರಸ್ವಾಮಿ ಅವರು ದೊಡ್ಡ ರಾಜಕೀಯ ಕುಟುಂಬದಿಂದ ಬಂದವರು. ಅವರ ಪಕ್ಷ ಹಿನ್ನಡೆಯಾಗಿದೆ ಎಂಬ ಕಾರಣಕ್ಕೆ ಏನೇನೊ ಹೇಳುತ್ತಾರೆ. ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಭಯದಲ್ಲಿ ಏನೇನೋ ಮಾತನಾಡುತ್ತಾರೆ ಎಂದು ಹೇಳಿದರು.

Follow Us:
Download App:
  • android
  • ios